ಉಪಸಮರ :ಎರಡು ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್‌ ಘೋಷಣೆ

Kannadaprabha News   | Asianet News
Published : Oct 08, 2021, 07:30 AM IST
ಉಪಸಮರ  :ಎರಡು ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್‌ ಘೋಷಣೆ

ಸಾರಾಂಶ

ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಖಾಡ ಸಜ್ಜಾಗಿದೆ. ಉಭಯ ಕ್ಷೇತ್ರಗಳಿಗೆ ಮೂರು ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಅಂತಿಮ

 ಬೆಂಗಳೂರು (ಅ.08):  ಬಿ.ಎಸ್‌.ಯಡಿಯೂರಪ್ಪ (BS Yediyurappa) ಅವರು ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿ ಬಸವರಾಜ ಬೊಮ್ಮಾಯಿ  (BasavarajBommai) ಆ ಸ್ಥಾನ ಅಲಂಕರಿಸಿದ ಬಳಿಕ ಎದುರಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ (Karnataka BY Election) ಅಖಾಡ ಸಜ್ಜಾಗಿದೆ.

ಉಭಯ ಕ್ಷೇತ್ರಗಳಿಗೆ ಮೂರು ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಅಂತಿಮಗೊಂಡಿದ್ದು, ಈಗಾಗಲೇ ಹಲವರು ನಾಮಪತ್ರ ಸಲ್ಲಿಸಿದ್ದಾರೆ. ಶುಕ್ರವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುವುದರಿಂದ ಇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಆಡಳಿತಾರೂಢ ಬಿಜೆಪಿ (BJP) ಗುರುವಾರ ತನ್ನ ಅಭ್ಯರ್ಥಿಗಳ ಪಟ್ಟಿಬಿಡುಗಡೆಗೊಳಿಸಿದೆ.

ಸಿಂದಗಿ, ಹಾನಗಲ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ

ಈ ತಿಂಗಳ 11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ವಾಪಸ್‌ ಪಡೆಯಲು 13 ಕೊನೆಯ ದಿನವಾಗಿದೆ. ಈ ತಿಂಗಳ 30ರಂದು ಮತದಾನ ನಡೆಯಲಿದೆ. ಫಲಿತಾಂಶ ನ.2ರಂದು ಹೊರಬೀಳಲಿದೆ. ಸಿಂದಗಿಯ ಜೆಡಿಎಸ್‌ ಶಾಸಕರಾಗಿದ್ದ ಎಂ.ಸಿ.ಮನಗೂಳಿ ಹಾಗೂ ಹಾನಗಲ್‌ನ ಬಿಜೆಪಿ ಶಾಸಕರಾಗಿದ್ದ ಸಿ.ಎಂ.ಉದಾಸಿ ಅವರ ಅಕಾಲಿಕ ನಿಧನದ ಹಿನ್ನೆಲೆ ಇದೀಗ ಉಪಚುನಾವಣೆ ಎದುರಾಗಿದೆ.

ಬಿಜೆಪಿಯಿಂದ ಹಾನಗಲ್‌ ಕ್ಷೇತ್ರಕ್ಕೆ ಹಾವೇರಿಯ ಮಾಜಿ ಶಾಸಕ ಶಿವರಾಜ್‌ ಸಜ್ಜನರ್‌ (Shiraj sajjanar) ಅವರನ್ನು ಅಚ್ಚರಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಿದ್ದು, ಸಿಂದಗಿ ಕ್ಷೇತ್ರದಿಂದ ಮಾಜಿ ಶಾಸಕ ರಮೇಶ್‌ ಭೂಸನೂರು (Ramesh Bhusanur) ಅವರಿಗೆ ಟಿಕೆಟ್‌ ನೀಡಿದೆ. ಇನ್ನು ಕಾಂಗ್ರೆಸ್‌ ಪಕ್ಷ ಸಿಂದಗಿಯಿಂದ ಅಶೋಕ್‌ ಮನಗೂಳಿ ಅವರಿಗೆ ಮತ್ತು ಹಾನಗಲ್‌ನಿಂದ ಶ್ರೀನಿವಾಸ್‌ ಮಾನೆ ಅವರನ್ನು ಕಣಕ್ಕಿಳಿಸಿದೆ.

ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ಗೆ (Congress) ಹೋಲಿಸಿದರೆ ಜೆಡಿಎಸ್‌ ಮುಂಚಿತವಾಗಿಯೇ ತನ್ನ ಅಭ್ಯರ್ಥಿಗಳನ್ನು ಘೋಷಿಸಿತು. ಉಭಯ ಕ್ಷೇತ್ರಗಳಲ್ಲೂ ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಿದೆ. ಚುನಾವಣಾ ವೇಳಾಪಟ್ಟಿಪ್ರಕಟಗೊಳ್ಳುವ ಮೊದಲೇ ಹಾನಗಲ್‌ನಿಂದ ನಿಯಾಜ್‌ ಶೇಕ್‌ ಎಂಬುವರನ್ನು ಕಣಕ್ಕಿಳಿಸುವುದಾಗಿ ಘೋಷಿಸಿದ ಜೆಡಿಎಸ್‌, ಅವರಿಗೇ ಟಿಕೆಟ್‌ ನೀಡಿದೆ. ಇನ್ನು ಸಿಂದಗಿಯಿಂದ ನಾಜಿಯಾ ಶಕೀಲಾ ಅಂಗಡಿ ಎಂಬುವರನ್ನು ಅಭ್ಯರ್ಥಿಯನ್ನಾಗಿಸಿದೆ.

ಬೊಮ್ಮಾಯಿಗೆ ಪ್ರತಿಷ್ಠೆ ಚುನಾವಣೆ:

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿದ ನಂತರ ಈ ಎರಡು ಕ್ಷೇತ್ರಗಳ ಉಪಚುನಾವಣೆ ಎದುರಾಗಿರುವುದರಿಂದ ಅವರಿಗೆ ಇದು ಸಹಜವಾಗಿಯೇ ಪ್ರತಿಷ್ಠೆಯಾಗಿ ಪರಿಣಮಿಸಿದೆ.

ಅದರಲ್ಲೂ ಹಾನಗಲ್‌ ವಿಧಾನಸಭಾ ಕ್ಷೇತ್ರ ತಮ್ಮ ತವರು ಜಿಲ್ಲೆಗೆ ಸೇರಿದ್ದು. ಇಲ್ಲಿ ಬಿಜೆಪಿಯಿಂದ ಶಾಸಕರಾಗಿದ್ದ ಸಿ.ಎಂ.ಉದಾಸಿ ಅವರ ಅಕಾಲಿಕ ನಿಧನದಿಂದ ಚುನಾವಣೆ ಎದುರಾಗಿದೆ. ಹೀಗಾಗಿ, ಈ ಕ್ಷೇತ್ರವನ್ನು ಬಿಜೆಪಿಗೇ ಉಳಿಸಿಕೊಳ್ಳುವುದು ಬೊಮ್ಮಾಯಿ ಅವರ ಪಾಲಿಗೆ ಮಹತ್ವವಾದದ್ದು.

ಉದಾಸಿ ಸೊಸೆಗೆ ಸಿಗದ ಟಿಕೆಟ್‌

ಬೆಂಗಳೂರು: ಹಾನಗಲ್‌ ಕ್ಷೇತ್ರದಲ್ಲಿ ಸಿ.ಎಂ.ಉದಾಸಿ ನಿಧನದಿಂದ ಉಪ ಚುನಾವಣೆ ಎದುರಾಗಿದ್ದು, ಅವರ ಸೊಸೆ ಹಾಗೂ ಹಾಲಿ ಸಂಸದ ಶಿವಕುಮಾರ್‌ ಉದಾಸಿ ಪತ್ನಿ ರೇವತಿ ಅವರಿಗೆ ಟಿಕೆಟ್‌ ನೀಡಬೇಕೆಂದು ರಾಜ್ಯ ಬಿಜೆಪಿ ನಾಯಕರು ಕೋರಿದ್ದರು. ಆದರೆ ಹೈಕಮಾಂಡ್‌ ಅದನ್ನು ತಿರಸ್ಕರಿಸಿ ಶಿವರಾಜ್‌ ಸಜ್ಜನರ್‌ಗೆ ಟಿಕೆಟ್‌ ನೀಡಿದೆ.


ಸಿಂದಗಿ ಕ್ಷೇತ್ರ

ಬಿಜೆಪಿ ರಮೇಶ್‌ ಭೂಸನೂರು

ಕಾಂಗ್ರೆಸ್‌ ಅಶೋಕ್‌ ಮನಗೂಳಿ

ಜೆಡಿಎಸ್‌ ನಾಜಿಯಾ ಶಕೀಲ್‌

ಹಾನಗಲ್‌

ಬಿಜೆಪಿ ಶಿವರಾಜ್‌ ಸಜ್ಜನರ್‌

ಕಾಂಗ್ರೆಸ್‌ ಶ್ರೀನಿವಾಸ್‌ ಮಾನೆ

ಜೆಡಿಎಸ್‌ ನಿಯಾಜ್‌ ಶೇಖ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್