ಕೇಂದ್ರ ಸಚಿವ ಖೂಬಾ ಬಿಕ್ಕಟ್ಟು ಶಮನಕ್ಕೆ ಯಡಿಯೂರಪ್ಪ ಪ್ರವೇಶ

Published : Feb 07, 2024, 04:20 AM IST
ಕೇಂದ್ರ ಸಚಿವ ಖೂಬಾ ಬಿಕ್ಕಟ್ಟು ಶಮನಕ್ಕೆ ಯಡಿಯೂರಪ್ಪ ಪ್ರವೇಶ

ಸಾರಾಂಶ

ಪಕ್ಷದ ಶಾಸಕರಾದ ಪ್ರಭು ಚವ್ಹಾಣ್, ಶರಣು ಸಲಗರ ಸೇರಿದಂತೆ ಹಲವು ಮುಖಂಡರು ಖೂಬಾ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಪೈಕಿ ಪ್ರಭು ಚವ್ಹಾಣ್ ಅವರು ಇತ್ತೀಚೆಗೆ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಆಗಮಿಸಿದ್ದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ವೇದಿಕೆಯಲ್ಲೇ ಸಾಷ್ಟಾಂಗ ನಮಸ್ಕಾರ ಮಾಡುವ ಮೂಲಕ ಖೂಬಾ ಅವರಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದರು.

ಬೆಂಗಳೂರು(ಫೆ.07):  ಕೇಂದ್ರದ ರಸಗೊಬ್ಬರ ಖಾತೆ ರಾಜ್ಯ ಸಚಿವ ಹಾಗೂ ಬೀದರ್ ಲೋಕಸಭಾ ಕ್ಷೇತ್ರದ ಸಂಸದ ಭಗವಂತ್ ಖೂಬಾ ಅವರಿಗೆ ಈ ಬಾರಿ ಟಿಕೆಟ್ ನೀಡುವುದಕ್ಕೆ ಪಕ್ಷದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಖುದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ನಡೆಸಲು ಮುಂದಾಗಿದ್ದಾರೆ.

ಶುಕ್ರವಾರ ಬೀದರ್‌ಗೆ ತೆರಳಲಿರುವ ಯಡಿಯೂರಪ್ಪ ಅವರು ಬೆಳಗ್ಗೆ 10.30ರಿಂದ 11.30ರವರೆಗೆ ಬೀದರ್ ಲೋಕಸಭಾ ಕ್ಷೇತ್ರದ ಜನಪ್ರತಿನಿಧಿಗಳು ಹಾಗೂ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.

ಪರಿಹಾರ ಬಿಡುಗಡೆ ವಿಳಂಬಕ್ಕೆ ಸಚಿವ ಈಶ್ವರ ಖಂಡ್ರೆ ನಿರ್ಲಕ್ಷವೇ ಕಾರಣ: ಭಗವಂತ ಖೂಬಾ

ಪಕ್ಷದ ಶಾಸಕರಾದ ಪ್ರಭು ಚವ್ಹಾಣ್, ಶರಣು ಸಲಗರ ಸೇರಿದಂತೆ ಹಲವು ಮುಖಂಡರು ಖೂಬಾ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಪೈಕಿ ಪ್ರಭು ಚವ್ಹಾಣ್ ಅವರು ಇತ್ತೀಚೆಗೆ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಆಗಮಿಸಿದ್ದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ವೇದಿಕೆಯಲ್ಲೇ ಸಾಷ್ಟಾಂಗ ನಮಸ್ಕಾರ ಮಾಡುವ ಮೂಲಕ ಖೂಬಾ ಅವರಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದರು.

ಎರಡು ದಿನಗಳ ಹಿಂದಷ್ಟೇ ದಾವಣಗೆರೆ ಜಿಲ್ಲಾ ಘಟಕದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಿಲ್ಲೆಯ ಮುಖಂಡರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತುಕತೆ ಮೂಲಕ ಪರಿಹರಿಸಿದ್ದ ಯಡಿಯೂರಪ್ಪ ಅವರು ಈಗ ಬೀದರ್‌ ಜಿಲ್ಲೆಗೇ ತೆರಳಿ ಅಲ್ಲಿಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ