ಮನಸ್ಸು ಮಾಡದ ಕಾಂಗ್ರೆಸ್, ಸುಲಭವಾಗಿ ಅಧಿಕಾರ ಹಿಡಿದ ಬಿಜೆಪಿ

Published : Feb 24, 2021, 04:03 PM IST
ಮನಸ್ಸು ಮಾಡದ ಕಾಂಗ್ರೆಸ್, ಸುಲಭವಾಗಿ ಅಧಿಕಾರ ಹಿಡಿದ ಬಿಜೆಪಿ

ಸಾರಾಂಶ

ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ಬೆನ್ನಲ್ಲೇ ಇದೀಗ ದಾವಣಗೆರೆ ಮಹಾನಗರ ಪಾಲಿಕೆ ಸರದಿ.

ದಾವಣಗೆರೆ, (ಫೆ.24):  ದಾವಣಗೆರೆ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಭರ್ಜರಿ 
ಗೆಲುವು ಸಾಧಿಸಿದೆ.

ಮೇಯರ್ ಆಗಿ ಎಸ್. ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾದರು. ಬುಧವಾರ ದಾವಣಗೆರೆಯ ನೂತನ ಮೇಯರ್ ಆಯ್ಕೆಗೆ ಚುನಾವಣೆ ನಡೆದಿದ್ದು, ಬಿಜೆಪಿ 29 ಮತಗಳನ್ನು ಪಡೆಯುವ ಮೂಲಕ ದಾವಣಗೆರೆ ಪಾಲಿಕೆ ಅಧಿಕಾರ ಹಿಡಿದಿದೆ. 

ಮೈಸೂರು ಮೇಯರ್ ಪಟ್ಟ ಜೆಡಿಎಸ್‌ಗೆ, ಆದ್ರೂ ಕುಮಾರಸ್ವಾಮಿಗೆ ಭಾರೀ ಮುಖಭಂಗ

ಕಾಂಗ್ರೆಸ್ 22 ಮತಗಳನ್ನು ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿದೆ. ಈ ಮೂಲಕ 7 ಮತಗಳ ಅಂತರದಲ್ಲಿ ಬಿಜೆಪಿ ಮೇಯರ್, ಉಪಮೇಯರ್ ಸ್ಥಾನವನ್ನು ತನ್ನದಾಗಿಸಿಕೊಂಡಿತು.

ಬಿಜೆಪಿಯಿಂದ ಸಚಿವ ಆರ್. ಶಂಕರ್, ಸಂಸದ ಜಿ. ಎಂ. ಸಿದ್ದೇಶ್ವರ್, ಚಿದಾನಂದಗೌಡ ಸೇರಿದಂತೆ 29 ಸದಸ್ಯರು ಚುನಾವಣೆಯಲ್ಲಿ ಭಾಗಿಯಾದರು. ಕಾಂಗ್ರೆಸ್‌ನ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮೂವರು ಎಂಎಲ್‌ಸಿಗಳಾದ ಕೆ. ಸಿ. ಕೊಂಡಯ್ಯ, ರಘು ಆಚಾರ್, ಯು. ಬಿ. ವೆಂಕಟೇಶ್ ಗೈರಾದರು.

ಒಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಮನಸ್ಸು ಮಾಡದಿದ್ದರಿಂದ ಬಿಜೆಪಿ ಸರಳವಾಗಿ ಅಧಿಕಾರಕ್ಕೇರುವಲ್ಲಿ ಯಶಸ್ವಿಯಾಯ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ