ಕರ್ನಾಟಕದ ಅಭಿವೃದ್ಧಿಗೆ ಜೆಡಿಎಸ್‌ ಅಧಿಕಾರಕ್ಕೆ ತನ್ನಿ: ಎಚ್‌.ಡಿ.ಕುಮಾರಸ್ವಾಮಿ

Published : Jul 27, 2022, 02:11 PM IST
ಕರ್ನಾಟಕದ ಅಭಿವೃದ್ಧಿಗೆ ಜೆಡಿಎಸ್‌ ಅಧಿಕಾರಕ್ಕೆ ತನ್ನಿ: ಎಚ್‌.ಡಿ.ಕುಮಾರಸ್ವಾಮಿ

ಸಾರಾಂಶ

ನಮ್ಮ ಆಡಳಿತದ ಅವಧಿಯಲ್ಲಿ ಬಿಜೆಪಿ ಸರ್ಕಾರದಂತೆ 40% ಕಮಿಷನ್‌ ರಾಜಕಾರಣವನ್ನು ನಾನು ಮಾಡಿಲ್ಲ: ಕುಮಾರಸ್ವಾಮಿ

ಭಾರತೀನಗರ(ಜು.27):  ರಾಜ್ಯದಲ್ಲಿ ಮತ್ತೆ ಜೆಡಿಎಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಹೋರಾಟ ಮಾಡುತ್ತಿರುವುದು ನನ್ನ ಸ್ವಾರ್ಥಕ್ಕಾಗಿ ಅಲ್ಲ. ನಾಡಿನ ಅಭಿವೃದ್ಧಿಗಾಗಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.
ಶ್ರೀವೆಂಕಟೇಶ್ವರ ದೇವಾಲಯದ 48ನೇ ದಿನದ ಮಂಡಲ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ನಾನು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ನಾಡಿನ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ನನ್ನ ಅಧಿಕಾರ ಅವಧಿಯಲ್ಲಿ ಯಾವುದೇ ದುರುಪಯೋಗವಾಗದೆ ಜನರ ಸೇವೆ ಮಾಡಿದ್ದೇನೆ ಎಂದರು.

ಜೆಡಿಎಸ್‌ ಸಂಘಟನೆಗಾಗಿ ಮುಂದಿನ ದಿನಗಳಲ್ಲಿ 100 ದಿನ ಗ್ರಾಮವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ರಾಜ್ಯದ ತಾಲೂಕಿನಲ್ಲಿ ಒಂದು ದಿನಕ್ಕೆ ಎಷ್ಟು ಗ್ರಾಮಗಳನ್ನು ಭೇಟಿ ಮಾಡಬಹುದೋ ಅಷ್ಟು ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆ ಆಲಿಸುವ ಜೊತೆಗೆ ಗ್ರಾಮ ವಾಸ್ತವ್ಯ ಮಾಡುತ್ತೇನೆ ಎಂದರು.

ಬೇಬಿ ಬೆಟ್ಟ ನಮ್ಮ ಖಾಸಗಿ ಆಸ್ತಿ: ಮಂಡ್ಯ ಜಿಲ್ಲಾಡಳಿತದ ಕ್ರಮಕ್ಕೆ ರಾಜಮಾತೆ ಅಸಮಾಧಾನ

40 % ಕಮಿಷನ್‌ ಮಾಡಿಲ್ಲ:

ನಮ್ಮ ಆಡಳಿತದ ಅವಧಿಯಲ್ಲಿ ಬಿಜೆಪಿ ಸರ್ಕಾರದಂತೆ 40% ಕಮಿಷನ್‌ ರಾಜಕಾರಣವನ್ನು ನಾನು ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ. ಜೆಡಿಎಸ್‌ ಪಕ್ಷಕ್ಕೆ 5 ವರ್ಷಗಳವರೆಗೆ ಅಧಿಕಾರ ನೀಡಿದರೆ ಉತ್ತಮ ಯೋಜನೆ ಜಾರಿಗೆ ತಂದು ರೈತರು, ಬಡವರಿಗೆ ಅನುಕೂಲ ಕಲ್ಪಿಸುತ್ತೇನೆ ಎಂದು ಭರವಸೆ ನೀಡಿದರು.

ಸರ್ಕಾರಗಳು ರಾಜ ಮನೆತನಗಳನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ, ಪ್ರಮೋದಾದೇವಿ ಅಸಮಾಧಾನ

ನಾನು ರಾಜಕೀಯಕ್ಕೆ ಬಂದಾಗ ಮನಸ್ಸು ಮಾಡಿದರೆ ಸಾಕಷ್ಟು ಹಣ ಮಾಡಬಹುದಿತ್ತು. ಬೇರೆ ರಾಜಕಾರಣಿಗಳಂತೆ ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿ ಶಿಕ್ಷಣ ಸಂಸ್ಥೆ ತೆರೆದು ಹಣ ಸಂಪಾದನೆ ಮಾಡಬಹುದಿತ್ತು. ಆದರೆ, ನನಗೆ ಹಣಕ್ಕಿಂತ ರಾಜ್ಯದ ಜನರ ಅಭಿವೃದ್ಧಿಯೇ ಮುಖ್ಯವಾಗಿದೆ ಎಂದರು.

ರಾಜಕಾರಣಕ್ಕೆ ಬರುವ ಮುನ್ನವೇ ಸಿನಿಮಾ ಹಂಚಿಕೆ ಮಾಡುತ್ತಿದ್ದಾಗ ಬಿಡದಿಯ ಬಳಿ 45 ಎಕರೆ ಜಮೀನು ತೆಗೆದಿದ್ದೆ. ಇದನ್ನು ಹೊರತುಪಡಿಸಿ ನಾನು ಬೇರೆ ಯಾವ ಆಸ್ತಿಯನ್ನು ಮಾಡಿಲ್ಲ. ನಾವು ಎಷ್ಟೇ ಎತ್ತರಕ್ಕೆ ಹೋದರು ದೇವರ ಮುಂದೆ ನಾವು ತಲೆಬಾಗಲೇಬೇಕು. ಹಾಗಾಗಿ ಈ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸುತ್ತಿದ್ದೇನೆ. ಟ್ರಸ್ಟ್‌ ನವರು ಉತ್ತಮ ದೇವಾಲಯ ನಿರ್ಮಾಣ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ