'40 ಸಾವಿರ ಮತ ಅಂತರದಲ್ಲಿ ಬಿಜೆಪಿ ಗೆಲ್ಲುತ್ತೆ : ಅತ್ತೆ-ಸೊಸೆ ಬೇಗ ಒಂದಾಗಬೇಕು'

Kannadaprabha News   | Asianet News
Published : Nov 05, 2020, 08:05 AM IST
'40 ಸಾವಿರ ಮತ ಅಂತರದಲ್ಲಿ ಬಿಜೆಪಿ ಗೆಲ್ಲುತ್ತೆ : ಅತ್ತೆ-ಸೊಸೆ ಬೇಗ ಒಂದಾಗಬೇಕು'

ಸಾರಾಂಶ

ಆರ್‌ ಆರ್‌ ನಗರ ಕ್ಷೇತ್ರದಲ್ಲಿ ಬಿಜೆಪಿ 40 ಸಾವಿರ ಅಂತರದಲ್ಲಿ ಗೆಲುವು ಸಾಧಿಸಲಿದೆ ಎನ್ನುವ ವಿಶ್ವಾಸವನ್ನು ಮುಖಂಡರೋರ್ವರು ಹೊರಹಾಕಿದ್ದಾರೆ

ಬೆಂಗಳೂರು (ನ.05):  ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 30-40 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೊರೋನಾ ಭೀತಿಯಿಂದಾಗಿ ವಲಸೆ ಕಾರ್ಮಿಕರು ಸ್ವಗ್ರಾಮಕ್ಕೆ ತೆರಳಿದ್ದು, ಶೇ.60ರಷ್ಟುಮಂದಿ ವಾಪಸ್‌ ಬೆಂಗಳೂರಿಗೆ ಬಂದಿಲ್ಲ. ಆರ್‌.ಆರ್‌.ನಗರದಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಸ್ಥಳೀಯ ನಾಯಕರೆಲ್ಲಾ ಬಿಜೆಪಿ ಬಂದಿರುವುದರಿಂದ ಮುನಿರತ್ನ ಗೆಲುವು ಸಾಧಿಸುವುದರಲ್ಲಿ ಯಾವುದೇ ಅನುಮಾನ ಇಲ್ಲ. ಕಾಂಗ್ರೆಸ್‌ ಓಟ್‌ ಬ್ಯಾಂಕ್‌ ಎಂದು ನಂಬಿದ್ದವರು ಮತ ಹಾಕಿಲ್ಲ. ಬಿಜೆಪಿಯ ಕಾರ್ಯಕರ್ತರು, ಪಕ್ಷದ ಪಾರಂಪರಿಕ ಮತದಾರರೆಲ್ಲಾ ಬಂದು ಮತದಾನ ಮಾಡಿದ್ದಾರೆ. ಹೀಗಾಗಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಚಿತ ವಿತರಣೆ: ಸೆಟ್‌ಟಾಪ್‌ ಬಾಕ್ಸ್‌ ಆನ್‌ ಮಾಡಿದರೆ ಮುನಿರತ್ನ ಫೋಟೋ..! .

ದಿವಂಗತ ಡಿ.ಕೆ.ರವಿ ಅವರ ತಾಯಿ ನೀಡಿದ್ದಾರೆ ಎನ್ನಲಾದ ಹೇಳಿಕೆಯಿಂದ ಮತದಾರರ ಮೇಲೆ ಪರಿಣಾಮ ಬೀರುವುದಿಲ್ಲ. ಡಿ.ಕೆ.ಸಹೋದರರು ಮಾಡಿರುವ ಗಿಮಿಕ್‌ ಅದು. ಮಾಧ್ಯಮಗಳ ಮುಂದೆ ಹೇಳಬೇಕಾಗಿತ್ತು. 

ಆದರೆ ಮಾಧ್ಯಮಗಳ ಮುಂದೆ ಹೇಳಿಲ್ಲ. ವಿಡಿಯೋ ಹೇಳಿಕೆಯನ್ನು ನಂಬಲು ಕಷ್ಟ. ಅದರೂ ಅವರ ಸಂಸಾರ ಸರಿಹೋಗಲಿ, ಅತ್ತೆ-ಸೊಸೆ ಒಂದಾಗುವುದನ್ನು ನಾವು ಬಯಸುತ್ತೇವೆ ಮತ್ತು ಇದರಿಂದ ನಮಗೂ ಸಂತೋಷ ಎಂದರು.

ಶಿರಾ ಕ್ಷೇತ್ರಕ್ಕೂ ಆರ್‌.ಆರ್‌.ನಗರ ಕ್ಷೇತ್ರಕ್ಕೂ ಹೋಲಿಕೆ ಮಾಡಲು ಆಗುವುದಿಲ್ಲ. ಎರಡು ಕ್ಷೇತ್ರಗಳು ವಿಭಿನ್ನವಾಗಿವೆ. ಎರಡೂ ಕ್ಷೇತ್ರದಲ್ಲಿಯೂ ಬಿಜೆಪಿ ಜಯಗಳಿಸಲಿದೆ ಎಂದು ಇದೇ ವೇಳೆ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂದಿನಿಂದ ಕಾವೇರಲಿದೆ ಉತ್ತರ ಕರ್ನಾಟಕದ ಚರ್ಚೆ-3 ದಿನ ವಿಧಾನಮಂಡಲದಲ್ಲಿ ಈ ಬಗ್ಗೆ ಕಲಾಪ
ಅಧಿವೇಶನದಲ್ಲಿ ನಾವು ರಾಜ್ಯದ ರೈತರಿಗೋಸ್ಕರ ಹೋರಾಡುತ್ತೇವೆ: ಆರ್‌.ಅಶೋಕ್‌