ಚನ್ನಪಟ್ಟಣ ಉಪ ಚುನಾವಣೆ ಚರ್ಚೆಯಿಂದ ಬಿ.ವೈ.ವಿಜಯೇಂದ್ರ ದೂರ: ಕುತೂಹಲ

Published : Aug 31, 2024, 09:42 AM IST
ಚನ್ನಪಟ್ಟಣ ಉಪ ಚುನಾವಣೆ ಚರ್ಚೆಯಿಂದ ಬಿ.ವೈ.ವಿಜಯೇಂದ್ರ ದೂರ: ಕುತೂಹಲ

ಸಾರಾಂಶ

ಕಳೆದ ಎರಡು ದಿನಗಳಿಂದ ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂಬಂಧ ರಾಜ್ಯ ಬಿಜೆಪಿಯ ಹಲವು ಹಿರಿಯ ನಾಯಕರು ದೆಹಲಿಯಲ್ಲಿ ವರಿಷ್ಠರ ಜತೆ ಸರಣಿ ಸಭೆಗಳನ್ನು ನಡೆಸಿದರೂ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಣಿಸಿಕೊಳ್ಳದೇ ಇರುವುದು ಚರ್ಚೆಗೆ ಗ್ರಾಸವಾಗಿದೆ. 

ಬೆಂಗಳೂರು (ಆ.31): ಕಳೆದ ಎರಡು ದಿನಗಳಿಂದ ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂಬಂಧ ರಾಜ್ಯ ಬಿಜೆಪಿಯ ಹಲವು ಹಿರಿಯ ನಾಯಕರು ದೆಹಲಿಯಲ್ಲಿ ವರಿಷ್ಠರ ಜತೆ ಸರಣಿ ಸಭೆಗಳನ್ನು ನಡೆಸಿದರೂ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಣಿಸಿಕೊಳ್ಳದೇ ಇರುವುದು ಚರ್ಚೆಗೆ ಗ್ರಾಸವಾಗಿದೆ. ಪಕ್ಷದ ನಾಯಕ ರಾದ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಡಾ. ಸಿ.ಎನ್.ಅಶ್ವತ್ಥ ನಾರಾಯಣ, ಅರವಿಂದ್ ಬೆಲ್ಲದ, ಸಿ.ಪಿ. ಯೋಗೇಶ್ವ‌ರ್ ದೆಹಲಿಗೆ ತೆರಳಿದ್ದಾರೆ. ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಎಚ್.ಡಿ.ಕುಮಾರ ಸ್ವಾಮಿ, ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು. 

ಆದರೆ, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ದೆಹಲಿಗೆ ತೆರಳದೆ ಬೆಂಗಳೂರಿನಲ್ಲಿಯೇ ಉಳಿಯುವ ಮೂಲಕ ಅಂತರ ಕಾಪಾಡಿಕೊಂಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಈಗ ಕೇಂದ್ರದ ಸಚಿವರಾಗಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರಿಂದ ತೆರವಾದ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಸಿ.ಪಿ.ಯೋಗೇಶ್ವರ್‌ಬಯಸಿದ್ದಾರೆ. ಆದರೆ, ಜೆಡಿಎಸ್ ಈ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆ ಮೀನಮೇಷ ಎಣಿಸುತ್ತಿದೆ. ಇನ್ನು ವಿಜಯೇಂದ್ರ ಮತ್ತು ಯೋಗೇಶ್ವರ್‌ ಅವರ ನಡುವಿನ ರಾಜಕೀಯ ಸಂಬಂಧ ಅಷ್ಟಕಷ್ಟೇ ಎಂಬಂತಿದೆ. 

ಇದಕ್ಕೆ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಚನ್ನಪಟ್ಟಣ ಜೆಡಿಎಸ್ ತೆರವುಗೊಳಿಸಿದ ಕ್ಷೇತ್ರವಾಗಿದ್ದರಿಂದ ವಿಜಯೇಂದ್ರ ಅವರು ಆ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಬಗ್ಗೆ ತಟಸ್ಥ ನಿಲುವು ಅನುಸರಿಸುತ್ತಿದ್ದಾರೆ ಎನ್ನಲಾಗಿದೆ. ಇನ್ನು, ಯೋಗೇಶ್ವರ್‌ ಕೂಡ ಈ ವಿಷಯದಲ್ಲಿ ವಿಜಯೇಂದ್ರ ಅವರನ್ನು ದೂರವಿಡುವ ಪ್ರಯತ್ನ ಮಾಡುತ್ತಿದ್ದಾರೆ. ಪಕ್ಷದ ಇತರ ನಾಯಕರೊಂದಿಗೆ ತಮ್ಮ ಟಿಕೆಟ್ ಬಗ್ಗೆ ಚರ್ಚಿಸಿದರೂ ಉದ್ದೇಶ ಪೂರ್ವಕವಾಗಿಯೇ ವಿಜಯೇಂದ್ರ ಅವರ ಬಳಿ ಈ ವಿಷಯ ಪ್ರಸ್ತಾಪಿಸಿಲ್ಲ. 

ಬಿಜೆಪಿಯವರು ಪಶ್ಚಾತಾಪ ಪಡುವ ಸ್ಥಿತಿ ಬರಲಿದೆ, ಸಿದ್ದರಾಮಯ್ಯಗೆ ನ್ಯಾಯ ಸಿಕ್ಕೇ ಸಿಗುತ್ತದೆ: ಸಚಿವ ಎಂ.ಬಿ.ಪಾಟೀಲ್

ಈ ಕಾರಣದಿಂದಲೂ ವಿಜಯೇಂದ್ರ ಅವರು ದೆಹಲಿಗೆ ತೆರಳದೆ ಏನಾದರೂ ಆಗಲಿ ಎಂಬ ಧೋರಣೆ ತಳೆದಿದ್ದಾರೆ ಎಂಬ ಮಾತು ಬಿಜೆಪಿ ಪಾಳೆಯದಿಂದಲೇ ಕೇಳಿಬರುತ್ತಿದೆ. ಆದರೆ, ಪಕ್ಷದ ಇತರ ಹಿರಿಯ ನಾಯಕರು ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಸರಣಿ ಸಭೆ ನಡೆಸುತ್ತಿರುವಾಗ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಅವರು ಇದರಿಂದ ದೂರ ಉಳಿಯದೆ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಭಿನ್ನಾಭಿಪ್ರಾಯ ಸಂದೇಶ ರವಾನೆಯಾಗುವುದನ್ನು ತಡೆಗಟ್ಟಬಹುದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ