ಬಂಡಾಯ ಸ್ಪರ್ಧೆನಾ ಅಲ್ವಾ ಅನ್ನೋದನ್ನ ಫಲಿತಾಂಶದ ದಿನ ಹೇಳ್ತೇನೆ: ಬಿಜೆಪಿ ಬಂಡಾಯ ಅಭ್ಯರ್ಥಿ

Suvarna News   | Asianet News
Published : Oct 07, 2020, 02:01 PM ISTUpdated : Oct 07, 2020, 02:07 PM IST
ಬಂಡಾಯ ಸ್ಪರ್ಧೆನಾ ಅಲ್ವಾ ಅನ್ನೋದನ್ನ ಫಲಿತಾಂಶದ ದಿನ ಹೇಳ್ತೇನೆ: ಬಿಜೆಪಿ ಬಂಡಾಯ ಅಭ್ಯರ್ಥಿ

ಸಾರಾಂಶ

ಬಹಳಷ್ಟು ಕಷ್ಟ ಪಟ್ಟಿದ್ದೇನೆ, ಐದು ಜಿಲ್ಲೆಗಳಲ್ಲಿ ದುಡಿದು‌ ಮತದಾರರ ನೋಂದಣಿಯನ್ನ ಮಾಡಿಸಿದ್ದೇನೆ. ಶಿಕ್ಷಕರು, ಪದವೀಧರರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದೇನೆ. ಇವರೆಲ್ಲರ ಒತ್ತಾಸೆಯಿಂದ ನಾಮಪತ್ರ ಸಲ್ಲಿಸಿದ್ದೇನೆ ಎಂದು ತಿಳಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ ಶ್ರೀನಿವಾಸ್

ದಾವಣಗೆರೆ(ಅ.07): ನನ್ನದು ಬಂಡಾಯ ಸ್ಪರ್ಧೆನಾ ಅಲ್ವಾ ಅನ್ನೋ ಪ್ರಶ್ನೆಗೆ ಫಲಿತಾಂಶದ ದಿನ ಹೇಳುತ್ತೇನೆ. ಬ್ಯಾಲೆಟ್ ಪೇಪರ್‌ನಲ್ಲಿ ಯಾರಿಗೂ ಪಕ್ಷದ ಗುರುತು ಇರಲ್ಲ. ಎಲ್ಲರೂ ಒಂದರ್ಥದಲ್ಲಿ ಪಕ್ಷೇತರ ಅಭ್ಯರ್ಥಿಗಳೇ ಎಂದು ಆಗ್ನೇಯ ಪದವೀಧರ ಕ್ಷೇತ್ರ ಬಿಜೆಪಿ ಬಂಡಾಯ ಅಭ್ಯರ್ಥಿ ಶ್ರೀನಿವಾಸ್ ಅವರು ಹೇಳಿದ್ದಾರೆ. 

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಹಳಷ್ಟು ಕಷ್ಟ ಪಟ್ಟಿದ್ದೇನೆ, ಐದು ಜಿಲ್ಲೆಗಳಲ್ಲಿ ದುಡಿದು‌ ಮತದಾರರ ನೋಂದಣಿಯನ್ನ ಮಾಡಿಸಿದ್ದೇನೆ. ಶಿಕ್ಷಕರು, ಪದವೀಧರರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದೇನೆ. ಇವರೆಲ್ಲರ ಒತ್ತಾಸೆಯಿಂದ ನಾಮಪತ್ರ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ಮೋದಿ ಆದರ್ಶಕ್ಕೆ ಮೆಚ್ಚಿದೆ : ಕೈ ತೊರೆದ ನಾಯಕ ಬಿಜೆಪಿಗೆ

ನಾನು ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ್ದೇನೆ. ಗೊಲ್ಲ ಸಮುದಾಯದ ನಾಯಕನಾಗಿದ್ದೇನೆ. ಈ ಬಾರಿಯ ಆಗ್ನೇಯ ಪದವೀಧರ ಕ್ಷೇತ್ರ ಪ್ರಚಂಡ ಬಹುಮತದಿಂದ ಗದ್ದೇ ಗೆಲ್ಲುತ್ತೇನೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಶ್ರೀನಿವಾಸ್ ಹೇಳಿದ್ದಾರೆ. 

ಶ್ರೀನಿವಾಸ್ ಸ್ಪರ್ಧೆ ವಿಚಾರದ ಬಗ್ಗೆ ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು, ಸ್ಪರ್ಧೆ ಬಗ್ಗೆ ಮಾಹಿತಿ ಬಂದಿದೆ ಅವರೊಟ್ಟಿಗೆ ಮಾತುಕತೆ ನಡೆಸುತ್ತೇವೆ. ನಮ್ಮ ಪಕ್ಷದ ಅಭ್ಯರ್ಥಿಗೆ ಬೆಂಬಲ ಇರಲಿದೆ. ಸಂಘಟಿತವಾಗಿ ಚುನಾವಣೆ ಎದುರಿಸುತ್ತೇವೆ. ಆರ್. ಆರ್. ನಗರ ಅಭ್ಯರ್ಥಿ ಘೋಷಣೆ ಇನ್ನು ಫೈನಲ್‌ ಆಗಿಲ್ಲ. ಈ ನಬಗ್ಗೆ ಸಂಸದೀಯ ಮಂಡಳಿ ಸಭೆ ನಿರ್ಧಾರ ಮಾಡಲಿದೆ. ಅಧಿಕೃತ ಘೋಷಣೆ ಮಾಡುವವರೆಗೆ ಊಹಾಪೋಹ ಇರುವುದು ಸಹಜ ಎಂದು ತಿಳಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿಲ್ಲ. ಒಳ ಒಪ್ಪಂದ ಮಾಡಿಕೊಳ್ಳುವ ಅನಿರ್ವಾತೆ ಬಿಜೆಪಿಗೆ ಇಲ್ಲ. ಆದರೆ ರಾಜಕೀಯ ಅಸ್ಪೃಶ್ಯತೆಯೂ ಬಿಜೆಪಿಗೆ ಇಲ್ಲ. ಪಕ್ಷದ ಬೆಳವಣೆಗೆ ಸಹಾಯಕವಾಗುವ ಕೆಲಸ ಮಾಡುತ್ತೇವೆ ಎಂದಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!