ಕಾಂಗ್ರೆಸ್‌ ಗೆದ್ದಾಗಿನಿಂದ ಗೂಂಡಾ ರಾಜ್ಯ ನಿರ್ಮಾಣ: ಕಟೀಲ್‌

Published : May 17, 2023, 10:38 AM IST
ಕಾಂಗ್ರೆಸ್‌ ಗೆದ್ದಾಗಿನಿಂದ ಗೂಂಡಾ ರಾಜ್ಯ ನಿರ್ಮಾಣ: ಕಟೀಲ್‌

ಸಾರಾಂಶ

ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿ​ಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ ಜನ ಹಿತ ಮರೆತಿದೆ. ಅಧಿ​ಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ತಾಲಿಬಾನ್‌ ಸಂಸ್ಕೃತಿ ಆರಂಭವಾಗಿದೆ: ನಳಿನ್‌ ಕುಮಾರ್‌ ಕಟೀಲ್‌ 

ಹೊಸಕೋಟೆ(ಮೇ.17): ರಾಜ್ಯದಲ್ಲಿ ಕಾಂಗ್ರೆಸ್‌ ಅಧಿ​ಕಾರಕ್ಕೆ ಬಂದ ದಿನದಿಂದ ಪಕ್ಷದ ಕಾರ್ಯಕರ್ತರು ಗೂಂಡಾ ಪ್ರವೃತ್ತಿ ಮುಂದುವರಿಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ಹಲ್ಲೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಆರೋಪಿಸಿದರು.

ತಾಲೂಕಿನ ನಂದಗುಡಿ ಹೋಬಳಿ ಡಿ.ಶೆಟ್ಟಹಳ್ಳಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ ವೇಳೆ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಮಾತನಾಡಿದರು. ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿ​ಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ ಜನ ಹಿತ ಮರೆತಿದೆ. ಅಧಿ​ಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ತಾಲಿಬಾನ್‌ ಸಂಸ್ಕೃತಿ ಆರಂಭವಾಗಿದೆ. ಪೊಲೀಸ್‌ ಇಲಾಖೆ ಇದನ್ನು ನಿಯಂತ್ರಣ ಮಾಡಿ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಬಿಜೆಪಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾಂಗ್ರೆಸ್‌ ವಿಜಯೋತ್ಸವ ವೇಳೆ ಗಲಾಟೆ: ಬಿಜೆಪಿ ಕಾರ‍್ಯಕರ್ತನ ಕೊಲೆ!

6 ಲಕ್ಷ ನೆರವು: 

ಹೊಸಕೋಟೆಯ ಎಂ.ವಿ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೃತ ಕೃಷ್ಣಪ್ಪ ಅವರ ಕುಟುಂಬಸ್ಥರನ್ನು ಭೇಟಿಯಾದ ಬಿಜೆಪಿ ಮುಖಂಡರಾದ ಕೆ.ಎಸ್‌.ಈಶ್ವರಪ್ಪ, ಅಶ್ವತ್ಥನಾರಾಯಣ, ಬೈರತಿ ಬಸವರಾಜು, ನಾರಾಯಣಸ್ವಾಮಿ ಹಾಗೂ ಎಂ.ಟಿ.ಬಿ.ನಾಗರಾಜ್‌ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ಡಿ.ಶೆಟ್ಟಿಹಳ್ಳಿಯಲ್ಲಿರುವ ಕೃಷ್ಣಪ್ಪ ಅವರ ಸ್ವಗೃಹಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಪಕ್ಷದಿಂದ .5 ಲಕ್ಷ, ಎಂ.ಟಿ.ಬಿ. ನಾಗರಾಜ್‌ ವೈಯಕ್ತಿಕವಾಗಿ 1 ಲಕ್ಷ ಆರ್ಥಿಕ ನೆರವು ವಿತರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!