ಪಾಕಿಸ್ತಾನ, ಕಾಂಗ್ರೆಸ್‌ ದೂರುವುದೇ ಬಿಜೆಪಿ ಕೆಲಸ: ಸಚಿವ ಸಂತೋಷ ಲಾಡ್

By Kannadaprabha NewsFirst Published Jun 7, 2023, 5:36 AM IST
Highlights

ಬಿಜೆಪಿ ಮುಖಂಡರು ಪಾಕಿಸ್ತಾನ ಮತ್ತು ಕಾಂಗ್ರೆಸ್‌ ಪಕ್ಷವನ್ನು ದೂರುವುದನ್ನು ಬಿಟ್ಟರೆ ಬೇರಾವ ಕೆಲಸ ಮಾಡುವುದಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಟೀಕಿಸಿದರು.

ಅಳ್ನಾವರ (ಜೂ.7) : ಬಿಜೆಪಿ ಮುಖಂಡರು ಪಾಕಿಸ್ತಾನ ಮತ್ತು ಕಾಂಗ್ರೆಸ್‌ ಪಕ್ಷವನ್ನು ದೂರುವುದನ್ನು ಬಿಟ್ಟರೆ ಬೇರಾವ ಕೆಲಸ ಮಾಡುವುದಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಟೀಕಿಸಿದರು.

ಪಟ್ಟಣದ ಉಮಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಅಭಿನಂದನಾ ಸಭೆಯಲ್ಲಿ ಮಾತನಾಡಿ, ದೇಶದಲ್ಲಿ ಕೋಮುಗಲಭೆ ಸೃಷ್ಟಿಸುವ ಮೂಲಕ ಬಿಜೆಪಿ ಅಧಿ​ಕಾರಕ್ಕೆ ಬರುತ್ತದೆ. ಆದರೆ ವಿಧಾನಸಭೆ ಚುನಾವಣೆ ವೇಳೆ ಹಿಂದಿನ ಒಂದೇ ದಿನ 3.5 ಸಾವಿರ ಕೋಟಿ ಹಣ ಖರ್ಚು ಮಾಡಿದರೂ ಅವರಿಗೆ ಅ​ಧಿಕಾರಕ್ಕೆ ಬರಲಿಕ್ಕಾಗಲಿಲ್ಲ, ಇದೀಗ ರಾಜ್ಯದಲ್ಲಿ ಕಾಂಗ್ರೆಸ್‌ ಅ​ಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ ಐದು ಗ್ಯಾರಂಟಿಗಳ ಬಗ್ಗೆ ಜನರಿಗೆ ತಪ್ಪು ಸಂದೇಶವನ್ನು ರವಾನಿಸುತ್ತಿದೆ. ಇನ್ನೇರಡು ತಿಂಗಳಲ್ಲಿ .60 ಸಾವಿರ ಕೋಟಿ ವೆಚ್ಚದಲ್ಲಿ 5 ಗ್ಯಾರಂಟಿಗಳು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ಬರಲ್ಲಿದ್ದು 1.50 ಕೋಟಿ ಯಜಮಾನಿಯರು ಗೃಹಲಕ್ಷ್ಮೇ ಫಲಾನುಭವಿಗಳಾಗಲಿದ್ದಾರೆ ಎಂದರು.

ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಅಧಿಕಾರಿಗಳ ಜೊತೆ ಮೋದಿ ಸಭೆ, ಘಟನಾ ಸ್ಥಳಕ್ಕೆ ಸಂತೋಷ್‌ ಲಾಡ್‌ ಭೇಟಿ

ರಾಜ್ಯದಲ್ಲಿ ವಿದ್ಯುತ್‌ ದರ ಹೆಚ್ಚಳದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಎಲ್ಲ ಸರ್ಕಾರಗಳು ಅಧಿ​ಕಾರದಲ್ಲಿದ್ದಾಗ ವಿದ್ಯುತ್‌ ದರ ಹೆಚ್ಚಳವಾಗಿದೆ. ನಾವು 5 ಕೋಟಿ ಜನಕ್ಕೆ ವಿದ್ಯುತ್‌ ಉಚಿತವಾಗಿ ನೀಡುತ್ತಿರುವದನ್ನು ವಿರೋಧಿ​ಸುವದರ ಸಲುವಾಗಿ ಈ ರೀತಿ ಪ್ರತಿಭಟಣೆಗಳನ್ನು ಮಾಡಿಸುತ್ತಿದ್ದಾರೆ. ಕೇಂದ್ರದ ಚುನಾವಣೆ ವೇಳೆ ಪ್ರತಿಯೊಬ್ಬ ನಾಗರಿಕನಿಗೂ ತಲಾ .5 ಲಕ್ಷ ಮತ್ತು ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಮಾಡುವದಾಗಿ ಮೋದಿ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಅ​ಧಿಕಾರದ ಚುಕ್ಕಾಣಿಯನ್ನು ಹಿಡಿದಿದ್ದರು. 2014ರಲ್ಲಿ 55 ಲಕ್ಷ ಕೋಟಿ ಇರುವ ದೇಶದ ಸಾಲ ಈಗ .165 ಕೋಟಿಗೆ ಬಂದು ನಿಂತಿದೆ. ಈ ಬಗ್ಗೆ ಯಾರೂ ಪ್ರಶ್ನಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಧಾರವಾಡ: ಸರಿಯಾದ ಮಾಹಿತಿ ನೀಡಿದ ಅಧಿಕಾರಿಗಳಿಗೆ ಸಚಿವ ಲಾಡ್‌ ಫುಲ್‌ಕ್ಲಾಸ್‌..!

ಈ ವೇಳೆ ರೂಪೇಶ ಗುಂಡಕಲ್ಲ, ಸುರೇಶಗೌಡ ಕರಿಗೌಡರ, ಮಲ್ಲನಗೌಡ ಪಾಟೀಲ, ನಿಂಗಪ್ಪ ಬೇಕ್ವಾಡಕರ, ಅಮೂಲ ಗುಂಜಿಕರ, ಸುವರ್ಣ ಕಡಕೋಳ, ಭಾಗ್ಯವತಿ ಕುರುಬರ, ಮುಸ್ತಾಕಹ್ಮದ ತೇಗೂರ, ಪರಶುರಾಮ ಬೇಕನೆಕರ, ಹಸನ್‌ಅಲಿ ಶೇಖ, ಶ್ರೀಕಾಂತ ಗಾಯಕವಾಡ, ಸತ್ತಾರ ಭಾತಖಂಡೆ ಇದ್ದರು.

click me!