ಆರ್‌ಎಸ್‌ಎಸ್‌ ಜಾತ್ಯತೀತ, ಸರ್ವಹಿತ ಸಂಘಟನೆ: ರಾಜಕುಮಾರ ಪಾಟೀಲ್ ತೆಲ್ಕೂರ

Published : Dec 09, 2023, 12:09 PM IST
ಆರ್‌ಎಸ್‌ಎಸ್‌ ಜಾತ್ಯತೀತ, ಸರ್ವಹಿತ ಸಂಘಟನೆ: ರಾಜಕುಮಾರ ಪಾಟೀಲ್ ತೆಲ್ಕೂರ

ಸಾರಾಂಶ

ಗೂಳಿಹಟ್ಟಿ ಶೇಖರ್ ಆರೋಪ ಶುದ್ಧ ಸುಳ್ಳು ಮತ್ತು ರಾಜಕೀಯ ದುರುದ್ದೇಶದ್ದಾಗಿದೆ. ಆರೆಸ್ಸೆಸ್ ಕೇಂದ್ರ ಕಚೇರಿ, ಇತರ ಯಾವುದೇ ಕಚೇರಿಗಳಲ್ಲಿ ಜಾತಿ ಕೇಳಿ ಒಳಕ್ಕೆ ಬಿಡುವ ಪದ್ಧತಿಯೇ ಇಲ್ಲ ಎಂದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ   

ಕಲಬುರಗಿ(ಡಿ.09):  ರಾಷ್ಟ್ರೀಯ ಸ್ವಯಂ ಸೇವಕ ಸಂಘ ಜಾತ್ಯತೀತ ಹಾಗೂ ಸರ್ವಹಿತ ಸಂಘಟನೆಯಾಗಿದೆ, ಇಂತಹ ಸಂಘದ ವಿಚಾರದಲ್ಲಿ ಗೂಳಿಹಟ್ಟಿ ಶೇಖರ್ ಅವರಾಡಿದ ಮಾತುಗಳು ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ರಾಜ್ಯ ವಕ್ತಾರರು, ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗೂಳಿಹಟ್ಟಿ ಶೇಖರ್ ಆರೋಪ ಶುದ್ಧ ಸುಳ್ಳು ಮತ್ತು ರಾಜಕೀಯ ದುರುದ್ದೇಶದ್ದಾಗಿದೆ. ಆರೆಸ್ಸೆಸ್ ಕೇಂದ್ರ ಕಚೇರಿ, ಇತರ ಯಾವುದೇ ಕಚೇರಿಗಳಲ್ಲಿ ಜಾತಿ ಕೇಳಿ ಒಳಕ್ಕೆ ಬಿಡುವ ಪದ್ಧತಿಯೇ ಇಲ್ಲ ಎಂದಿದ್ದಾರೆ.

ಕಲಬುರಗಿ: ಶಿಕ್ಷಕಿಯಾದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌

ತಾವು ಸಂಘ ಪರಿವಾರದಲ್ಲಿ ವಿದ್ಯಾರ್ಥಿ ದಿಸೆಯಿಂದ ಕಾರ್ಯ ನಿರ್ವಹಿಸಿದ್ದಾಗಿ ಹೇಳಿರುವ ಅವರು ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ ಮೆರೆಯುವ ಸಂಘದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ಕೆಲಸ ಮಾಡಲಾಗುತ್ತಿದೆ. ಗೂಳಿಹಟ್ಟಿಯವರು ಒಂದೆರಡು ಬೈಠಕ್ ನಲ್ಲಿ ಭಾಗಿಯಾದರೆ ಆರ್.ಎಸ್.ಎಸ್ ಎಂತಹ ದೇಶ ಭಕ್ತ ಸಂಘಟನೆ ಎಂದು ಅವರಿಗೆ ತಿಳಿಯಲಿದೆ ಎಂದಿದ್ದಾರೆ.

ಸುಳ್ಳು ಹೇಳುವುದು, ಗಾಳಿಯಲ್ಲಿ ಗುಂಡು ಹಾರಿಸುವ ಪ್ರವೃತ್ತಿಯಿಂದ ಗೂಳಿಹಟ್ಟಿ ಸೇರಿದಂತೆ ಉಳಿದ ನಾಯಕರು ಹೊರ ಬರಬೇಕು. ಡಾ. ಅಂಬೇಡ್ಕರ್ ಅವರಿಗೆ ಕೈ ನಾಯಕರು ತೋರಿದ ಅಗೌರವ ದೇಶದ ಜನತೆಗೆ ಗೊತ್ತಿದೆ. ಅಂಬೇಡ್ಕರ್ ಓದಿದ ಶಾಲೆ, ವಾಸಿಸಿದ ಮನೆ ಸೇರಿ 5 ಸ್ಥಳಗಳನ್ನು ಗುರುತಿಸಿ ಅವುಗಳನ್ನು ಅಭಿವೃದ್ಧಿ ಪಡಿಸಿದ್ದು ಪ್ರಧಾನಿ ನರೇಂದ್ರ ಮೋದಿ. ಬಿಜೆಪಿ ಕೇವಲ ವೋಟ್ ಗಾಗಿ ಅಲ್ಲ ದೇಶದ ಸರ್ವರ ಮತ್ತು ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಲ್ಲಿ ಕೆಲಸ ಮಾಡುತ್ತದೆ ಎಂದು ತೇಲ್ಕೂರ್‌ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ