ಪಾಕಿಸ್ತಾನ, ಕಾಂಗ್ರೆಸ್‌ ದೂರುವುದೇ ಬಿಜೆಪಿ ಕೆಲಸ: ಸಚಿವ ಸಂತೋಷ ಲಾಡ್

Published : Jun 07, 2023, 05:35 AM IST
ಪಾಕಿಸ್ತಾನ, ಕಾಂಗ್ರೆಸ್‌ ದೂರುವುದೇ ಬಿಜೆಪಿ ಕೆಲಸ: ಸಚಿವ ಸಂತೋಷ ಲಾಡ್

ಸಾರಾಂಶ

ಬಿಜೆಪಿ ಮುಖಂಡರು ಪಾಕಿಸ್ತಾನ ಮತ್ತು ಕಾಂಗ್ರೆಸ್‌ ಪಕ್ಷವನ್ನು ದೂರುವುದನ್ನು ಬಿಟ್ಟರೆ ಬೇರಾವ ಕೆಲಸ ಮಾಡುವುದಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಟೀಕಿಸಿದರು.

ಅಳ್ನಾವರ (ಜೂ.7) : ಬಿಜೆಪಿ ಮುಖಂಡರು ಪಾಕಿಸ್ತಾನ ಮತ್ತು ಕಾಂಗ್ರೆಸ್‌ ಪಕ್ಷವನ್ನು ದೂರುವುದನ್ನು ಬಿಟ್ಟರೆ ಬೇರಾವ ಕೆಲಸ ಮಾಡುವುದಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಟೀಕಿಸಿದರು.

ಪಟ್ಟಣದ ಉಮಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಅಭಿನಂದನಾ ಸಭೆಯಲ್ಲಿ ಮಾತನಾಡಿ, ದೇಶದಲ್ಲಿ ಕೋಮುಗಲಭೆ ಸೃಷ್ಟಿಸುವ ಮೂಲಕ ಬಿಜೆಪಿ ಅಧಿ​ಕಾರಕ್ಕೆ ಬರುತ್ತದೆ. ಆದರೆ ವಿಧಾನಸಭೆ ಚುನಾವಣೆ ವೇಳೆ ಹಿಂದಿನ ಒಂದೇ ದಿನ 3.5 ಸಾವಿರ ಕೋಟಿ ಹಣ ಖರ್ಚು ಮಾಡಿದರೂ ಅವರಿಗೆ ಅ​ಧಿಕಾರಕ್ಕೆ ಬರಲಿಕ್ಕಾಗಲಿಲ್ಲ, ಇದೀಗ ರಾಜ್ಯದಲ್ಲಿ ಕಾಂಗ್ರೆಸ್‌ ಅ​ಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ ಐದು ಗ್ಯಾರಂಟಿಗಳ ಬಗ್ಗೆ ಜನರಿಗೆ ತಪ್ಪು ಸಂದೇಶವನ್ನು ರವಾನಿಸುತ್ತಿದೆ. ಇನ್ನೇರಡು ತಿಂಗಳಲ್ಲಿ .60 ಸಾವಿರ ಕೋಟಿ ವೆಚ್ಚದಲ್ಲಿ 5 ಗ್ಯಾರಂಟಿಗಳು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ಬರಲ್ಲಿದ್ದು 1.50 ಕೋಟಿ ಯಜಮಾನಿಯರು ಗೃಹಲಕ್ಷ್ಮೇ ಫಲಾನುಭವಿಗಳಾಗಲಿದ್ದಾರೆ ಎಂದರು.

ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಅಧಿಕಾರಿಗಳ ಜೊತೆ ಮೋದಿ ಸಭೆ, ಘಟನಾ ಸ್ಥಳಕ್ಕೆ ಸಂತೋಷ್‌ ಲಾಡ್‌ ಭೇಟಿ

ರಾಜ್ಯದಲ್ಲಿ ವಿದ್ಯುತ್‌ ದರ ಹೆಚ್ಚಳದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಎಲ್ಲ ಸರ್ಕಾರಗಳು ಅಧಿ​ಕಾರದಲ್ಲಿದ್ದಾಗ ವಿದ್ಯುತ್‌ ದರ ಹೆಚ್ಚಳವಾಗಿದೆ. ನಾವು 5 ಕೋಟಿ ಜನಕ್ಕೆ ವಿದ್ಯುತ್‌ ಉಚಿತವಾಗಿ ನೀಡುತ್ತಿರುವದನ್ನು ವಿರೋಧಿ​ಸುವದರ ಸಲುವಾಗಿ ಈ ರೀತಿ ಪ್ರತಿಭಟಣೆಗಳನ್ನು ಮಾಡಿಸುತ್ತಿದ್ದಾರೆ. ಕೇಂದ್ರದ ಚುನಾವಣೆ ವೇಳೆ ಪ್ರತಿಯೊಬ್ಬ ನಾಗರಿಕನಿಗೂ ತಲಾ .5 ಲಕ್ಷ ಮತ್ತು ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಮಾಡುವದಾಗಿ ಮೋದಿ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಅ​ಧಿಕಾರದ ಚುಕ್ಕಾಣಿಯನ್ನು ಹಿಡಿದಿದ್ದರು. 2014ರಲ್ಲಿ 55 ಲಕ್ಷ ಕೋಟಿ ಇರುವ ದೇಶದ ಸಾಲ ಈಗ .165 ಕೋಟಿಗೆ ಬಂದು ನಿಂತಿದೆ. ಈ ಬಗ್ಗೆ ಯಾರೂ ಪ್ರಶ್ನಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಧಾರವಾಡ: ಸರಿಯಾದ ಮಾಹಿತಿ ನೀಡಿದ ಅಧಿಕಾರಿಗಳಿಗೆ ಸಚಿವ ಲಾಡ್‌ ಫುಲ್‌ಕ್ಲಾಸ್‌..!

ಈ ವೇಳೆ ರೂಪೇಶ ಗುಂಡಕಲ್ಲ, ಸುರೇಶಗೌಡ ಕರಿಗೌಡರ, ಮಲ್ಲನಗೌಡ ಪಾಟೀಲ, ನಿಂಗಪ್ಪ ಬೇಕ್ವಾಡಕರ, ಅಮೂಲ ಗುಂಜಿಕರ, ಸುವರ್ಣ ಕಡಕೋಳ, ಭಾಗ್ಯವತಿ ಕುರುಬರ, ಮುಸ್ತಾಕಹ್ಮದ ತೇಗೂರ, ಪರಶುರಾಮ ಬೇಕನೆಕರ, ಹಸನ್‌ಅಲಿ ಶೇಖ, ಶ್ರೀಕಾಂತ ಗಾಯಕವಾಡ, ಸತ್ತಾರ ಭಾತಖಂಡೆ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ