
ಚಿಕ್ಕಬಳ್ಳಾಪುರ, [25]: 2019ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ಚುನಾವಣಾ ಕಣಗಳೂ ರಂಗೇರುತ್ತಿದೆ.ಇದರ ನಡುವೆ ಬರ ಪ್ರವಾಸದಲ್ಲಿ ಮಾಡುತ್ತಿರುವ ಬಿಜೆಪಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿ ಕೈತೊಳಿದುಕೊಂಡಿದೆ.
ಚಿಕ್ಕಬಳ್ಳಾಪುರಕ್ಕೆ ಮಾಜಿ ಸಚಿವ ಬಿ.ಎನ್ ಬಚ್ಚೇಗೌಡರೇ ಅಭ್ಯರ್ಥಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಇಂದು ಹೊಸಕೋಟೆಯಲ್ಲಿ ಘೋಷಣೆ ಮಾಡಿದ್ದಾರೆ.
ಸಿ ವೋಟರ್ ಮೂಡ್ ಆಫ್ ದಿ ನೇಶನ್ : ಯಾರಿಗೆ ಎಷ್ಟು..?
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದು ಬರ ಅಧ್ಯಯನ ಪ್ರವಾಸ ಕೈಗೊಂಡಿರುವ ಬಿಎಸ್ವೈ, ಹೊಸಕೋಟೆಯಲ್ಲಿ ಕಾರ್ಯಕರ್ತರೊಂದಿಗೆ ಸಭೆಯಲ್ಲಿ ಬಿ.ಎನ್ ಬಚ್ಚೇಗೌಡ ಹೆಸರನ್ನು ಅಂತಿಮಗೊಳಿಸಿದರು.
ಚಿಕ್ಕಬಳ್ಳಾಪುರದಲ್ಲಿ ಈ ಬಾರಿ ನೂರಕ್ಕೆ ನೂರರಷ್ಟು ಗೆಲುವು ನಮ್ಮದೆ. ಬಚ್ಚೇಗೌಡರ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಸಭೆಯಲ್ಲಿ ಯಡಿಯೂರಪ್ಪ ಸೂಚಿಸಿದರು.
ಕಳೆದ ಬಾರಿ ಕೆಲವರ ಕುತಂತ್ರದಿಂದ ಚಿಕ್ಕಬಳ್ಳಾಪುರದಲ್ಲಿ ಸೋಲುವಂತಾಯಿತು. ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.