
ಬೆಂಗಳೂರು(ಫೆ.04): ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕೇವಲ 70 ದಿನಗಳ ಕಡಿಮೆ ಅವಧಿಯಲ್ಲಿ ಪಕ್ಷ ಸಂಘಟನೆಗಾಗಿ ರಾಜ್ಯದಾದ್ಯಂತ ಬರೋಬ್ಬರಿ ಹತ್ತು ಸಾವಿರ ಕಿ.ಮೀ. ಸಂಚರಿಸಿದ್ದಾರೆ. ಪಕ್ಷದ ಈ ಹಿಂದಿನ ಇತರೆ ರಾಜ್ಯಾಧ್ಯಕ್ಷರಿಗೆ ಹೋಲಿಸಿದರೆ ಇಷ್ಟು ಕಡಿಮೆ ಅವಧಿಯಲ್ಲಿ 10 ಸಾವಿರ ಕಿ.ಮೀ. ಪ್ರವಾಸ ಮಾಡಿದ್ದು ದಾಖಲೆಯೇ ಸರಿ. ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೊಸದಾಗಿ ಮಹತ್ವದ ಜವಾಬ್ದಾರಿ ವಹಿಸಿಕೊಂಡ ಹಿನ್ನೆಲೆ ರಾಜಕೀಯ ಅನುಭವಕ್ಕಾಗಿ ರಾಜ್ಯ ಸುತ್ತಿ ಬರಲು ಸಲಹೆ ನೀಡಿದ್ದರು. ಅದರ ಅನುಸಾರ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯ ಪ್ರವಾಸ ಆರಂಭಿಸಿದರು.
ತಂದೆಯ ಮಾತಿನಂತೆ ಇಡೀ ರಾಜ್ಯ ಸುತ್ತಾಡಿ ಜನರ ನಾಡಿ ಮಿಡಿತ, ಸ್ಥಳೀಯ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡುವಲ್ಲಿ ವಿಜಯೇಂದ್ರ ಬಹುತೇಕ ಯಶಸ್ವಿಯಾಗಿದ್ದಾರೆ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ತುಮಕೂರಿನ ಸಿದ್ಧಗಂಗಾ ಕ್ಷೇತ್ರ ಹಾಗೂ ಮನೆ ದೇವರು ಯಡಿಯೂರು ಸಿದ್ದಲಿಂಗೇಶ್ವರ ದರ್ಶನದಿಂದ ಆರಂಭವಾಗಿದ್ದ ಪ್ರವಾಸ ಶಿವಮೊಗ್ಗ, ಬೀದರ್, ಕಲಬುರ್ಗಿ, ಮಂಗಳೂರು, ಕೊಪ್ಪಳ, ಚಿತ್ರದುರ್ಗ, ರಾಯಚೂರು ಸೇರಿದಂತೆ 27 ಜಿಲ್ಲೆಗಳಲ್ಲಿ ಸಂಚರಿಸುವ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸುವ ಪ್ರಯತ್ನ ಮಾಡಿದ್ದಾರೆ.
ತುಮಕೂರಲ್ಲಿ ಸೋಮಣ್ಣ ಸ್ಫರ್ಧೆಗೆ ವರಿಷ್ಠರು ಸೂಚಿಸಿದ್ರೆ ಅಭ್ಯಂತರವಿಲ್ಲ: ವಿಜಯೇಂದ್ರ
ರಾಜ್ಯಾಧ್ಯಕ್ಷರಾದ ಬಳಿಕ ಅತಿ ಕಡಿಮೆ ಅವಧಿಯಲ್ಲಿ ಒಂದು ಸುತ್ತು ರಾಜ್ಯ ಪ್ರವಾಸ ಮುಗಿಸುತ್ತಿರುವ ವಿಜಯೇಂದ್ರ ಅವರು ಲೋಕಸಭಾ ಸಮರದ ಪ್ರಚಾರದ ಭಾಗವಾಗಿ ಮತ್ತೊಂದು ಸುತ್ತಿನ ಪ್ರವಾಸಕ್ಕೂ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಬಿಡುವಿಲ್ಲದ ವಿಜಯೇಂದ್ರ ಪ್ರವಾಸಕ್ಕೆ ಪಕ್ಷದ ಅನೇಕ ಹಿರಿಯ ನಾಯಕರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಕ್ಣ ಸಂಘಟನೆಯ ಕಾರ್ಯವೈಖರಿಗೆ ಸಂಘ ಪರಿವಾರದ ಮುಖಂಡರೂ ಮೆಚ್ಚುಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜಕೀಯ ಅನುಭವಕ್ಕೆ ರಾಜ್ಯ ಸುತ್ತಲು ತಂದೆ ಬಿಎಸ್ವೈರಿಂದ ವಿಜಯೇಂದ್ರಗೆ ಸಲಹೆ
- ಅದರಂತೆ, ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯ ಪ್ರವಾಸ ಆರಂಭ
- ತುಮಕೂರಿನ ಸಿದ್ಧಗಂಗೆ, ಮನೆದೇವರು ಯಡಿಯೂರು ಸಿದ್ದಲಿಂಗೇಶ್ವರ ಕ್ಷೇತ್ರದಿಂದ ಪ್ರವಾಸ
- ಈಗಾಗಲೇ 27 ಜಿಲ್ಲೆಗಳಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಹುರಿದುಂಬಿಸಿರುವ ಅಧ್ಯಕ್ಷ
- ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ರಾಜ್ಯ ಸುತ್ತುತ್ತಿರುವ ವಿಜಯೇಂದ್ರ ಬಗ್ಗೆ ಹಿರಿಯರ ಮೆಚ್ಚುಗೆ
- ರಾಜ್ಯ ಪ್ರವಾಸದ ಮೂಲಕ ಜನರ ನಾಡಿಮಿಡಿತ, ಸ್ಥಳೀಯರ ಅಭಿಪ್ರಾಯ ಸಂಗ್ರಹದಲ್ಲಿ ಯಶಸ್ವಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.