
ಚಿಕ್ಕಮಗಳೂರು, (ನ.03): ತೀವ್ರ ಕುತೂಹಲ ಮೂಡಿಸಿರುವ ಆರ್ಆರ್ ನಗರ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಅಂತ್ಯವಾಗಿದ್ದು, ಲಿತಾಂಶ ಇದೇ ನವೆಂಬರ್ 10ರಂದು ಪ್ರಕಟವಾಗಲಿದೆ.
ಇನ್ನು ಫಲಿತಾಂಶಕ್ಕೂ ಮುನ್ನವೇ ಮೂರು ಪಕ್ಷಗಳಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಇದರ ಮಧ್ಯೆ ಪಕ್ಷದ ಆಂತರಿಕ ವರದಿ ಪ್ರಕಾರ ಶಿರಾ, ಆರ್.ಆರ್. ನಗರ ಎರಡೂ ಕ್ಷೇತ್ರಗಳಲ್ಲೂ ದೊಡ್ಡ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
'ಬಕೆಟ್ ಹಿಡಿಯುವ ರಾಜಕಾರಣಿ ನಾನಲ್ಲ, ರಾಜೀನಾಮೆ ಅಂಗೀಕಾರಕ್ಕೆ ಸಿಎಂಗೆ ಮನವಿ'
ಇಂದು (ಮಂಗಳವಾರ) ಚಿಕ್ಕಮಗಳೂರಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಬಿಜೆಪಿ ಭದ್ರಕೋಟೆ. ಅಲುಗಾಡಿಸಲು ಪ್ರಯತ್ನಿಸಿದವರೇ ಕುಸಿಯುತ್ತಾರೆ. ಪಕ್ಷದ ಆಂತರಿಕ ವರದಿ ಪ್ರಕಾರ ಶಿರಾ, ಆರ್.ಆರ್. ನಗರ ಎರಡೂ ಕ್ಷೇತ್ರಗಳಲ್ಲೂ ದೊಡ್ಡ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ' ಎಂದರು.
ಕಾಂಗ್ರೆಸ್ನವರು ಇವಿಎಂ ಮೇಲೆ ಆರೋಪ ಶುರು ಮಾಡಿದ್ದಾರೆ ಎಂದರೆ ಸೋಲು ಗ್ಯಾರಂಟಿ ಎಂಬುದು ಅವರಿಗೆ ತೀರ್ಮಾನವಾಗಿದೆ ಎಂದರ್ಥ. ಗೆದ್ದರೆ ಜನಾದೇಶ ಎನ್ನುತ್ತಾರೆ, ಸೋತರೆ ಇವಿಎಂ ದೋಷ ಎನ್ನುತ್ತಾರೆ. ಚುನಾವಣೆಯಲ್ಲಿ ಸೋಲಾದಾಗ ಚುನಾವಣಾ ಆಯೋಗದ ಮೇಲೆ ಗೂಬೆ ಕೂರಿಸುವುದು. ಕೋರ್ಟ್ ತೀರ್ಪು ಬಂದಾಗ ನ್ಯಾಯಾಧೀಶರ ಮೇಲೆ ಅನುಮಾನ ಪಡುವುದು ಕಾಂಗ್ರೆಸ್ನ ಕಾಯಿಲೆ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.