ಅಚ್ಚರಿ ಎಂಬಂತೆ ನಿಗಮ ಮಂಡಳಿ ಅಧ್ಯಕ್ಷರಿಗೆ ಮುಂದಿನ ಆದೇಶದ ವರೆಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು, (ಡಿ.16): ಇತ್ತೀಚೆಗಷ್ಟೇ ನೇಮಕಗೊಂಡಿದ್ದ ನಿಗಮ ಮಂಡಳಿ ಅಧ್ಯಕ್ಷರಿಗೆ ಸಿಎಂ ಬಿಎಸ್ವೈ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶ ಹೊರಡಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಖಾಲಿ ಇರುವ ಎಲ್ಲಾ ನಿಗಮಗಳಿಗೆ ಅಧ್ಯಕ್ಷರನ್ನ ನೇಮಿಸಿತ್ತು. ಇದೀಗ ಅವರಲ್ಲಿ 9 ಮಂದಿಗೆ ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ನಾಲ್ವರಿಗೆ ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ನೀಡಲಾಗಿದೆ.
ಬಿಜೆಪಿ ಸರ್ಕಾರಕ್ಕೆ ವರ್ಷ: ಶಾಸಕರಿಗೆ ಭರ್ಜರಿ ಗಿಫ್ಟ್ ನೀಡಿದ ಸಿಎಂ ಯಡಿಯೂರಪ್ಪ
ಯಾರಿಗೆಲ್ಲಾ ಸಂಪುಟ ದರ್ಜೆಯ ಸ್ಥಾನಮಾನ..?
* ಎಂ.ಚಂದ್ರಪ್ಪ - ಕೆಎಸ್ಆರ್ಟಿಸಿ, ಬೆಂಗಳೂರು
* ಐಹೊಳೆ ದುರ್ಯೋಧನ ಮಹಾಲಿಂಗಪ್ಪ - ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಬೆಂಗಳೂರು
* ನೆಹರೂ ಚನ್ನಬಸಪ್ಪ ಓಲೇಕಾರ್ - ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳ & ಅನುಸೂಚಿತ ಬುಡಕಟ್ಟುಗಳ ಆಯೋಗ, ಬೆಂಗಳೂರು
* ನರಸಿಂಹ ನಾಯಕ್ (ರಾಜೂಗೌಡ) -ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ, ಬೆಂಗಳೂರು
* ಕಳಕಪ್ಪ ಬಂಡಿ -ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ (KSSIDC), ಬೆಂಗಳೂರು
* ಶಂಕರ ಪಾಟೀಲ್ ಮುನೇನಕೊಪ್ಪ -ಕರ್ನಾಟಕ ಮೂಲಭೂತ ಸೌಕರ್ಯ ಅಭಿವೃದ್ಧಿ & ಹಣಕಾಸು ಸಂಸ್ಥೆ (KUIDFC), ಬೆಂಗಳೂರು
* ಮಾಡಾಳು ವಿರೂಪಾಕ್ಷಪ್ಪ - ಕರ್ನಾಟಕ ಸಾಬೂನು & ಮಾರ್ಜಕ ನಿಯಮಿತ, ಬೆಂಗಳೂರು
* ಸಿದ್ದು ಸವದಿ -ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ, ಹುಬ್ಬಳ್ಳಿ
ರಾಜ್ಯ ಸಚಿವ ದರ್ಜೆ
* ರಾಜಕುಮಾರ್ ಪಾಟೀಲ್ ತೇಲ್ಕೂರ್ -ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲಬುರಗಿ
* ಸಿ.ಎಸ್. ನಿರಂಜನ್ ಕುಮಾರ್ -ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ, ಬೆಂಗಳೂರು
* ಸಿ.ಎಸ್. ಜಯರಾಮ್ -ಕರ್ನಾಟಕ ರಾಜ್ಯ ಸಾಂಬಾರು ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು
* ಎನ್. ಲಿಂಗಣ್ಣ -ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು (ಲಿಡ್ಕರ್).