ಕುಮಾರಸ್ವಾಮಿ ಆಗಮನದಿಂದ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಬಲ: ಡಾ.ಕೆ.ಸುಧಾಕರ್‌

Published : Apr 06, 2024, 06:03 AM IST
ಕುಮಾರಸ್ವಾಮಿ ಆಗಮನದಿಂದ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಬಲ: ಡಾ.ಕೆ.ಸುಧಾಕರ್‌

ಸಾರಾಂಶ

ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗಮನದಿಂದಾಗಿ ಬಿಜೆಪಿ-ಜೆಡಿಎಸ್‌ ಮೈತ್ರಿಯ ಸಂಘಟನಾ ಚಟುವಟಿಕೆ ಇನ್ನಷ್ಟು ಬಿರುಸು ಪಡೆದಿದೆ.

ಚಿಕ್ಕಬಳ್ಳಾಪುರ (ಏ.06): ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗಮನದಿಂದಾಗಿ ಬಿಜೆಪಿ-ಜೆಡಿಎಸ್‌ ಮೈತ್ರಿಯ ಸಂಘಟನಾ ಚಟುವಟಿಕೆ ಇನ್ನಷ್ಟು ಬಿರುಸು ಪಡೆದಿದೆ. ಕೇಂದ್ರದಿಂದ ಹೆಚ್ಚು ಅನುದಾನ ಹಾಗೂ ಯೋಜನೆಗಳನ್ನು ತರುವ ಉದ್ದೇಶದಿಂದ ಈ ಬಾರಿಯೂ ಬಿಜೆಪಿ ಗೆಲ್ಲಿಸಬೇಕೆಂದು ಕಾರ್ಯಕರ್ತರು ಸಂದೇಶ ರವಾನಿಸುತ್ತಿದ್ದಾರೆ. ಮೈತ್ರಿ ರಾಜಕೀಯದಿಂದಾಗಿ ಈ ಭಾಗದಲ್ಲೀಗ ಬಿಜೆಪಿ ಸಂಘಟನೆ ಇನ್ನಷ್ಟು ಬಲವಾಗುತ್ತಾ ಸಾಗಿದೆ.

ಹಿಂದಿನ ದಿನ ನಾಮಪತ್ರ ಸಲ್ಲಿಕೆಯ ರೋಡ್‌ ಶೋಗೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಹಿರಿಯ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಡಾ.ಕೆ.ಸುಧಾಕರ್‌ ಅವರು ಉತ್ತಮ ವಾಗ್ಮಿ ಹಾಗೂ ಅಭಿವೃದ್ಧಿ ಚಿಂತಕರಾಗಿದ್ದು, ಸಂಸತ್ತಿನಲ್ಲಿ ಜನರ ಸಮಸ್ಯೆಗಳಿಗೆ ದನಿಯಾಗುವ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದ್ದರು. ಇದರಿಂದಾಗಿ ಜೆಡಿಎಸ್‌ ಕಾರ್ಯಕರ್ತರಲ್ಲಿ ಹೆಚ್ಚಿನ ಉತ್ಸಾಹ ಬಂದಿದ್ದು, ಮೈತ್ರಿ ರಾಜಕೀಯದಡಿ ಎಲ್ಲರೂ ಒಂದಾಗಿ ಕಾರ್ಯನಿರ್ವಹಿಸಬೇಕೆಂಬ ಸೂಚನೆ ನೀಡಲಾಗಿದೆ.

ಬಯಲುಸೀಮೆ ಭಾಗ್ಯ ಎತ್ತಿನಹೊಳೆ: ಅಲ್ಲದೆ ಬಯಲುಸೀಮೆ ಭಾಗಕ್ಕೆ ಅಗತ್ಯವಾಗಿರುವ ಎತ್ತಿನಹೊಳೆ ಯೋಜನೆ, ಪ್ರತ್ಯೇಕ ಹಾಲು ಒಕ್ಕೂಟ, ಕೈಗಾರಿಕಾಭಿವೃದ್ಧಿ ಮೊದಲಾದವುಗಳ ಬಗ್ಗೆಯೂ ಸಂದೇಶ ನೀಡಲಾಗಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಶೂನ್ಯವಾಗಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಯಾವುದೇ ವಿಧಾನಸಭಾ ಕ್ಷೇತ್ರಕ್ಕೂ ಅನುದಾನ ಬಂದಿಲ್ಲ. ಗ್ಯಾರಂಟಿ ಯೋಜನೆಗಳನ್ನು ಬಿಟ್ಟರೆ ಬೇರಾವುದೇ ಯೋಜನೆಗಳು ಬಾರದಿರುವುದು ಖಾತರಿಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರದಿಂದ ಅನುದಾನ ತಂದು ಯೋಜನೆಗಳನ್ನು ನೀಡುವುದಾಗಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಭರವಸೆ ನೀಡಿದ್ದಾರೆ. ಅಲ್ಲದೆ ಜಾತಿ ರಾಜಕಾರಣಕ್ಕೆ ಅಂಟಿಕೊಳ್ಳದೆ ಎಲ್ಲ ಜಾತಿ ಸಮುದಾಯಗಳನ್ನು ಒಂದಾಗಿ ಕರೆದೊಯ್ಯುವುದಾಗಿ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ಈ ಸಂದೇಶಗಳನ್ನೇ ಕಾರ್ಯಕರ್ತರು ಪ್ರಚಾರ ಕಾರ್ಯದ ವೇಳೆ ಜನರ ಮನೆಮನೆಗೆ ತಲುಪಿಸುತ್ತಿದ್ದಾರೆ.

ವೈಮನಸ್ಸು ಬದಗಿಟ್ಟು ಚುನಾವಣೆ ಎದುರಿಸಿ: ಸಿಎಂ ಸಿದ್ದು, ಡಿಸಿಎಂ ಡಿಕೆಶಿ

ಬಿಜೆಪಿಗೆ ಹೆಚ್ಚಿನ ಬಲ: ಈ ಹಿಂದೆ ಬಿಜೆಪಿ ಈ ಭಾಗದಲ್ಲಿ ದುರ್ಬಲವಾಗಿದ್ದು, ಜೆಡಿಎಸ್‌ ಹೆಚ್ಚು ಶಕ್ತಿಯುತವಾಗಿದೆ. ಡಾ.ಕೆ.ಸುಧಾಕರ್‌ ಸಚಿವರಾಗಿದ್ದ ಸಮಯದಲ್ಲಿ ಬಿಜೆಪಿಯ ಮತಗಳಿಕೆ ಪ್ರಮಾಣ ಹೆಚ್ಚಾಗಿತ್ತು. ಈಗ ಮೈತ್ರಿ ಇರುವುದರಿಂದ ಬಿಜೆಪಿಗೆ ಹೆಚ್ಚಿನ ಬಲ ಬಂದಿದ್ದು, ಪಕ್ಷದ ಸಂಘಟನೆ ಚುರುಕಾಗಿ ನಡೆಯುತ್ತಿದೆ. ಪರಸ್ಪರ ಸಹಕಾರವಿರುವುದರಿಂದ ಎರಡೂ ಪಕ್ಷಗಳ ಸಂಘಟನೆಗೆ ಹೊಸ ಚುರುಕು ದೊರೆತಿದೆ. ಈ ಭಾಗದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪ್ರಬಲವಾಗಿ ಬೆಳೆದಿದ್ದ ಕಾಂಗ್ರೆಸ್‌ ಪಕ್ಷವನ್ನು ಈ ಲೋಕಸಭಾ ಚುನಾವಣೆಯಲ್ಲಿ ದುರ್ಬಲವಾಗಿಸುವ ಗುರಿಯತ್ತ ಮುನ್ನಡೆಯಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ