ರಾಜ್ಯಾಧ್ಯಕ್ಷ ವಿಜಯೇಂದ್ರ ಮುಂದಿದೆ ಹಲವು ಸವಾಲು..!

Published : Nov 11, 2023, 11:53 AM IST
ರಾಜ್ಯಾಧ್ಯಕ್ಷ ವಿಜಯೇಂದ್ರ ಮುಂದಿದೆ ಹಲವು ಸವಾಲು..!

ಸಾರಾಂಶ

ರಾಜ್ಯಾಧ್ಯಕ್ಷ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಅನೇಕ ಹಿರಿಯ ನಾಯಕರನ್ನು ಮನವೊಲಿಸಿ ಪಕ್ಷ ಸಂಘಟನೆಗೆ ಹೆಜ್ಜೆ ಹಾಕುವಂತೆ ಮಾಡಬೇಕಿದೆ. ಸಿ.ಟಿ.ರವಿ, ಬಸನಗೌಡ ಪಾಟೀಲ ಯತ್ನಾಳ, ವಿ.ಸೋಮಣ್ಣ, ಆರ್‌.ಅಶೋಕ್, ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಸುನೀಲ್‌ ಕುಮಾರ್‌ ಅವರಲ್ಲದೆ ಪ್ರಹ್ಲಾದ್‌ ಜೋಶಿ, ಬಸವರಾಜ ಬೊಮ್ಮಾಯಿ, ಸಿ.ಪಿ.ಯೋಗೇಶ್ವರ್‌, ಅರವಿಂದ್ ಬೆಲ್ಲದ ಮತ್ತಿತರ ನಾಯಕರನ್ನು ವಿಶ್ವಾಸ ತೆಗೆದುಕೊಳ್ಳಬೇಕಾಗುತ್ತದೆ.

ಬೆಂಗಳೂರು(ನ.11):  ನಲವತ್ತೆಂಟು ವರ್ಷದ ಬಿ.ವೈ.ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷ ಹುದ್ದೆಗೆ ನೇಮಕಗೊಂಡಿದ್ದು, ಪಕ್ಷವನ್ನು ಮುನ್ನಡೆಸುವುದರೊಂದಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವರಿಷ್ಠರ ನಿರೀಕ್ಷೆ ತಲುಪಲು ಹಲವು ಸವಾಲುಗಳನ್ನು ಎದುರಿಸಬೇಕಾಗಬಹುದು.

1.ರಾಜ್ಯಾಧ್ಯಕ್ಷ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಅನೇಕ ಹಿರಿಯ ನಾಯಕರನ್ನು ಮನವೊಲಿಸಿ ಪಕ್ಷ ಸಂಘಟನೆಗೆ ಹೆಜ್ಜೆ ಹಾಕುವಂತೆ ಮಾಡಬೇಕಿದೆ. ಸಿ.ಟಿ.ರವಿ, ಬಸನಗೌಡ ಪಾಟೀಲ ಯತ್ನಾಳ, ವಿ.ಸೋಮಣ್ಣ, ಆರ್‌.ಅಶೋಕ್, ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಸುನೀಲ್‌ ಕುಮಾರ್‌ ಅವರಲ್ಲದೆ ಪ್ರಹ್ಲಾದ್‌ ಜೋಶಿ, ಬಸವರಾಜ ಬೊಮ್ಮಾಯಿ, ಸಿ.ಪಿ.ಯೋಗೇಶ್ವರ್‌, ಅರವಿಂದ್ ಬೆಲ್ಲದ ಮತ್ತಿತರ ನಾಯಕರನ್ನು ವಿಶ್ವಾಸ ತೆಗೆದುಕೊಳ್ಳಬೇಕಾಗುತ್ತದೆ.

ಬಿಎಸ್‌ವೈ ಪುತ್ರ ಎನ್ನುವ ಕಾರಣಕ್ಕೆ ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿಲ್ಲ: ವಿಜಯೇಂದ್ರ

2.ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 28 ಸ್ಥಾನಗಳ ಪೈಕಿ 25 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಅಷ್ಟು ಅಲ್ಲದಿದ್ದರೂ ಅದಕ್ಕೆ ಹತ್ತಿರವಾಗುವಷ್ಟು ಸ್ಥಾನಗಳನ್ನಾದರೂ ಗೆಲ್ಲಲೇಬೇಕು. ಇಲ್ಲದಿದ್ದರೆ ವರಿಷ್ಠರ ದೃಷ್ಟಿಯಲ್ಲಿ ವರ್ಚಸ್ಸು ಕುಸಿದಂತಾಗುತ್ತದೆ.

3.ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್‌ ತನ್ನದೇ ಆದ ತಂತ್ರಗಾರಿಕೆ ಮೂಲಕ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಲು ದಾಪುಗಾಲು ಇಡುತ್ತಿದೆ. ಅದರ ವೇಗಕ್ಕೆ ಬ್ರೇಕ್ ಹಾಕಿ ಮುಂದೆ ಸಾಗುವ ಅನಿವಾರ್ಯತೆ ಬಿಜೆಪಿಗೆ ಇದೆ.

4.ಹಾಲಿ ಸಂಸದರ ಪೈಕಿ ಅನೇಕ ಹಿರಿಯರಿಗೆ ಟಿಕೆಟ್ ನೀಡುವುದಿಲ್ಲ ಎಂಬ ವದಂತಿ ದಟ್ಟವಾಗಿದೆ. ಇದು ಪಕ್ಷದಲ್ಲಿ ಕಳೆದ ವಿಧಾನಸಭಾ ಚುನಾವಣೆ ವೇಳೆಯಂತೆ ದೊಡ್ಡ ಮಟ್ಟದ ಅಸಮಾಧಾನಕ್ಕೂ ಕಾರಣವಾಗಬಹುದು. ಇದನ್ನು ಆರಂಭದಲ್ಲೇ ಚಿವುಟಿ ಹಾಕುವ ಜವಾಬ್ದಾರಿ ವಿಜಯೇಂದ್ರ ಅವರ ಮೇಲಿದೆ.

News Hour: ಬಿಜೆಪಿ ನೊಗ ಹಿಡಿದ ವಿಜಯೇಂದ್ರಗೆ ಲೋಕಸಭೆ ಎಲೆಕ್ಷನ್ ಟಾಸ್ಕ್!

5.ತಂದೆ ಯಡಿಯೂರಪ್ಪ ಅವರ ಪ್ರಭಾವದಿಂದ ಹೊರಬಂದು ತಮ್ಮದೇ ಆದ ಸ್ವಂತ ವರ್ಚಸ್ಸು ರೂಪಿಸಿಕೊಳ್ಳಬೇಕಾಗುತ್ತದೆ. ಇಲ್ಲದಿದ್ದರೆ ಯಡಿಯೂರಪ್ಪ ನಂತರ ಮುಂದೇನು ಎಂಬ ಪ್ರಶ್ನೆ ಬೃಹದಾಕಾರವಾಗಿ ಉದ್ಭವಿಸಬಹುದು.

6.ಲಿಂಗಾಯತ ಸಮುದಾಯದ ನಾಯಕರಾಗಿ ಹೊರಹೊಮ್ಮುವುದರ ಜತೆಗೆ ಎಲ್ಲ ಸಮುದಾಯಗಳ ವಿಶ್ವಾಸ ಗಳಿಸಿ, ಉಳಿಸಿಕೊಂಡು ಹೋಗಬೇಕಾಗುತ್ತದೆ.

7.ಬಿಜೆಪಿಯಿಂದ ಬೇಸತ್ತು ಅಥವಾ ಕಾಂಗ್ರೆಸ್ಸಿನ ಆಮಿಷಕ್ಕೆ ಒಳಗಾಗಿ ಹಲವು ಮುಖಂಡರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಅವರನ್ನು ಹಿಡಿದಿಟ್ಟುಕೊಂಡು ವಿಶ್ವಾಸ ಮೂಡಿಸಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್