ಮರುಭೂಮಿಯಲ್ಲೂ ಬೆಳೆ ಬೆಳೆದ ಬಿಜೆಪಿ: ಅರವವಿಂದ ಲಿಂಬಾವಳಿ

Kannadaprabha News   | Asianet News
Published : Nov 11, 2020, 08:06 AM IST
ಮರುಭೂಮಿಯಲ್ಲೂ ಬೆಳೆ ಬೆಳೆದ ಬಿಜೆಪಿ: ಅರವವಿಂದ ಲಿಂಬಾವಳಿ

ಸಾರಾಂಶ

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಚುನಾವಣಾ ರಣ ನೀತಿ ವಿಫಲವಾಗಿಲ್ಲ, ಪ್ರಚಾರದ ವೇಳೆ ಎಲ್ಲಿಯೂ ನಾವು ಪಕ್ಷದ ಅಭ್ಯರ್ಥಿಗೆ ಹಿನ್ನಡೆಯಾಗುತ್ತದೆ ಎಂದು ಕೂಡ ಭಾವಿಸಿರಲಿಲ್ಲ. ಅಧಿಕ ಅಂತರದಿಂದ ಗೆಲ್ಲುತ್ತೇವೆ ಎಂದು ಹೇಳಿದ್ದು, ಅದರಂತೆ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದ ಹೇಳಿದ ಲಿಂಬಾವಳಿ 

ಬೆಂಗಳೂರು(ನ.11):  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರ ಆಡಳಿತ ನೋಡಿ ಉಪ ಚುನಾವಣೆಯಲ್ಲಿ ಮತ ನೀಡಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಮಂಗಳವಾರ ಫಲಿತಾಂಶದ ಬೆನ್ನಲ್ಲೇ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿರಾ ಕ್ಷೇತ್ರ ಬಿಜೆಪಿ ಪಾಲಿಗೆ ಮರುಭೂಮಿ ಆಗಿತ್ತು. ಒಮ್ಮೆಯೂ ಕೂಡ ಕ್ಷೇತ್ರದಲ್ಲಿ ವಿಜಯದ ಪಾತಾಕೆ ಹರಿಸಿದೆ. ಕಾಂಗ್ರೆಸ್‌ನ ದುರಾಡಳಿ ಹಾಗೂ ಜನ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ. ನಾಯಕತ್ವದ ಸಮಸ್ಯೆಯೇ ಉದ್ಭವವಾಗಿಲ್ಲ. ಯತ್ನಾಳ ಅವರ ಹೇಳಿಕೆ ಬಗ್ಗೆ ರಾಜ್ಯಾಧ್ಯಕ್ಷರು ಈಗಾಗಲೇ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.

'ಕಾಂಗ್ರೆಸ್ ಸೋಲಿಗೆ ಡಿಕೆಶಿ-ಸಿದ್ರಾಮಯ್ಯರಿಂದಲೇ ಮಾಸ್ಟರ್ ಪ್ಲಾನ್ : ಬಿಜೆಪಿ ಗೆಲುವು ಕನ್ಫರ್ಮ್'

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಚುನಾವಣಾ ರಣ ನೀತಿ ವಿಫಲವಾಗಿಲ್ಲ. ಪ್ರಚಾರದ ವೇಳೆ ಎಲ್ಲಿಯೂ ನಾವು ಪಕ್ಷದ ಅಭ್ಯರ್ಥಿಗೆ ಹಿನ್ನಡೆಯಾಗುತ್ತದೆ ಎಂದು ಕೂಡ ಭಾವಿಸಿರಲಿಲ್ಲ. ಅಧಿಕ ಅಂತರದಿಂದ ಗೆಲ್ಲುತ್ತೇವೆ ಎಂದು ಹೇಳಿದ್ದು, ಅದರಂತೆ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದ ಹೇಳಿದರು. ವಿಶ್ವಾಸವಿಟ್ಟು ಮತ ನೀಡಿದ ಎಲ್ಲ ಮತದಾರರಿಗೂ ಧನ್ಯವಾದಗಳು ಎಂದರು. ಈ ವೇಳೆ ಸಚಿವ ಕೆ.ಗೋಪಾಲಯ್ಯ ಹಾಗೂ ಬಿಜೆಪಿ ವಕ್ತಾರ ಗಣೇಶ್‌ ಕಾರ್ಣಿಕ್‌ ಇದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ