ರೇಣುಕಾಚಾರ್ಯ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರ ಖಂಡನೆ: ಉಚ್ಚಾಟನೆಗೆ ವರಿಷ್ಠರಿಗೆ ಮನವಿ

Published : Oct 20, 2023, 02:49 PM IST
ರೇಣುಕಾಚಾರ್ಯ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರ ಖಂಡನೆ: ಉಚ್ಚಾಟನೆಗೆ ವರಿಷ್ಠರಿಗೆ ಮನವಿ

ಸಾರಾಂಶ

ರೇಣುಕಾಚಾರ್ಯರವರು ಬಿಜೆಪಿ ಪಕ್ಷದಲ್ಲಿ ಹಲವಾರು ರೀತಿಯ ಅಧಿಕಾರ, ಅಂತಸ್ತನ್ನು ಅನುಭವಿಸಿ ಇದೀಗ‌ ತಾನು ಬೆಳೆದು ಬಂದ  ಪಕ್ಷದ ಬಗ್ಗೆ ಮುಳುಗುವ ದೋಣಿ ಎಂದು ಹೇಳಿಕೆ ನೀಡುತ್ತಿರುವುದು ಖಂಡನೀಯ ಕೂಡಲೇ ಪಕ್ಷದ ವರಿಷ್ಠರು ಅವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಬೇಕು ಎಂದು ಬಿಜೆಪಿ ಪಕ್ಷದ ಒಬಿಸಿ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಸುರೇಶ್ ಗಂಡಗಾಳೆ ಒತ್ತಾಯಿಸಿದರು.  

ವರದಿ: ವರದರಾಜ್, ದಾವಣಗೆರೆ

ದಾವಣಗೆರೆ (ಅ.20): ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯರವರು ಬಿಜೆಪಿ ಪಕ್ಷದಲ್ಲಿ ಹಲವಾರು ರೀತಿಯ ಅಧಿಕಾರ, ಅಂತಸ್ತನ್ನು ಅನುಭವಿಸಿ ಇದೀಗ‌ ತಾನು ಬೆಳೆದು ಬಂದ  ಪಕ್ಷದ ಬಗ್ಗೆ ಮುಳುಗುವ ದೋಣಿ ಎಂದು ಹೇಳಿಕೆ ನೀಡುತ್ತಿರುವುದು ಖಂಡನೀಯ ಕೂಡಲೇ ಪಕ್ಷದ ವರಿಷ್ಠರು ಅವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಬೇಕು ಎಂದು ಬಿಜೆಪಿ ಪಕ್ಷದ ಒಬಿಸಿ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಸುರೇಶ್ ಗಂಡಗಾಳೆ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿ.ಜೆ.ಪಿ ಎಂದರೆ ಕಾರ್ಯಕರ್ತರು, ಕಾರ್ಯಕರ್ತರು ಎಂದರೆ ಬಿ.ಜೆ.ಪಿ ಎಂಬ ನಂಬಿಕೆ ಪ್ರತಿಯೊಬ್ಬ ಕಾರ್ಯಕರ್ತನಲ್ಲಿದೆ. ಆದರೆ ರೇಣುಕಾಚಾರ್ಯರ ಹೇಳಿಕೆಯಿಂದ ಲಕ್ಷಾಂತರ ನಿಷ್ಠಾವಂತ ಕಾರ್ಯಕರ್ತರಿಗೆ ನೋವು ಮತ್ತು ಅಗೌರವ ತೋರಿದಂತಾಗಿದೆ. ಇತ್ತೀಚಿನ ದಿನಗಳಲ್ಲಿ ರೇಣುಕಾಚಾರ್ಯರವರು ಮಾಜಿ ಸಿಎಂ .ಬಿ.ಎಸ್.ಯಡಿಯೂರಪ್ಪನವರ ಬಗ್ಗೆ ಅನುಕಂಪದ ಮಾತನಾಡುತ್ತಾರೆ. ಬಿಎಸ್ ವೈ ಸಿಎಂ ಆಗಿದ್ದಾಗ ರೇಣುಕಾಚಾರ್ಯ , ಗುಂಪುಗಾರಿಕೆ ಮಾಡುತ್ತಾ ನೆಮ್ಮದಿಯಿಂದ ಅಧಿಕಾರ ಮಾಡಲು ಅವಕಾಶ ನೀಡದೆ ಮಂತ್ರಿಗಿರಿಯನ್ನು ಗಿಟ್ಟಿಸಿಕೊಂಡಿದ್ದಾರೆ. 

ಎಂಪಿಆರ್ ಸಚಿವರಾಗಿ, ರಾಜಕೀಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡು ಗೂಟದ ಕಾರು, ಸರ್ಕಾರಿ ಬಂಗಲೆ, ಅಧಿಕಾರ, ಅಂತಸ್ತು ಎಲ್ಲವನ್ನೂ ಅನುಭವಿಸಿದರು.  ಇತ್ತೀಚಿನ ದಿನಗಳಲ್ಲಿ ಬಿಜೆಪಿ ಪಕ್ಷ ಮುಳುಗುವ ದೋಣಿಯಾಗಿದೆ ಎಂದು ಹೇಳಿಕೆ ನೀಡಿರುವುದು  ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವುಂಟಾಗಿದೆ. ಎಂ.ಪಿ.ರೇಣುಕಾಚಾರ್ಯರವರು ನಿಂತ ನೀರಿನಲ್ಲಿ ದೋಣಿಯನ್ನು ಚಲಾಯಿಸಿ ತಮ್ಮ ದೋಣಿಯನ್ನು ತಾವೇ ಮುಳುಗಿಸಿ ಕೊಳ್ಳುವಂತಹ ವಾತಾವರಣವನ್ನು ಸೃಷ್ಟಿ ಮಾಡಿಕೊಳ್ಳುತ್ತಿದ್ದಾರೆ ಎಂದರು.

ಸರ್ಕಾರ ಬೀಳಿಸೋ ತಾಕತ್ತು ಒಳಗಿನ ಕಾಂಗ್ರೆಸ್ಸಿಗರಿಗಿದೆ: ಸಿ.ಟಿ.ರವಿ

ರೇಣುಕಾಚಾರ್ಯ ಅವರು ನಿಷ್ಠಾವಂತ ಕಾರ್ಯಕರ್ತರಾಗಿದ್ದರೆ ಹಾದಿಬೀದಿಯಲ್ಲಿ ಮಾತನಾಡುವುದನ್ನು ಬಿಡಲಿ ಪಕ್ಷದಲ್ಲಿ ಇರುವುದಾದರೆ‌ ಗೌರವಯುತವಾಗಿರಲಿ ಇಲ್ಲವಾದಲ್ಲಿ ಗೌರವಯುತವಾಗಿ ಹೋಗಲಿ.ಮಾಧ್ಯಮಗಳ ಮುಂದೆ ಬಿಜೆಪಿ ಪಕ್ಷದ ಬಗ್ಗೆ ಅವಹೇಳನವಾಗಿ ಮಾತನಾಡುವುದು ಸರಿಯಲ್ಲ. ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಸದಸ್ಯ ಶಿವಾನಂದ,ಎಸ್.ಟಿ ಯೋಗೀಶ್ವರ್,ಜಿ.ಎಸ್ ಡಿ ಮೂರ್ತಿ,ಜಯಪ್ರಕಾಶ್, ಬಿ.ಟಿ ಲೋಕೇಶ್ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ