ಡಿ.ಕೆ. ಶಿವಕುಮಾರ್‌ ವಿರುದ್ಧ ಬಿಜೆಪಿ ಹಗೆತನ: ಸಚಿವ ಎಂ.ಬಿ.ಪಾಟೀಲ

Published : Oct 20, 2023, 08:45 PM IST
ಡಿ.ಕೆ. ಶಿವಕುಮಾರ್‌ ವಿರುದ್ಧ ಬಿಜೆಪಿ ಹಗೆತನ: ಸಚಿವ ಎಂ.ಬಿ.ಪಾಟೀಲ

ಸಾರಾಂಶ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆದಾಯ ಮೀರಿ ಆಸ್ತಿ ಮಾಡಿರುವ ಬಗ್ಗೆ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದೆ. ಆದರೆ ಈ ಬಗ್ಗೆ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ. ಡಿ.ಕೆ.ಶಿವಕುಮಾರ್ ಹಾಗೂ ಅವರ ಕಾನೂನು ತಂಡ ಮೇಲ್ಮನವಿ ಸಲ್ಲಿಸುವ ಕೆಲಸ ಮಾಡಲಿದೆ. ನಾವು ಹಾಗೂ ಪಕ್ಷ ಡಿ.ಕೆ.ಶಿವಕುಮಾರ್ ಜೊತೆಗಿದ್ದೇವೆ ಎಂದ ಸಚಿವ ಎಂ.ಬಿ.ಪಾಟೀಲ 

ವಿಜಯಪುರಅ.20): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ರಾಜಕೀಯ ದ್ವೇಷ ಸಾಧಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಗುರುವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಆದಾಯ ಮೀರಿ ಆಸ್ತಿ ಹೊಂದಿದ ಆರೋಪಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಸಮ್ಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದರು.

ಅಕ್ರಮ ಆಸ್ತಿ ಪ್ರಕರಕಣ: ಆರೋಪ ಸಾಬೀತಾಗದೆ ಡಿಕೆಶಿ ರಾಜೀನಾಮೆ ಪ್ರಶ್ನೆಯೇ ಇಲ್ಲ: ಸಚಿವ ಎಂ.ಬಿ.ಪಾಟೀಲ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆದಾಯ ಮೀರಿ ಆಸ್ತಿ ಮಾಡಿರುವ ಬಗ್ಗೆ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದೆ. ಆದರೆ ಈ ಬಗ್ಗೆ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ. ಡಿ.ಕೆ.ಶಿವಕುಮಾರ್ ಹಾಗೂ ಅವರ ಕಾನೂನು ತಂಡ ಮೇಲ್ಮನವಿ ಸಲ್ಲಿಸುವ ಕೆಲಸ ಮಾಡಲಿದೆ. ನಾವು ಹಾಗೂ ಪಕ್ಷ ಡಿ.ಕೆ.ಶಿವಕುಮಾರ್ ಜೊತೆಗಿದ್ದೇವೆ ಎಂದರು.

ಪ್ರತಿಪಕ್ಷಗಳ ರಾಜೀನಾಮೆ ಬೇಡಿಕೆಯಲ್ಲಿ ಹುರುಳಿಲ್ಲ. ಡಿ.ಕೆ.ಶಿವಕುಮಾರ್ ಮೇಲಿನ ಆರೋಪ ಪಟ್ಟಿ ಸಿಬಿಐ ಬಳಿಯಿದೆ. ನ್ಯಾಯಾಲಯಕ್ಕೆ ಸಲ್ಲಿಕೆಯಾಗಬೇಕು. ಆಗ ನ್ಯಾಯಾಲಯದಲ್ಲಿ ಏನು ನಡೆಯುತ್ತದೆ ಎಂಬುವುದನ್ನು ನೋಡೋಣ. ಅವರ ಮೇಲಿನ ಆರೋಪ ಇನ್ನೂ ಸಾಬೀತಾಗಿಲ್ಲ. ಆರೋಪ ಸಾಬೀತಾಗದೆ ರಾಜೀನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಸಮರ್ಥಿಸಿಕೊಂಡರು.

ಎಲೆಕ್ಟ್ರಿಕ್‌ ವಾಹನ ಉತ್ಪಾದನೆಗೆ 15000 ಕೋಟಿ ಹೂಡಿಕೆ: ಸಚಿವ ಎಂ.ಬಿ.ಪಾಟೀಲ್‌

ಕಾಂಗ್ರೆಸ್ಸಿನ ಕೆಲ ಶಾಸಕರು ಮುಂದಿನ ಸಿಎಂ ಡಿಕೆಶಿ ಎಂಬ ಹೇಳಿಕೆ ನೀಡುತ್ತಿದ್ದಾರೆಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅವರ ಮೇಲಿನ ಪ್ರೀತಿಯಿಂದ ಡಿಕೆಶಿ ಪರ ಹೇಳಿಕೆ ನೀಡಿರಬಹುದು. ಬಿಜೆಪಿ ಮಾಜಿ ಸಚಿವ ಸೋಮಶೇಖರ ನಾನು ಸಿಎಂ ಆಗಲಿ ಎಂದ ಹೇಳಿಕೆ ನೀಡಿದ್ದರು. ಇದೆಲ್ಲ ಪ್ರೀತಿ, ವಿಶ್ವಾಸದಿಂದ ಮಾತಾಡಿರುವ ಮಾತುಗಳು ಎಂದರು.

ಕಾಂಗ್ರೆಸ್ ನಲ್ಲಿ ಸತೀಶ ಜಾರಕಿಹೊಳಿ ರೆಬೆಲ್ ನಾಯಕರಾಗಲ್ಲ. ಈಗಾಗಲೇ ಅವರ ಜೊತೆಗೆ ಮಾತನಾಡಿದ್ದೇನೆ. ಶಾಸಕರೆಲ್ಲರೂ ಮೈಸೂರು ದಸರಾಕ್ಕೆ ತೆರಳಲು ಅಣಿಯಾಗಿದ್ದರು. ನನ್ನನ್ನು ಸಹ ಕರೆದಿದ್ದರು. ಶಾಸಕರೆಲ್ಲರೂ ಸೇರಿಕೊಂಡು ಟ್ರಿಪ್ ಹೋಗಬಾರದಾ ಎಂದು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ