ಚುನಾವಣೆ ಬಳಿಕ ಪೆನ್‌ಡ್ರೈವ್ ಬಾಂಬ್, ಸ್ವ ಪಕ್ಷದವರ ವಿರುದ್ಧವೇ ತೊಡೆ ತಟ್ಟಿದ ಬಿಕೆ ಹರಿಪ್ರಸಾದ್‌!

Published : Apr 12, 2024, 05:42 PM ISTUpdated : Apr 12, 2024, 05:43 PM IST
 ಚುನಾವಣೆ ಬಳಿಕ ಪೆನ್‌ಡ್ರೈವ್ ಬಾಂಬ್,  ಸ್ವ ಪಕ್ಷದವರ ವಿರುದ್ಧವೇ ತೊಡೆ ತಟ್ಟಿದ ಬಿಕೆ ಹರಿಪ್ರಸಾದ್‌!

ಸಾರಾಂಶ

ಬೆಳಗಾವಿಯಲ್ಲಿ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಪೆನ್‌ಡ್ರೈವ್ ಬಾಂಬ್ ಸಿಡಿಸಿದ್ದಾರೆ. ಚುನಾವಣೆ ಬಳಿಕ  ಸ್ವಪಕ್ಷದ ವಿರುದ್ಧ ಈ ಮೂಲಕ ಗುಡುಗಲಿದ್ದಾರೆ.

ಬೆಳಗಾವಿ (ಏ.12): ಬೆಳಗಾವಿಯಲ್ಲಿ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಪೆನ್‌ಡ್ರೈವ್ ಬಾಂಬ್ ಸಿಡಿಸಿದ್ದಾರೆ. ನಾನು ಸ್ಟಾರ್ ಕ್ಯಾಂಪೆನರ್. ನನ್ನ ಯಾರು ಉಪಯೋಗಿಸಿಕೊಳ್ಳಲು ಆಗುವುದಿಲ್ಲ. ನನ್ನ ಉಪಯೋಗ ಕಾಂಗ್ರೆಸ್ ಪಕ್ಷ ತೆಗೆದುಕೊಳ್ಳುತ್ತೆ. ವೈಯಕ್ತಿಕ ರಾಜಕಾರಣ ಬೇರೆ ಇದು ಬೇರೆ. ಇದು ಕಾಂಗ್ರೆಸ್ ಪಕ್ಷದ ದೇಶದ ರಾಜಕಾರಣ. ಏನೇ ಭಿನ್ನಾಭಿಪ್ರಾಯ ಇದ್ರೂ ಪೆನ್ ಡ್ರೈವ್ ನಲ್ಲಿಟ್ಟು ಆಮೇಲೆ ಹೇಳ್ತಿನಿ ಎಂದಿದ್ದಾರೆ.

ಹರಿಪ್ರಸಾದ್ ಉಪಯೋಗ ಮಾಡಿ ಬಿಟ್ಟು ಬಿಡ್ತಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಅದೇನೂ ತೊಂದರೆ ಇಲ್ಲಾ ನಾನು ಕಾಂಗ್ರೆಸ್ ಪಕ್ಷದ ಸೇವಾದಳದಿಂದ ಬೆಳೆದು ಬಂದವನು. ಯೂಸ್ ಮಾಡಿ ಬಿಡೋದು ಅದು ಬೇರೆ ಪ್ರಶ್ನೆ. ನಾವು ಕಾಂಗ್ರೆಸ್ ಪಕ್ಷಕ್ಕೆ ಬಂದಿರೋದು ಪಕ್ಷ ನನ್ನನ್ನ ಯೂಸ್ ಮಾಡಲಿ ಅಂತ. ಬೇರೆ ಯಾರಿಗೂ ನಾನು ಯೂಸ್ ಆಗಲು ಬಿಟ್ಟೇ ಇಲ್ಲ. ದೆಹಲಿಯಿಂದ ರಾಜಕಾರಣ ಮಾಡಿದ್ದೇನೆ ಕಾಂಗ್ರೆಸ್ ಪಕ್ಷಕ್ಕಾಗಿ ಮಾಡಿದ್ದೇನೆ ಎಂದರು.

ಹರಿಪ್ರಸಾದ್ ಬೆಳಸಿದವರೇ ಸಚಿವರಾಗಿದ್ದಾರೆ ಎಂಬ ವಿಚಾರಕ್ಕೆ, ನಾನು ಬೆಳಸಿದವರು ಬರೀ ಸಚಿವರಲ್ಲಾ ಇನ್ನು ಏನೇನೋ ಆಗಿದ್ದಾರೆ. ಅದಕ್ಕೆ ಎಲ್ಲವನ್ನೂ ಪೆನ್ ಡ್ರೈವ್ ನಲ್ಲಿ ಇಟ್ಟಿದ್ದೇನೆ. ಚುನಾವಣೆ ಆದ ಮೇಲೆ ಇಲ್ಲೇ ಬಂದು ಸುದ್ದಿಗೋಷ್ಠಿ ನಡೆಸುತ್ತೇನೆ. ರಾಜಕಾರಣದಲ್ಲಿ ಇದ್ದಾಗ ಅವೆಲ್ಲ ಬರ್ತಾ ಇರುತ್ತವೆ. ರಾಜಕಾರಣದಲ್ಲಿ ಹಲವಾರು ಮುಖವಾಡಗಳನ್ನ ನಾವು ನೋಡಬೇಕಾಗುತ್ತೆ. ಯಾರಾದರೂ ಏನೋ ಮಾಡಿದ್ರೆ ಅದಕ್ಕೆ ಉತ್ತರ ಕೊಡಲು ಆಗಲ್ಲ. ನನ್ನ ವೈಯಕ್ತಿಕ ನಿಷ್ಠೆ ಕಾಂಗ್ರೆಸ್ ಪಕ್ಷ, ತ್ರಿವರ್ಣ ಧ್ವಜ, ಎಐಸಿಸಿ ಅಧ್ಯಕ್ಷರ ಕುರ್ಚಿಗೆ, ಬಾಕಿದೆಲ್ಲವೂ ನಡೆಯುತ್ತಿರುತ್ತೆ ಹೋಗ್ತಾ ಇರುತ್ತೆ. ಚುನಾವಣೆ ಮುಗಿಯುವವರೆಗೂ ಭಿನ್ನಾಭಿಪ್ರಾಯ ಪೆನ್ ಡ್ರೈವ್ ನಲ್ಲಿಟ್ಟು ಬಳಿಕ ಬಹಿರಂಗ ಮಾಡ್ತಿನಿ ಎನ್ನುವ ಮೂಲಕ  ಸ್ವ ಪಕ್ಷದವರ ವಿರುದ್ದವೇ ಪೆನ್ ಡ್ರೈವ್ ನಲ್ಲಿನ ಮಾಹಿತಿ ಬಹಿರಂಗ ಮಾಡುವ ಬಗ್ಗೆ ಬಿಕೆ ಹರಿಪ್ರಸಾದ್ ಬಾಂಬ್ ಸಿಡಿಸಿದ್ದಾರೆ.

BK Hariprasad: ಏನೇ ಭಿನ್ನಾಭಿಪ್ರಾಯ ಇದ್ರೂ ಪೆನ್‌ಡ್ರೈವ್‌ನಲ್ಲಿಟ್ಟು ...

ಬೆಳಗಾವಿಯಲ್ಲಿ ಸುದ್ಧಿಗೋಷ್ಠಿ ನಡೆಸಿದ ಹರಿಪ್ರಸಾದ್ , 2024 ಲೋಕಸಭಾ ಚುನಾವಣೆ ವಿಚಾರದಲ್ಲಿ ಖರ್ಗೆ ಅವರು ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಅಮೃತ ಕಾಲ ಅಂತಿದ್ದ ಮೋದಿಯವರದ್ದು ಅನ್ಯಾಯ ಕಾಲ ಆಗಿದೆ. ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ಮಾಡಿ ಪ್ರಣಾಳಿಕೆ ಸಿದ್ದ ಪಡಿಸಿದ್ದಾರೆ. ಮಹಿಳೆಯರು, ರೈತರಿಗೆ, ಕಾರ್ಮಿಕರಿಗೆ ನ್ಯಾಯ ಕೊಡುವ 25 ಅಂಶ ಒಳಗೊಂಡ ಪ್ರಣಾಳಿಕೆ ಬಿಡುಗಡೆ. ದೇಶದಲ್ಲಿ ಅರಾಜಕತೆ ಇದ್ದು, ಮಣಿಪುರ ಇನ್ನೂ ಹೊತ್ತಿ ಉರಿಯುತ್ತಿದೆ. ಹತ್ತು ವರ್ಷದಲ್ಲಿ ಅಮೃತಕಾಲ ಜನ ನೋಡಲಿಲ್ಲ ಅನ್ಯಾಯ ಕಾಲ ನೋಡಿದ್ದಾರೆ. ಈ ದಶಕವೇ ಬರ್ಬಾದ್ ದಶಕ ಎಂದು ಹರಿಪ್ರಸಾದ್ ಲೇವಡಿ ಮಾಡಿದರು.

ಸಂವಿಧಾನಿಕ ಸಂಸ್ಥೆಗಳನ್ನ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ತಿದೆ. ಪ್ರಜಾಪ್ರಭುತ್ವ, ಸಂವಿಧಾನ ಉಳಿಸಲು ಕಾಂಗ್ರೆಸ್ ಗೆ ವೋಟ್ ಕೊಡಿ. ಬಿಜೆಪಿಯವರು 400 ಗೆಲ್ತಾರೋ ಅಥವಾ 420 ಗೆಲ್ತಾರೋ ಗೊತ್ತಿಲ್ಲ. ಕೇಂದ್ರದಲ್ಲಿ ಸರ್ಕಾರ ರಚನೆ ಮಾಡುವಷ್ಟು ನಾವು ಗೆಲ್ಲುತ್ತೇವೆ ಎಂದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮುಸ್ಲಿಂರ ವೊಲೈಕೆ ಮಾಡ್ತಿದ್ದಾರೆ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಮುಸ್ಲಿಂ ಲೀಗ್ ಪಾರ್ಟಿ ಮೇಲೆ ಬಿಜೆಪಿಯವರಿಗೆ ಬಹಳ ಪ್ರೀತಿ. ಫಜಲ್ ಹಕ್ ಅವರು ಪಾಕಿಸ್ತಾನ ಆಗಬೇಕು ಅಂತಾ ಹೇಳಿದ್ರು. ಹಿಂದುಮಹಾಸಭಾದವರು ಮುಸ್ಲಿಂ ಲೀಗ್ ಜೊತೆಗೆ ಸೇರಿಕೊಂಡಿದ್ದರು. ಮುಸ್ಲಿಂ ಲೀಗ್ ಮೇಲೆ ಪ್ರೀತಿ ಇದ್ರೇ ಅವರ ಜೊತೆಗೆ ನೀವು ಹೋಗಿ. ಸಮಾನತೆ ವಿರೋಧಿಗಳು ಈ ರೀತಿ ಸುಳ್ಳು ಹೇಳ್ತಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಮಸ್ಯೆಗಳ ನಿವಾರಣೆ, ಸವಾಲುಗಳಿಗೆ ಧಾರ್ಮಿಕ ಗುರುಗಳಿಂದ ಪರಿಹಾರ: ಬಿ.ವೈ.ವಿಜಯೇಂದ್ರ
ಜಾತಿ ವ್ಯವಸ್ಥೆಗೆ ಪರಿಹಾರ ರೂಪದ ವಿದ್ಯೆ ಅಗತ್ಯ: ಸಿಎಂ ಸಿದ್ದರಾಮಯ್ಯ