ಗ್ಯಾರಂಟಿಗಳನ್ನು ಯಥಾವತ್ತಾಗಿ ನೀಡದಿದ್ರೆ ಬಿಜೆಪಿಯಿಂದ ಹೋರಾಟ: ಕುಯಿಲಾಡಿ

Published : May 28, 2023, 12:38 PM IST
ಗ್ಯಾರಂಟಿಗಳನ್ನು ಯಥಾವತ್ತಾಗಿ ನೀಡದಿದ್ರೆ ಬಿಜೆಪಿಯಿಂದ ಹೋರಾಟ: ಕುಯಿಲಾಡಿ

ಸಾರಾಂಶ

: ಕಾಂಗ್ರೆಸ್‌ ಪಕ್ಷ ಚುನಾವಣೆಗೆ ಮೊದಲು ರಾಜ್ಯದ ಜನತೆಗೆ ಭರವಸೆ ನೀಡಿರುವ 5 ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾಗೊಳಿಸಬೇಕು, ಇಲ್ಲದಿದ್ದಲ್ಲಿ ಮುಂದಿನ ವಾರದಿಂದ ಉಡುಪಿ ಜಿಲ್ಲಾದ್ಯಂತ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಎಚ್ಚರಿಕೆ ನೀಡಿದ್ದಾರೆ.

ಉಡುಪಿ (ಮೇ.28) : ಕಾಂಗ್ರೆಸ್‌ ಪಕ್ಷ ಚುನಾವಣೆಗೆ ಮೊದಲು ರಾಜ್ಯದ ಜನತೆಗೆ ಭರವಸೆ ನೀಡಿರುವ 5 ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾಗೊಳಿಸಬೇಕು, ಇಲ್ಲದಿದ್ದಲ್ಲಿ ಮುಂದಿನ ವಾರದಿಂದ ಉಡುಪಿ ಜಿಲ್ಲಾದ್ಯಂತ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಎಚ್ಚರಿಕೆ ನೀಡಿದ್ದಾರೆ.

ಅವರು ಶನಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಟಿಕೆಟ್‌ಗೆ ಹಣ ಕೊಡಬೇಡಿ, ಬಸ್‌ ಸಿಬ್ಬಂದಿ ಕಿರಿಕ್‌ ಮಾಡಿದರೆ ಉಡುಪಿ ಜಿಲ್ಲಾ ಬಿಜೆಪಿಗೆ ಕರೆ ಮಾಡಿ, ನಾವು ನಿಮ್ಮ ಬೆಂಬಲಕ್ಕೆ ಬರುತ್ತೇವೆ ಎಂದು ಕುಯಿಲಾಡಿ ಹೇಳಿದರು. ಯಾರೂ ವಿದ್ಯುತ್‌ ಬಿಲ್‌ ಕಟ್ಟಬೇಡಿ, ಹಾಗಂತ ಮೆಸ್ಕಾಂ ಸಿಬ್ಬಂದಿ ಜೊತೆ ಗಲಾಟೆ ಮಾಡಬೇಡಿ, ಸಿದ್ದರಾಮಯ್ಯ, ಡಿಕೆಶಿ ಉಚಿತ ವಿದ್ಯುತ್‌ ನೀಡುವುದಾಗಿ ಹೇಳಿದ್ದಾರೆ, ಆದ್ದರಿಂದ ಬಿಲ್‌ ಕಟ್ಟುವುದಿಲ್ಲ ಎನ್ನಿ ಎಂದವರು ಹೇಳಿದರು.

Karnataka election result 2023: ಕಾಂಗ್ರೆಸ್ಸಿನ 5 ಗ್ಯಾರಂಟಿಗಳಿಗೆ ಷರತ್ತು ಅನ್ವಯ, 6ನೇ ಗ್ಯಾರಂಟಿ ರಿಲೀಸ್‌ಗೆ ಸಿದ್ಧತೆ!

ಎಲ್ಲ ನಿರುದ್ಯೋಗಿ ಪದವೀಧರರಿಗೆ 2 ಸಾವಿರ ರು. ನೀಡುವುದಾಗಿ ಕಾಂಗ್ರೆಸ್‌ ಹೇಳಿದೆ. ಈಗ ಈ ವರ್ಷ ಪಾಸಾದ ಪದವೀಧರರಿಗೆ ಎಂದು ಹೇಳುತ್ತಿದೆ. ಎಲ್ಲ ಪದವೀಧರರಿಗೆ 2 ಸಾವಿರ ನೀಡದಿದ್ದರೆ ಅಂತಹ ಪದವೀದರರೊಂದಿಗೆ ಬಿಜೆಪಿ ಯುವ ಮೋರ್ಚಾ ಬೀದಿಗಿಳಿದು ಹೋರಾಟ ನಡೆಸಲಿದೆ. ಮಹಿಳೆಯರಿಗೆ 2 ಸಾವಿರ ರು., 10 ಕೆಜಿ ಉಚಿತ ಅಕ್ಕಿ ಗ್ಯಾರಂಟಿಗಳನ್ನೂ ಬೇಷರತ್ತಾಗಿ ನೀಡಬೇಕು, ಇಲ್ಲದಿದ್ದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಹೋರಾಟಕ್ಕೆ ಸಿದ್ಧವಾಗಿದೆ ಎಂದು ಕುಯಿಲಾಡಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ, ಸಹವಕ್ತಾರ ಶಿವಕುಮಾರ್‌, ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಕಚೇರಿ ಕಾರ್ಯದರ್ಶಿ ಸತ್ಯಾನಂದ ನಾಯಕ್‌ ಇದ್ದರು.

ಆರೆಸ್ಸೆಸ್‌ ಬ್ಯಾನ್‌- ನಾವು ಬಳೆ ತೊಟ್ಟು ಕುಳಿತಿಲ್ಲ

ಪ್ರಿಯಾಂಕ ಖರ್ಗೆ ಬಜರಂಗದಳ, ಆರ್‌ಎಸ್‌ಎಸ್‌ನ್ನು ನಿಷೇಧಿಸುವುದಾಗಿ ಹೇಳಿದ್ದಾರೆ. ಕೇವಲ ಮುಸ್ಲೀಮರನ್ನು ಖುಷಿಪಡಿಸಲು ಅವರು ಹೀಗೆ ಹೇಳುತ್ತಿರಬಹುದು. ನೆಹರೂ, ಇಂದಿರಾಗಾಂಧಿ ಅವರಿಗೇ ಇದು ಸಾಧ್ಯವಾಗಿರಲಿಲ್ಲ. ಈಗ ಖರ್ಗೆ ಅವರಿಗೆ ಈ ತಾಕತ್ತು ಇದ್ದರೆ ನಿಷೇಧ ಮಾಡಿ ತೋರಿಸಲಿ, ಬಿಜೆಪಿಯವರು ಕೈಗೆ ಬಳೆ ತೊಟ್ಟು ಕುಳಿತಿಲ್ಲ ಎಂದು ಕುಯಿಲಾಡಿ ಖಾರವಾಗಿ ಹೇಳಿದರು.

ಮುಸ್ಲಿಂರ ಓಲೈಕೆಗೆ ಕಾಂಗ್ರೆಸ್ ಬಜರಂಗದಳ ನಿಷೇಧ ಘೋಷಣೆ: ಕುಯಿಲಾಡಿ ಸುರೇಶ್ ನಾಯಕ್

ಬಿಜೆಪಿ ಪಕ್ಷದ ವಿರೋಧಿಗಳ ಮೇಲೆ ಕ್ರಮ ಗ್ಯಾರಂಟಿ

ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಪಕ್ಷ ವಿರೋಧಿ ಕೆಲಸ ಮಾಡಿದವರ ಬಗ್ಗೆ ಜಿಲ್ಲೆಯ ಎಲ್ಲ ಮಂಡಲಗಳಿಂದ ವರದಿ ನೀಡುವಂತೆ ಸೂಚಿಸಲಾಗಿದೆ. ವರದಿಯಂತೆ ಜಿಲ್ಲಾ ಅಥವಾ ರಾಜ್ಯ ಮಟ್ಟದದಲ್ಲಿ ಸೂಕ್ತ ಕ್ರಮ ಜರಗುತ್ತದೆ. ಚುನಾವಣಾ ಪ್ರಚಾರಕ್ಕೆ ಬಾರದ ಬೈಂದೂರಿನ ಮಾಜಿ ಶಾಸಕ ಸುಕುಮಾರ್‌ ಶೆಟ್ಟಿಅವರ ಬಗ್ಗೆಯೂ ಬೈಂದೂರು ಮಂಡಲದಿಂದ ವರದಿ ಕೇಳಲಾಗಿದೆ ಎಂದು ಕುಯಿಲಾಡಿ ಸುರೇಶ್‌ ನಾಯಕ್‌ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ