
ಬೆಂಗಳೂರು, [ಫೆ.03]: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿದ್ದು, ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ಲಾಬಿ ಜೋರಾಗಿದೆ.
ಇದಕ್ಕೆ ಪುಷ್ಠಿ ನೀಡುವಂತೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಸಚಿವ ಡಿ.ವಿ ಸದಾನಂದಗೌಡ ಮತ್ತು ರಾಷ್ಟ್ರೀಯ ರೈತ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಡಾ. ಹೆಚ್.ಎನ್ ಚಂದ್ರಶೇಖರ್ ನಡುವೆ ಟಿಕೆಟ್ಗಾಗಿ ಫೈಟ್ ನಡೆದಿದೆ.
ಡಿ.ವಿ. ಸದಾನಂದ ಗೌಡ ಚುನಾವಣಾ ಸ್ಪರ್ಧೆ ಎಲ್ಲಿಂದ..?
ಈಗಾಗಲೇ ಚಂದ್ರಶೇಖರ್ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ನಾಯಕರನ್ನ ಒತ್ತಾಯಿಸಿದ್ದಾರೆ. ಇನ್ನು ಚುನಾವಣೆಗೆ ಸ್ಪರ್ಧೆ ಕುರಿತಂತೆ ಬಿಜೆಪಿ ಕಚೇರಿಯಲ್ಲಿ ಮಾತನಾಡಿರುವ ಚಂದ್ರಶೇಖರ್, 'ನಾನೂ ಕೂಡ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿ.
ಡಿ.ವಿ.ಸದಾನಂದಗೌಡ ಹಾಲಿ ಸಂಸದರು, ಸಚಿವರಾಗಿದ್ದಾರೆ. ಆದರೆ, ನಾನು ಕಳೆದ ಬಾರಿ ಕೂಡ ಪಕ್ಷದ ನಾಯಕರನ್ನು ಕೇಳಿದ್ದೆ. ಈ ಬಾರಿಯೂ ಟಿಕೆಟ್ ನೀಡುವಂತೆ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರಲ್ಲಿ ಮನವಿ ಮಾಡಿದ್ದೇನೆ' ಎಂದು ಹೇಳಿದರು.
ರಾಜಕೀಯ ಹುಟ್ಟು ನೀಡಿದ ಪುತ್ತೂರು ಕೊಂಡಿ ಕಳೆದುಕೊಂಡರೆ ಸದಾನಂದ ಗೌಡ?
ಆದ್ರೆ ಬೆಂಗಳೂರು ಉತ್ತರ ಟಿಕೆಟ್, ಹಾಲಿ ಸಂಸದ, ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ ಅವರಿಗೆ ನೀಡುವುದು ಬಹುತೇಕ ಖಚಿತವಾಗಿದೆ. ನೂರಕ್ಕೆ ನೂರು ಸದಾನಂದಾಗೌಡ ಅವರಿಗೆ ಟಿಕೆಟ್. ಒಂದು ವೇಳೆ ರಾಜಕೀಯ ಪರಿಸ್ಥಿತಿ ಬದಲಾದರೆ ಕೊನೆಗಳಿಗೆಯಲ್ಲಿ ಡಿವಿಎಸ್ ಗೆ ಟಿಕೆಟ್ ಕೈತಪ್ಪಿದರೂ ಆಶ್ಚರ್ಯ ಪಡಬೇಕಿಲ್ಲ.
ಇನ್ನೊಂದು ಪ್ರಮುಖ ವಿಷಯ ಅಂದರೆ ಇದೇ ಬೆಂಗಳೂರು ಉತ್ತರದಿಂದ ಮಾಜಿ ಪ್ರಧಾನಿ ದೇವೇಗೌಡ ಅವರು ಸ್ಪರ್ಧಿಸುತ್ತಾರೆ ಎನ್ನುವ ಮಾತುಗಳು ಹರಿದಾಡುತ್ತಿವೆ.
ಒಂದು ವೇಳೆ ದೇವೇಗೌಡ ಅವರು ಸ್ಪರ್ಧೆ ಮಾಡಿದರೆ ಬಿಜೆಪಿ ಗೆಲುವು ಕಷ್ಟ ಸಾಧ್ಯ. ಯಾಕಂದ್ರೆ ಈ ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಒಟ್ಟಾಗಿ ಎದುರಿಸುತ್ತಿದ್ದು, ಎರಡು ಪಕ್ಷಗಳ ಮತಗಳು ಒಂದಾಗುತ್ತವೆ.
ಇನ್ನು ಕಾಂಗ್ರೆಸ್ ನಿಂದ ಎಚ್.ಎಂ. ರೇವಣ್ಣ ಕೂಡ ಬೆಂಗಳೂರು ಉತ್ತರ ಲೋಕಸಭಾ ಕ್ಚೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.