
ರಾಯಚೂರು, (ನ.13): ಆರ್.ಆರ್.ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಗೆದ್ದು ಬೀಗಿರುವ ಬಿಜೆಪಿ, ಇದೀಗ ಮಸ್ಕಿ ಹಾಗೂ ಬಸವಕಲ್ಯಾಣ್ ಕ್ಷೇತ್ರಗಳ ಚಿತ್ತ ನೆಟ್ಟಿದೆ.
ಹೌದು....ಶಿರಾ ಉಸ್ತುವಾರಿಗಳಾಗಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಬಸವಕಲ್ಯಾಣದತ್ತ ಪ್ರಯಾಣ ಬೆಳೆಸಿದ್ದರೆ, ರಾಜ್ಯ ಬಿಜೆಪಿ ಪ್ರಧಾನಿ ಕಾರ್ಯದರ್ಶಿ ಎನ್.ರವಿ ಕುಮಾರ್ ಅವರು ಮಸ್ಕಿ ಕ್ಷೇತ್ರದ ಅಖಾಡಕ್ಕಿಳಿದಿದ್ದಾರೆ.
ಮಸ್ಕಿಗೆ ಬಂದಿಳಿದುರವ ರವಿ ಕುಮಾರ್ ಅವರನ್ನ ಬಿಜೆಪಿಯ ಸಂಭವನೀಯ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರು ಸ್ವಾಗತಿಸಿದರು. ಬಳಿಕ ಸುದ್ದುಗಾರರೊಂದಿಗೆ ಮಾತನಾಡಿದ ರವಿ ಕುಮಾರ್, ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮತ್ತೆರೆಡು ಉಪಚುನಾವಣೆಗೆ ಬಿಜೆಪಿ ಸಜ್ಜು, ಅಖಾಡಕ್ಕಿಳಿದ ಉಸ್ತುವಾರಿಗಳು..!
ಈಗಾಗಲೇ ಎರಡು ಉಪಚುನಾವಣೆಯಲ್ಲಿ ಗೆದಿದ್ದೇವೆ. ಮಸ್ಕಿ ಕ್ಷೇತ್ರ ಈ ಮೊದಲು ಬಿಜೆಪಿ ವಶದಲ್ಲಿತ್ತು. ಈ ಬಾರಿ ಕೂಡ ಗೆಲವು ನಮ್ಮದೆ. ಮಸ್ಕಿ ಕ್ಷೇತ್ರದ ಚುನಾವಣಾ ಪೂರ್ವ ತಯಾರಿ ಪರಿಶೀಲನೆ ನಡೆಸುತ್ತೇನೆ ಎಂದರು.
ಮಸ್ಕಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿದ್ದು, ಮುಂದೆ ಹೆಚ್ಚಿನ ಅಭಿವೃದ್ಧಿಗೊಳಿಸಲಾಗುವುದು. ಈ ಭಾಗದ ನೀರಾವರಿ ಯೋಜನೆಯಾದ 5ಎ ಕಾಲುವೆ ಮಂಜೂರಿಗಾಗಿ ಉಪಚುನಾವಣೆ ಘೋಷಣೆ ಮಾಡುವ ಮೊದಲು ಮುಖ್ಯಮಂತ್ರಿಗೆ ಮನವಿ ಮಾಡಿ ಮಂಜೂರು ಮಾಡಿಸಲು ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.