ಬಿಜೆಪಿ ಅಸ​ಮಾ​ಧಾ​ನಿ​ತರಿಗೆ ಊಟ ಹಾ​ಕ್ಸೋದೇ ಕಾಂಗ್ರೆ​ಸ್‌ ಕೆಲ​ಸ: ವಿಜ​ಯೇಂದ್ರ

Published : Sep 11, 2023, 02:30 AM IST
ಬಿಜೆಪಿ ಅಸ​ಮಾ​ಧಾ​ನಿ​ತರಿಗೆ ಊಟ ಹಾ​ಕ್ಸೋದೇ ಕಾಂಗ್ರೆ​ಸ್‌ ಕೆಲ​ಸ: ವಿಜ​ಯೇಂದ್ರ

ಸಾರಾಂಶ

ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಕೇವಲ ಸಚಿವರಿಗೆ ಹೊಸ ಕಾರ್‌ ಖರೀದಿಗೆ ಸರ್ಕಾರ ಆದ್ಯತೆ ನೀಡುತ್ತಿದೆ. ಬರಗಾಲ ಹಿನ್ನಲೆಯಲ್ಲಿ ರೈತರು ಬೀದಿ​ಗಿ​ಳಿ​ದಿ​ದ್ದಾ​ರೆ. ಕಂದಾಯ ಸಚಿವರು ಬರ ಘೋಷಣೆ ಮಾಡದೆ ಕಾಲಹರಣ ಮಾಡು​ತ್ತಿ​ದ್ದಾರೆ: ಶಾಸಕ ಬಿ.ವೈ.​ವಿ​ಜ​ಯೇಂದ್ರ 

ಶಿವಮೊಗ್ಗ(ಸೆ.11): ಬಿಜೆಪಿ ನಾಯಕರು ಮತ್ತು ಮಾಜಿ ಶಾಸಕರು, ಅಸಮಾಧಾನಿತರನ್ನು ಕರೆದು ಊಟ ಹಾಕಿಸುವುದೇ ಕಾಂಗ್ರೆಸ್‌ಗೆ ಒಂದು ಕೆಲಸ ಆಗಿದೆ. ಕಾಂಗ್ರೆಸ್‌ ಪಕ್ಷ ಸೇರ್ಪಡೆ ಮಾಡ​ಲೆಂದೇ ಮುಖ್ಯ​ಮಂತ್ರಿ ಸಿದ್ದರಾಮಯ್ಯ ಅವರು ಒಂದು ಖಾತೆ ಸೃಷ್ಟಿಮಾಡಲಿ, ಈ ಖಾತೆ ಜವಾಬ್ದಾರಿಯನ್ನು ಡಿ.ಕೆ.​ಶಿ​ವ​ಕು​ಮಾರ್‌ ಅವ​ರಿಗೆ ನೀಡಲಿ ಎಂದು ರಾಜ್ಯ ಬಿಜೆಪಿ ಉಪಾ​ಧ್ಯಕ್ಷ, ಶಾಸಕ ಬಿ.ವೈ.​ವಿ​ಜ​ಯೇಂದ್ರ ಹೇಳಿ​ದ​ರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಕೇವಲ ಸಚಿವರಿಗೆ ಹೊಸ ಕಾರ್‌ ಖರೀದಿಗೆ ಸರ್ಕಾರ ಆದ್ಯತೆ ನೀಡುತ್ತಿದೆ. ಬರಗಾಲ ಹಿನ್ನಲೆಯಲ್ಲಿ ರೈತರು ಬೀದಿ​ಗಿ​ಳಿ​ದಿ​ದ್ದಾ​ರೆ. ಕಂದಾಯ ಸಚಿವರು ಬರ ಘೋಷಣೆ ಮಾಡದೆ ಕಾಲಹರಣ ಮಾಡು​ತ್ತಿ​ದ್ದಾರೆ. ಗ್ಯಾರಂಟಿ ಜಾತ್ರೆಯಲ್ಲಿ ಮುಳುಗಿಹೋಗಿರುವ ರಾಜ್ಯ ಸರ್ಕಾರ ವಾಸ್ತವ ಪರಿಸ್ಥಿತಿ ಅರ್ಥ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ ಎಂದರು. ಕಾರ್ಯಕರ್ತರು ನಾನೇ ರಾಜ್ಯಾಧ್ಯಕ್ಷನಾಗಬೇಕು ಎಂದು ಚರ್ಚೆ ಮಾಡುತ್ತಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ನಾನು ಶಾಸಕ ಸ್ಥಾನಕ್ಕೆ ಸಂತೃಪ್ತಿ ಆಗಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದರು.

ಉದಯನಿಧಿ ಹಿಂದೂ ಧರ್ಮವನ್ನು ವಿರೋಧಿಸುವ ತಲೆಕೆಟ್ಟ ರಾಜಕಾರಣಿ: ಸಂಸದ ರಾಘವೇಂದ್ರ

ಬಿಜೆಪಿಯಲ್ಲಿ ಲಿಂಗಾಯತರನ್ನು ಕಡೆಗಣಿಸುವ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿ ಎಲ್ಲ ಜಾತಿ-ಜನಾಂಗದವರಿಗೆ ಸಮಾನ ಅವಕಾಶ ಕಲ್ಪಿಸಲಾಗಿದೆ. ಈ ಹಿಂದಿನ ಚುನಾವಣೆ ವೇಳೆ ಗ್ಯಾರಂಟಿ ಹೆಸರಿನಲ್ಲಿ ಪ್ರಚಾರ ನಡೆಸಿದರು. ಈ ಬಾರಿ ಜಾತಿ ಹೆಸರಿನಲ್ಲಿ ಪ್ರಚಾರ ನಡೆಸಲು ಮುಂದಾಗಿದ್ದಾರೆ ಎಂದು ತಿರುಗೇಟು ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ