ಬೂತ್ ಮಟ್ಟದ ಕಾರ್ಯಕರ್ತರೇ ನಿಜ ನಾಯಕರು: ಎಚ್ ಆಂಜನೇಯ

Published : Jun 04, 2023, 08:43 AM IST
ಬೂತ್ ಮಟ್ಟದ ಕಾರ್ಯಕರ್ತರೇ ನಿಜ ನಾಯಕರು: ಎಚ್ ಆಂಜನೇಯ

ಸಾರಾಂಶ

ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಲು ಸಂಘಟಿತ ಹೋರಾಟ ಮಾಡಿದ ಎಲ್ಲ ಕಾರ್ಯಕರ್ತರಿಗೂ ಹಾಗೂ ಬಿಜೆಪಿಯ ಭೀತಿ, ಆಮಿಷ ಮಧ್ಯೆ ಬಹುದೊಡ್ಡ ಸಂಖ್ಯೆಯಲ್ಲಿ ಮತಚಲಾಯಿಸಿದ ಮತದಾರರಿಗೆ ಸದಾ ಅಭಾರಿಯಾಗಿರುವೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.  

ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್

ಚಿತ್ರದುರ್ಗ (ಜೂ.4) ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಲು ಸಂಘಟಿತ ಹೋರಾಟ ಮಾಡಿದ ಎಲ್ಲ ಕಾರ್ಯಕರ್ತರಿಗೂ ಹಾಗೂ ಬಿಜೆಪಿಯ ಭೀತಿ, ಆಮಿಷ ಮಧ್ಯೆ ಬಹುದೊಡ್ಡ ಸಂಖ್ಯೆಯಲ್ಲಿ ಮತಚಲಾಯಿಸಿದ ಮತದಾರರಿಗೆ ಸದಾ ಅಭಾರಿಯಾಗಿರುವೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.  

ಚುನಾವಣೆಯಲ್ಲಿ ಸೋಲು ಆಗಿದೆ. ಆ ಸೋಲಿಗೆ ಕಾರಣ ಏನು ಎಂಬುವುದು ಕಂಡುಕೊಳ್ಳಬೇಕು. ಸೋಲಿಗೆ ಹೆದುರುವುದಿಲ್ಲ. ಏಳು ಬಾರಿ ಚುನಾವಣೆಯಲ್ಲಿ ಐದರಲ್ಲಿ ಸೋತರು ಎಂದಿಗೂ ಎದೆಗುಂದಿಲ್ಲ ಎಂದರು.

ಬದುಕಲು ಆಗದಂತಹ ಸಮಾಜ ನಮ್ಮದು: ಆಂಜನೇಯ ಬೇಸರ

ಜನರ ಕಷ್ಟಸುಖಗಳಿಗೆ ಸ್ಪಂದಿಸಿ ಪ್ರತಿ ಬೂತ್‍ಗಳಲ್ಲಿ ಹೆಚ್ಚಿನ ಮತ ಹಾಕಿಸುವವರು ನಾಯಕರಾಗುತ್ತಾರೆ. ಚುನಾವಣೆಯಲ್ಲಿ ವಿರೋಧಗಳನ್ನು ಮಾಡಿಕೊಳ್ಳದೆ ಎಲ್ಲರ ಜೊತೆಗೆ ಪ್ರೀತಿ ವಿಶ್ವಾಸ ದಿಂದ ಬೆಂಬಲಿಸಿದ್ದಾರೆ. ನಾನು ಕೇವಲ ಒಂದು ಜಾತಿಗೆ ಸೀಮಿತನಾದವನಲ್ಲ. ಎಲ್ಲರಿಗೂ ನಾಯಕ. ಎಲ್ಲಾ ಜಾತಿ ಧರ್ಮದ ಕೆಲಸ ಮಾಡಿದ್ದೇನೆ ಎಂದು ಹೇಳಿದರು. 

ಸುಳ್ಳಿಗೆ ಇನ್ನೊಂದು ಹೆಸರೇ ಎಂ.ಚಂದ್ರಪ್ಪ. ಗಂಗಾ ಕಲ್ಯಾಣ ಯೋಜನೆ(Ganga kalyana scheme)ಯ ಸೌಲಭ್ಯ ಜನರಿಗೆ ನೀಡಿಲ್ಲ, ಮೋಟರ್ ಪಂಪ್‍ಸೆಟ್ ನೀಡಿಲ್ಲ. ಐದು ವರ್ಷ ಕ್ಷೇತ್ರದ ಅಭಿವೃದ್ಧಿ ಮರೆತು ಲೂಟಿ ಮಾಡಿದ ಬಿಜೆಪಿಯ ಚಂದ್ರಪ್ಪ ಮಾಡುವ ಕುತಂತ್ರಗಳನ್ನು ನಾವ್ಯಾರು ಕಾಂಗ್ರೆಸ್ ಮುಖಂಡರು ಮಾಡಲಿಲ್ಲ. ಬಸವಣ್ಣ, ಅಂಬೇಡ್ಕರ್ ಚಿಂತನೆಗೆ ಗೌರವಿಸುವ ನಾವು ಎಂದಿಗೂ ವಾಮಮಾರ್ಗದಲ್ಲಿ ಸಾಗುವುದಿಲ್ಲ ಎಂದರು. 

ಕೆಲ ಕಾಂಗ್ರೆಸ್ ಪಕ್ಷದ ಬೆರಳೆಣಿಕೆ ಕಾರ್ಯಕರ್ತರು ಬಿಜೆಪಿ ಸೇರಿ ಕುತಂತ್ರ ನಡೆಸಿದರು. ಕತ್ತಲು ರಾತ್ರಿಯಲ್ಲಿ ನಡೆದ ಕುತಂತ್ರದಿಂದ ಸೋಲು ಆಗಿದೆ. ಸೋತರು ಹೋರಾಟಗಾರ, ಗೆದ್ದರೂ ಹೋರಾಟಗಾರ ನಾನು. ಚಂದ್ರಪ್ಪನ ವಾಮಮಾರ್ಗ, ಕುತಂತ್ರ, ವಂಚನೆಗೆ ಮುಗ್ಧ ಜನತೆ ಮತ್ತು ಮತದಾರರು ಭೀತಿಗೆ ಒಳಗಾದರು. ಈ ಸೋಲು ಕಾರ್ಯಕರ್ತರು, ಕ್ಷೇತ್ರದ ಅಭಿವೃದ್ಧಿಗೆ ಆದ ನಷ್ಟ ಎಂದು ಕ್ಷೇತ್ರದ ನೂರಾರು ಜನರು ಈಗಲೂ ನನಗೆ ಫೋನ್ ಕರೆ ಮಾಡಿ ಪಶ್ಚಾತ್ತಾಪ ಪಡುತ್ತಿದ್ದಾರೆ. ಜನರ ಈ ಪ್ರೀತಿಯೇ ನನಗೆ ಸಾಕು ಎಂದರು. 

ನನ್ನ ಅವಧಿಯಲ್ಲಿ ಆದ ಅಭಿವೃದ್ಧಿ ಇಂದಿಗೂ ಆಗಿಲ್ಲ. ಆದರೂ ಸುಳ್ಳುಗಳ ಮೂಲಕ ಜನರನ್ನು ಚಂದ್ರಪ್ಪ(M Chandrappa MLA) ವಂಚಿಸುತ್ತಿದ್ದಾರೆ.ಚಂದ್ರಪ್ಪ, ಆತನ ಕುಟುಂಬದ ರೀತಿ ಮೋಸ, ತಂತ್ರ ಮಾಡಲು ಅವಕಾಶ ಇತ್ತು. ಆದರೆ, ಅಂತಹ ನೀಚತನ ಮಾಡಿ ಗೆಲ್ಲುವುದು ನನಗೆ ಬೇಕಿಲ್ಲ. ಮುಂದೆಯೂ ಮಾಡುವುದಿಲ್ಲ.ಅದರಲ್ಲೂ ಬಸವಣ್ಣನ ಚಿಂತನೆ ಪ್ರಸಾರ ಮಾಡುವ ಹೊಳಲ್ಕೆರೆ ಕ್ಷೇತ್ರ(Holalkere)ದಲ್ಲಿ ವಾಮಮಾರ್ಗ ಮಾಡುವುದು ಅತ್ಯಂತ ಹೇಯ ಕೃತ್ಯ ಎಂದು ಅಭಿಪ್ರಾಯಪಟ್ಟರು. 

ಕಾರ್ಯಕರ್ತರು, ಮುಖಂಡರು ಒಮ್ಮತದಿಂದ ಕೆಲಸ ಮಾಡಿದ್ರು. ಕೆಲವರು ನಡೆಸಿದ ಕುತಂತ್ರದ ಮಾಹಿತಿ ನನಗೆ ಇದೆ. ನಿಷ್ಟಾವಂತರು, ಅವಕಾಶ ಇಲ್ಲದವನಿಗೆ ಅವಕಾಶ ನೀಡಿ ಉನ್ನತ ಮಟ್ಟಕ್ಕೆ ತರುವುದೆ ರಾಜಕೀಯ. ಈ ಕೆಲಸವನ್ನು ಮಾಡುತ್ತೇನೆ. ಒಳ್ಳೆಯತನ ಬೆಳಕಿಗೆ ಬರುವುದು ಸ್ವಲ್ಪ ಕಷ್ಟ, ಆದ್ರೆ ಸುಳ್ಳು ಬೇಗನೇ ಮುನ್ನೆಲೆಗೆ ಬರುತ್ತದೆ. ಅದೇ ರೀತಿ ಕ್ಷೇತ್ರದಲ್ಲಿ ಆಗಿದೆ ಎಂದು ತಮ್ಮ ಸೋಲಿನ ಕುರಿತು ವಿಮರ್ಶಿಸಿದರು. 

ಪಕ್ಷಕ್ಕೆ ದ್ರೋಹ ಮಾಡಿದವರು ಹೆತ್ತ ತಾಯಿಗೆ ದ್ರೋಹಮಾಡಿದ ಹಾಗೆಯೇ.  ನಮ್ಮ ಪಕ್ಷದ ಕೆಲವರು ಚಂದ್ರಪ್ಪನ ಹಣಕ್ಕೆ ಬಾಯ್ತೆರೆದರು. ಅವರೊಂದಿಗೆ ಶಾಮೀಲಾದರು. ಜೊತೆಗೆ ದೇವರ ಫೋಟೋ ಮತದಾರರಿಗೆ ಕೊಟ್ಟು ಭೀತಿ ಸೃಷ್ಟಿಸಿದರು. ಹಣದ ಹೊಳೆಯನ್ನೇ ಹರಿಸಿದರು. ಇದೆಲ್ಲದರ ಪರಿಣಾಮ ಸೋಲು ಆಗಿದೆ. ಆದರೆ ಯಾರೂ ಎದೆಗುಂದಬೇಕಿಲ್ಲ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ಕ್ಷೇತ್ರದ ಅಭಿವೃದ್ಧಿಗೆ ಒಟ್ಟುಗೂಡಿ ಶ್ರಮಿಸೋಣಾ ಎಂದರು. 

ಪಕ್ಷವಿರೋಧಿ ಕೆಲಸ ಮಾಡಿದವರಿಗೆ ತಕ್ಕ ಪಾಠ ಕಲಿಸಬೇಕು. ಬೇರೆ ಪಾರ್ಟಿಯಿಂದ ಬಂದ ಕಾರ್ಯಕರ್ತರು, ಮುಖಂಡರು ಯಾರು ಕೂಡ ಧೃತಿಗೇಡಬಾರದು. ನಿಮ್ಮನೊಡನೆ ನಾನಿರುವೆ ಎಂದು ಆತ್ಮಸ್ಥೈರ್ಯದ ಮಾತು ಹೇಳಿದರು.  ತಾಲೂಕು ಹಾಗೂ ಜಿ.ಪಂ ಚುನಾವಣೆಗೆ ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು. ಕ್ಷೇತ್ರದ ಎಲ್ಲ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲುವ ರೀತಿ ತಂತ್ರಗಾರಿಕೆ ರೂಪಿಸೋಣಾ ಎಂದರು. ‌ಇದೀಗ ಇಡೀ ದೇಶವೇ ನಮ್ಮ ರಾಜ್ಯದತ್ತ ತಿರುಗಿ ನೋಡುತ್ತ ಇದೆ. ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಈಡೇರಿಸಿದೆ. ಇದು ಬೇರೆ ರಾಜ್ಯದ ಹಾಗೂ ಲೋಕಸಭಾ ಚುನಾವಣೆಲ್ಲಿ ಪಕ್ಷದ ಗೆಲುವಿಗೆ ಭದ್ರ ಬುನಾದಿ ಆಗಿದೆ. ನುಡಿದಂತೆ ನಡೆಯುವ ಏಕೈಕ ಪಕ್ಷ ಕಾಂಗ್ರೆಸ್ ಎಂಬ ನಂಬಿಕೆ ಜನರಲ್ಲಿ ಮೂಡಿದೆ ಎಂದರು. 

ಚುನಾವಣೆಯಲ್ಲಿ ಸ್ಪರ್ಧಿಸದೇ ಇಡೀ ರಾಜ್ಯ ವ್ಯಾಪ್ತಿ ಸುತ್ತಿ ಪಕ್ಷ ಸಂಘಟಿಸಿ ಅಧಿಕಾರಕ್ಕೆ ಬಂದ ನಂತರ ನಿಮಗೆ ಎಂಎಲ್ಸಿ ಮಾಡಿ ಉನ್ನತಮಟ್ಟದ ಸ್ಥಾನಮಾನ ನೀಡಲಾಗುವುದು ಎಂದು ರಾಹುಲ್ ಗಾಂಧಿ(Rahul gandhi), ಸುರ್ಜೇವಾಲ(Randeep singh surjewala) ಹೇಳಿದ್ದರು. ಕ್ಷೇತ್ರದ ಜನರ ಮೇಲಿನ ಅಭಿಮಾನಕ್ಕಾಗಿ ಇದನ್ನು ತಿರಸ್ಕರಿಸಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೆ. ಇದೀಗ ಸೋತಿದ್ದೇನೆ. ಇಂತಹ ಸಂದರ್ಭ ನನ್ನನ್ನು ಎಂಎಲ್ಸಿ ಮಾಡಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತಿರುವುದು ಸರಿಯಲ್ಲ, ನ್ಯಾಯಯುತ ನಡೆಯಲ್ಲ. ಪಕ್ಷಕ್ಕಾಗಿ ದುಡಿದ ನನ್ನಂತ ನೂರಾರು ಜನರಿದ್ದಾರೆ. ಅವರಿಗೂ ಸ್ಥಾನಮಾನ ನೀಡಬೇಕಲ್ಲವೇ ಎಂದು ಮಾಜಿ ಸಚಿವ ಎಚ್.ಆಂಜನೇಯ ಅಭಿಪ್ರಾಯಪಟ್ಟರು. 

ಮೋದಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ : ಆಂಜನೇಯ

ಪಕ್ಷದ್ರೋಹಿಗಳನ್ನು ಉಚ್ಛಾಟಿಸಬೇಕು

ಪಕ್ಷದಲ್ಲಿದ್ದು, ಅನೇಕ ಸ್ಥಾನಮಾನ ಉಂಡುವರೇ ಹಾಗೂ ಆಂಜನೇಯ ನೆರಳಲ್ಲಿ ಬೆಳೆದವರೇ ಬೆನ್ನಿಗೆ ಚೂರಿ ಹಾಕಿದ್ದಾರೆ. ಆಂಜನೇಯ ಅವರ ಎದುರಿಗೆ ನಿಲ್ಲಲು ಧೈರ್ಯ ಇಲ್ಲದವರು ಚಂದ್ರಪ್ಪನ ಎಂಜಲು ಕಾಸಿಗೆ ಆಸೆಬಿದ್ದು, ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಆ ಮೂರು ಮಂದಿ ಯಾರೆಂಬುದು ಬಹಿರಂಗ ಸತ್ಯ. 
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಲಸ್ವಾಮಿ, ಜಿಪಂ ಮಾಜಿ ಸದಸ್ಯೆ ಪತಿ ರಘು, ಭೀಮಸಮುದ್ರ ಮಂಜಣ್ಣ ಅವರು ಆಂಜನೇಯ ಅವರ ಸೋಲಿಗೆ ಕುತಂತ್ರ ನಡೆಸಿದರು. ಇವರನ್ನು ಪಕ್ಷದ ಸ್ಥಾನಮಾನಗಳಿಂದ ಉಚ್ಛಾಟಿಸುವಂತೆ ರಾಜ್ಯದ ವರಿಷ್ಟರ ಮೇಲೆ ಒತ್ತಡ ಹಾಕಬೇಕು ಎಂದು ಕಾಟಿಹಳ್ಳಿ ಶಿವಕುಮಾರ್ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ