
ಬೆಂಗಳೂರು, (ಸೆ.28) : ಎಪಿಎಂಸಿ ಕಾಯಿದೆ ತಾನು ಬೆಳೆದ ಬೆಳೆಯನ್ನು ರೈತರು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ರೈತನ ನ್ಯಾಯಕ್ಕಾಗಿ ನಾನು ಹೋರಾಟ ಮಾಡಿ ಬಂದವನು. ಇದೊಂದು ಐತಿಹಾಸಿಕ ನಿರ್ಣಯ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
"
ಇಂದು (ಸೋಮವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ನಾನು ರೈತನ ಮಗನಾಗಿ 4ನೇ ಬಾರಿಗೆ ಸಿಎಂ ಆಗಿದ್ದೇನೆ. ರೈತನ ಅನ್ನ ತಿನ್ನುತ್ತಿರುವ ನಾನು ರೈತನಿಗೆ ಯಾವುದೇ ಅನ್ಯಾಯ ಮಾಡಲ್ಲ. ನಾನು ಅಧಿಕಾರಕ್ಕಾಗಿ ಅಂಟಿಕೊಂಡು ಕುಳಿತವನಲ್ಲ ಎಂದು ಹೇಳಿದರು.
' ಎಪಿಎಂಸಿಯಲ್ಲೂ ಲೋಪಗಳಿವೆ, ರೈತರ ಉತ್ಪನ್ನ ಮರು ಹರಾಜಾಗಿರುವ ಇತಿಹಾಸವೇ ಇಲ್ಲ'
ಎಪಿಎಂಸಿ ಕಾಯಿದೆ ಭೂಸುಧಾರಣೆ ಬಗ್ಗೆ ರೈತರು ಕಾಂಗ್ರೆಸ್ ನ ಕೆಲವರ ಪಿತೂರಿಯಿಂದ ಧರಣಿ ನಡೆಸುತ್ತಿದ್ದಾರೆ. ರೈತರನ್ನು ಕರೆದು ನಾನು ಕಾಯಿದೆ ಅನುಕೂಲದ ಬಗ್ಗೆ ಮನವರಿಕೆ ಮಾಡಿದೆ. ಆದರೆ ಅವರು ಸತ್ಯಾಗ್ರಹ ಮಾಡಬೇಕೆಂದು ನಿಶ್ಚಿಯ ಮಾಡಿ ಬಂದಿದ್ದರು ಎಂದರು.
ಈ ಕಾಯಿದೆಯಿಂದ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗಲಿದೆ. ದಯಮಾಡಿ ನಾನು ರೈತರಿಗೆ ಮನವಿ ಮಾಡುತ್ತೇನೆ. ಇಂದು ಬೇಕಿದ್ರೆ ಚಳುವಳಿ ಮಾಡಿ ಆದರೆ ನಾಳೆ ಬನ್ನಿ ಕುಳಿತು ಮಾತಾಡೋಣ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿಯೇ ಈ ಕಾಯಿದೆ ತಂದಿದ್ದೇವೆ ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.