ಟಿ ನರಸೀಪುರದಲ್ಲಿ ಬಿಗುವಿನ ವಾತಾವರಣ; ಪ್ರತಾಪ್ ಬೆಂಬಲಕ್ಕೆ ಜಮಾಯಿಸಿದ ನೂರಾರು ಕಾರ್ಯಕರ್ತರು!

Published : Sep 13, 2026, 01:16 PM IST
Pratap Simha on T Narasipur Ganeshotsav

ಸಾರಾಂಶ

ಟಿ.ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ ಎಚ್ಚರಿಕೆಯು ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರತಾಪ್ ಸಿಂಹ ವಿರುದ್ಧ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಮೈಸೂರು (ಸೆ.13): ಒಂದು ಕಡೆ ವಿಶ್ವವಿಖ್ಯಾತ ದಸರಾ ಹಬ್ಬ ಸಮೀಪಿಸಿರುವ ಹೊತ್ತಲ್ಲೇ ಇತ್ತ ಮೈಸೂರು ಜಿಲ್ಲೆ ಟಿ.ನರಸೀಪುರದ ಗಣೇಶೋತ್ಸವ ಮೆರವಣಿಗೆ ವಿಚಾರ ಇದೀಗ ತೀವ್ರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.

ಲಿಂಕ್ ರಸ್ತೆಯಲ್ಲಿ, ಮಸೀದಿ ಮುಂಭಾಗ ಮೆರವಣಿಗೆ ಹೋಗಬಾರದು, ಪಟಾಕಿ ಸಿಡಿಸಬಾರದು ಎಂದು ಇನ್‌ಸ್ಪೆಕ್ಟರ್ ಧನಂಜಯ ನೀಡಿದ್ದ ಎಚ್ಚರಿಕೆ ವಿಡಿಯೋ ವೈರಲ್ ಆಗಿದೆ. ಅಧಿಕಾರಿ ಧಮ್ಕಿ ಬೆನ್ನಲ್ಲೇ ಬಿಜೆಪಿ ನಾಯಕರು ಸಿಡಿದಿದ್ದು, ಪ್ರತಿಪಕ್ಷ ನಾಯಕ ಆರ್ ಅಶೋಕ್, ಸಂಸದ ಯದುವೀರ್ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇನ್ಸಪೆಕ್ಟರ್ ಹೇಳಿಕೆ ಬಳಿಕ ಬಿಗುವಿನ ವಾತಾವರಣ

ಗಣೇಶ ಮೆರವರಣಿಗೆ ಬಗ್ಗೆ ಇನ್ಸ್‌ಪೆಕ್ಟರ್ ಧನಂಜಯ ಹೇಳಿಕೆ ಬಳಿಕ ಟಿ ನರಸೀಪುರದಲ್ಲಿ ಬಿಗುವಿನ ವಾತಾರವಣ ನಿರ್ಮಾಣವಾಗಿದೆ. ಇಂದು ಪೊಲೀಸ್ ಠಾಣೆಗೆ ಆಗಮಿಸಿರುವ ಬಿಜೆಪಿ ನಾಯಕರು. ಆರ್ ಅಶೋಕ್, ಪ್ರತಾಪ್ ಸಿಂಹ ಬೆಂಬಲಕ್ಕೆ ಆಗಮಿಸಿದ ನೂರಾರು ಕಾರ್ಯಕರ್ತರು.

ಪ್ರತಾಪ್ ಸಿಂಹ ವಿರುದ್ಧ ದಲಿತ ಸಂಘಟನೆ ಪ್ರತಿಭಟನೆ

ಇನ್ನೊಂದೆಡೆ ಪ್ರತಾಪ್ ಸಿಂಹ ಠಾಣೆಗೆ ನುಗ್ಗುವ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ದಲಿತ ಸಂಘಟನೆಗಳು ಪ್ರತಾಪ್ ಸಿಂಹ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಪ್ರತಾಪ್‌ ಸಿಂಹರನ್ನ ಬಂಧಿಸುವಂತೆ ಒತ್ತಾಯಿಸಿದ ಪ್ರತಿಭಟನೆ ನಡೆಸುತ್ತಿರುವ ದಲಿತ ಸಂಘಟನೆಗಳು, ಇತ್ತ ಪ್ರತಾಪ್ ಬೆಂಬಲವಾಗಿ ನೂರಾರು ಕಾರ್ಯಕರ್ತರು ಜಮಾಯಿಸಿದ್ದಾರೆ.

ಒಟ್ಟಾರೆ ಟಿ ನರಸೀಪುರ ಪೊಲೀಸ್ ಠಾಣೆ ಮುಂಭಾಗ ಇಂದು ಭಾರೀ ಹೈಡ್ರಾಮ ಸೃಷ್ಟಿಯಾಗಿದೆ. ಒಂದೆಡೆ ಡಿಎಸ್‌ಎಸ್‌ ಲೀಡರ್ಸ್ ಪ್ರತಾಪ್ ಸಿಂಹ ವಿರುದ್ಧ ದಿಕ್ಕಾರ ಕೂಗುತ್ತಿದ್ದರೆ, ಮತ್ತೊಂದೆಡೆ 'ಹಿಂದೂ ಹುಲಿ, ಪ್ರತಾಪ್ ಸಿಂಹಗೆ ಜೈ ಎಂದು ಪ್ರತಾಪ್ ಸಿಂಹ ಬೆಂಬಲಿಗರಿಂದಲೂ ಘೋಷಣೆ ಕೂಗುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೆಪಿಎಸ್‌ಸಿ ಹಗರಣ: ಸಚಿವ ಪ್ರಿಯಾಂಕ್ ಖರ್ಗೆ ಕನಸಲ್ಲಿ ಬರೀ ಪರಪ್ಪನ ಅಗ್ರಹಾರ ಬರ್ತಿದೆ; ಪ್ರತಾಪ್ ಸಿಂಹ
ನನ್ನ ಬಗ್ಗೆ ಇ.ಡಿ.ಗೆ ದೂರು ನೀಡಿದ್ದು ಬಿಜೆಪಿಗೆ ಮತ ಹಾಕುವ, ಕಾಂಗ್ರೆಸ್‌ ನಂಟಿರುವ ವ್ಯಕ್ತಿ: ಸತೀಶ್ ಜಾರಕಿಹೊಳಿ!