
ನವದೆಹಲಿ(ಮೇ,.26): 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರಕ್ಕೆ ಮರಳಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಮೇ 30ರಂದು ಒಂದು ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ 750ಕ್ಕೂ ಹೆಚ್ಚು ವಚ್ರ್ಯುವಲ್(ಡಿಜಿಟಲ್ ಮಾಧ್ಯಮ) ರಾರಯಲಿಗಳ ಮೂಲಕ ಸಂಭ್ರಮಾಚರಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ.
ಅಲ್ಲದೆ, ರಾಷ್ಟ್ರ ಮತ್ತು ರಾಜ್ಯದ ನಾಯಕತ್ವದಲ್ಲಿ ದೇಶಾದ್ಯಂತ 1000ಕ್ಕೂ ಹೆಚ್ಚು ವಿಡಿಯೋ ಕಾನ್ಫರೆನ್ಸ್ ನಡೆಸಲು ತೀರ್ಮಾನಿಸಲಾಗಿದೆ. ಕೊರೋನಾ ಹೋರಾಟವನ್ನು ಅತ್ಯಂತ ಪರಿಣಾಮಕಾರಿಯಾಗಿ ನಿರ್ವಹಿಸಿದ ಮೋದಿ ಸರ್ಕಾರದ ಸಾಧನೆ ಕುರಿತು ವಿಡಿಯೋ ಹಾಗೂ ಫೋಟೋಗಳ ಮೂಲಕ ಪ್ರಚಾರ ಮಾಡಲು ನಿರ್ಧರಿಸಿದೆ. ಜೊತೆಗೆ, ಬಿಜೆಪಿಯ ಸಾಧನೆಯ ಪಟ್ಟಿಯನ್ನು ಸಾರ್ವಜನಿಕರಲ್ಲಿ ಪ್ರಚುರಪಡಿಸುವಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ಬಿಜೆಪಿ ರಾಷ್ಟಾ್ರಧ್ಯಕ್ಷ ಜೆ.ಪಿ ನಡ್ಡಾ ಸೂಚಿಸಿದ್ದಾರೆ.
ಅಲ್ಲದೆ ಈ ಸಂದರ್ಭದಲ್ಲಿ ಪ್ರತೀ ತಾಲೂಕುಗಳಲ್ಲಿ ಪ್ರತಿಯೊಬ್ಬರಿಗೂ ಕೊರೋನಾದಿಂದ ತಮ್ಮನ್ನು ಕಾಪಾಡಿಕೊಳ್ಳಲು ಅಗತ್ಯವಿರುವ ಮುಖಗವಸು, ಸ್ಯಾನಿಟೈಸರ್ ಸೇರಿದಂತೆ ಇನ್ನಿತರ ಪರಿಕರಗಳನ್ನು ನೀಡಲಾಗುತ್ತದೆ ಎಂದು ಬಿಜೆಪಿ ಘೋಷಣೆ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.