ಫಲಿ​ತಾಂಶದ ಬಳಿಕ ಬದಲಾಗುತ್ತೆ ಸಿದ್ದರಾಮಯ್ಯ ಸ್ಥಾನ : BSY

Kannadaprabha News   | stockphoto
Published : Nov 05, 2020, 09:37 AM IST
ಫಲಿ​ತಾಂಶದ ಬಳಿಕ ಬದಲಾಗುತ್ತೆ ಸಿದ್ದರಾಮಯ್ಯ ಸ್ಥಾನ : BSY

ಸಾರಾಂಶ

ರಾಜ್ಯದಲ್ಲಿ ಉಪ ಚುನಾವಣೆ ಫಲಿತಾಂಶದ ಬಳಿಕ ಸಿದ್ದರಾಮ್ಯ ಸ್ಥಾನ ಬದಲಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. 

ಮಂಗಳೂರು (ನ.05):  ಮಾಜಿ ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತ ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಶಿರಾ, ರಾಜರಾಜೇಶ್ವರಿ ನಗರ ಹಾಗೂ ಪರಿಷತ್ತಿನ ಚುನಾವಣೆಯಲ್ಲಿ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. 

ಆ ಮೂರು ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆದಿದೆ. ಅವರು ನೂರಕ್ಕೆ ನೂರು ದಯನೀಯ ಸೋಲು ಅನುಭವಿಸುತ್ತಾರೆ. ಪರಿಷತ್‌ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ. ಆಗ ಯಾರು ರಾಜೀನಾಮೆ ಕೊಡಬೇಕಾಗುತ್ತದೆ. ಆಗ ಕಾಂಗ್ರೆಸ್‌ ವರಿಷ್ಠರು ಯಾರ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ? ಅದನ್ನು ಸಿದ್ದರಾಮಯ್ಯ ಯೋಚಿಸಲಿ ಎಂದು ತಿರುಗೇಟು ನೀಡಿದರು.

ನನಗೂ ದೆಹಲಿಯಿಂದ ಸುದ್ದಿ ಬಂದಿದೆ, ವಿಪಕ್ಷ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡುತ್ತಾರೆ ಎಂದು ವ್ಯಂಗ್ಯವಾಡಿದ ಯಡಿಯೂರಪ್ಪ, ಯಾವಾಗಲೂ ಸಿದ್ದರಾಮಯ್ಯ ಹೀಗೆ ಹಗುರವಾಗಿ ಮಾತನಾಡಬಾರದು ಎಂದರು.

:  ಮಾಜಿ ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತ ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಶಿರಾ, ರಾಜರಾಜೇಶ್ವರಿ ನಗರ ಹಾಗೂ ಪರಿಷತ್ತಿನ ಚುನಾವಣೆಯಲ್ಲಿ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. 

ಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್‌ನ ಅವರನ್ನ ಹೊಗಳಿದ ಮುನಿರತ್ನ

ಆ ಮೂರು ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆದಿದೆ. ಅವರು ನೂರಕ್ಕೆ ನೂರು ದಯನೀಯ ಸೋಲು ಅನುಭವಿಸುತ್ತಾರೆ. ಪರಿಷತ್‌ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ. ಆಗ ಯಾರು ರಾಜೀನಾಮೆ ಕೊಡಬೇಕಾಗುತ್ತದೆ. ಆಗ ಕಾಂಗ್ರೆಸ್‌ ವರಿಷ್ಠರು ಯಾರ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ? ಅದನ್ನು ಸಿದ್ದರಾಮಯ್ಯ ಯೋಚಿಸಲಿ ಎಂದು ತಿರುಗೇಟು ನೀಡಿದರು.

ನನಗೂ ದೆಹಲಿಯಿಂದ ಸುದ್ದಿ ಬಂದಿದೆ, ವಿಪಕ್ಷ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡುತ್ತಾರೆ ಎಂದು ವ್ಯಂಗ್ಯವಾಡಿದ ಯಡಿಯೂರಪ್ಪ, ಯಾವಾಗಲೂ ಸಿದ್ದರಾಮಯ್ಯ ಹೀಗೆ ಹಗುರವಾಗಿ ಮಾತನಾಡಬಾರದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸದಾಗಿ 545 ಪಿಎಸ್‌ಐ ಶೀಘ್ರ ಸೇವೆಗೆ ನಿಯೋಜನೆ: ಗೃಹ ಸಚಿವ ಪರಮೇಶ್ವರ್‌
ಸದನದ ಗೌರವ ಎತ್ತಿಹಿಡಿಯಿರಿ: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಕಿವಿಮಾತು