ಕೆಲವರಿಗೆ ನನ್ನ ಮೇಲೆ ಹೆಚ್ಚು ಪ್ರೀತಿ: ತಮ್ಮದೇ ಪಕ್ಷದ ಸಚಿವಗೆ ವಿಜಯೇಂದ್ರ ಟಾಂಗ್

Published : May 28, 2021, 10:29 PM IST
ಕೆಲವರಿಗೆ ನನ್ನ ಮೇಲೆ ಹೆಚ್ಚು ಪ್ರೀತಿ: ತಮ್ಮದೇ ಪಕ್ಷದ ಸಚಿವಗೆ ವಿಜಯೇಂದ್ರ ಟಾಂಗ್

ಸಾರಾಂಶ

* ನಾಯಕರ ಮಕ್ಕಳು ಅಧಿಕಾರದಲ್ಲಿ ಹಸ್ತಕ್ಷೇಪ ಎಂಬ ಯೋಗೇಶ್ವರ್ ಹೇಳಿಕೆಗೆ ಬಿವೈ ವಿಜಯೇಂದ್ರ ತಿರುಗೇಟು *  ಕೆಲವರಿಗೆ ನನ್ನ ಮೇಲೆ ಹೆಚ್ಚು ಪ್ರೀತಿ ಎಂದು ಬಿಜೆಪಿ ಉಪಾಧ್ಯಕ್ಷ * ಸಚಿವ ಸಿ.ಪಿ.ಯೋಗೇಶ್ವರ್‌ಗೆ ಸಿಎಂ ಪುತ್ರ ವಿಜಯಂದ್ರ 

ಬೆಂಗಳೂರು, (ಮೇ.28): ಕೆಲವರಿಗೆ ನನ್ನ ಮೇಲೆ ಹೆಚ್ಚು ಪ್ರೀತಿ ಎಂದು ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ನಾಯಕರ ಮಕ್ಕಳು ಅಧಿಕಾರದಲ್ಲಿ ಹಸ್ತಕ್ಷೇಪ ಮಾಡ್ತಿದ್ದಾರೆ ಅನ್ನೋ ಸಿ.ಪಿ. ಯೋಗೇಶ್ವರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ.. ಅವರದ್ದು 30-40 ವರ್ಷದ ಹೋರಾಟ, ಕಾರ್ಯಕರ್ತರ ಪರಿಶ್ರಮದಿಂದ ಮುಖ್ಯಮಂತ್ರಿಯಾಗಿದ್ದಾರೆ. ಅವರ ಅನುಭವದ ಮುಂದೆ ನಮ್ಮದು ಏನೂ ಇಲ್ಲ. ರಾಜಕೀಯ ಕಾರಣಕ್ಕೆ ಈ ರೀತಿ ಹೇಳುತ್ತಿದ್ದಾರೆ ಎಂದು ದೂರಿದರು.

ದಿಲ್ಲಿಗೆ ಹೋದವರಿಗೆ ಸೂಕ್ತ ಉತ್ತರ ಕೊಟ್ಟಿದ್ದಾರೆ: ಬಿಎಸ್‌ವೈ

ನಾನು ಉಪಾಧ್ಯಕ್ಷನಿದ್ದೇನೆ. ನನ್ನದೇ ಆದ ಸೇವೆಗಳನ್ನ ಮಾಡುತ್ತಿದ್ದೇವೆ. ಅಶೋಕ್ ಸರ್ ಹೇಳಿದ್ರು.. ಕೆಲವರಿಗೆ ಮಾತನಾಡುವ ಚಟ ಅಂತ. ನಾನು ಹೇಳ್ತೀನಿ, ಕೆಲವರಿಗೆ ನನ್ನ ಮೇಲೆ ಹೆಚ್ಚು ಪ್ರೀತಿ. ನನ್ನ ಕಾರ್ಯಚಟುವಟಿಕೆಯಲ್ಲಿ ನಾನು ಕೆಲಸ ಮಾಡುತ್ತೇನೆ ಎಂದರು.

ದೆಹಲಿ-ಬೆಂಗಳೂರು, ಬೆಂಗಳೂರು- ದೆಹಲಿ ಮೇಲಿಂದ ಮೇಲೆ ಪ್ರಯಾಣ ಮಾಡಿ, ರಾಜ್ಯ ನಾಯಕರ ಪಾಲಿಗೆ ಪ್ರವಾಸೋದ್ಯಮ ಸಚಿವ, ಸೈನಿಕ, ಸಿ.ಪಿ‌. ಯೋಗೇಶ್ವರ್ ಖಳನಾಯಕರಾದ್ರಾ ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಶುರುವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಾರಿಗೆ ಇಲಾಖೆಗೆ ನಕಲಿ ವ್ಯಾಸಂಗ ಪತ್ರ ದಾಖಲೆ ನೀಡಿದರೆ ತನಿಖೆ: ಸಚಿವ ರಾಮಲಿಂಗಾರೆಡ್ಡಿ
ಉತ್ತರ ಕರ್ನಾಟಕಕ್ಕೆ ಕೊಟ್ಟ ಭರವಸೆ ಈಡೇರಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌.ಅಶೋಕ್‌