ಮೇ 9ಕ್ಕೆ ಚಿತ್ರದುರ್ಗದಲ್ಲಿ ಯಡಿಯೂರಪ್ಪ ಉತ್ಸವ? ಕೇಂದ್ರ ಸಚಿವ ಅಮಿತ್‌ ಶಾ ಭಾಗಿ ಸಾಧ್ಯತೆ

Kannadaprabha News   | Kannada Prabha
Published : Apr 21, 2026, 06:55 AM IST
BS Yediyurappa Utsava in Chitradurga on May 9 Union Minister Amit Shah likely to attend

ಸಾರಾಂಶ

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಸವಿನೆನಪಿಗಾಗಿ ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಮೇ 9 ರಂದು ನಡೆಯುವ ನಿರೀಕ್ಷೆಯಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸುವ ಸಾಧ್ಯತೆಯಿದೆ.

 ಬೆಂಗಳೂರು (ಏ.21): ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜಕಾರಣಕ್ಕೆ ಪ್ರವೇಶಿಸಿ 50 ವಸಂತಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಬೃಹತ್ ಸಮಾವೇಶ ಬರುವ ಮೇ 9ರಂದು ನಡೆಯುವ ನಿರೀಕ್ಷೆಯಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 4ರಂದು ಹೊರಬಿದ್ದ ಬಳಿಕ ಆಗಮಿಸುವುದಾಗಿ ತಿಳಿಸಿದ್ದಾರೆ. ಬಹುತೇಕ ಮೇ 9ರಂದು ಸಮಾವೇಶ ನಡೆಯಬಹುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಇದು ಅಮಿತ್ ಶಾ ಅವರ ಭೇಟಿಯ ಮೇಲೆ ನಿರ್ಧರಿತವಾಗುವುದರಿಂದ ಇನ್ನೂ ಅಂತಿಮಗೊಂಡಿಲ್ಲ. ಮೇ ತಿಂಗಳಲ್ಲೇ ಸಮಾವೇಶ ನಡೆಸಬೇಕು ಎಂಬ ನಿರ್ಣಯವಾಗಿದೆ. ಇದಕ್ಕೆ ಪೂರಕವಾಗಿ ತೆರೆಮರೆಯಲ್ಲಿ ಸಿದ್ಧತೆಗಳೂ ಆರಂಭಗೊಂಡಿವೆ. ಶೀಘ್ರದಲ್ಲೇ ಅಧಿಕೃತ ದಿನಾಂಕ ಪ್ರಕಟಿಸಲಾಗುವುದು ಎಂದು ಪಕ್ಷದ ಹಿರಿಯ ನಾಯಕರು ಮಾಹಿತಿ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜಕಾರಣಕ್ಕೆ ಪ್ರವೇಶಿಸಿ 50 ವಸಂತಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಬೃಹತ್ ಸಮಾವೇಶ ಬರುವ ಮೇ 9ರಂದು ನಡೆಯುವ ನಿರೀಕ್ಷೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Karnataka News Live: ಮೇ 9ಕ್ಕೆ ಚಿತ್ರದುರ್ಗದಲ್ಲಿ ಯಡಿಯೂರಪ್ಪ ಉತ್ಸವ? ಕೇಂದ್ರ ಸಚಿವ ಅಮಿತ್‌ ಶಾ ಭಾಗಿ ಸಾಧ್ಯತೆ
ಬಿಟ್‌ಕಾಯಿನ್‌ ಹಗರಣ: ಬಿಡಿಎ ಅಧ್ಯಕ್ಷ- ಶಾಸಕ ಹ್ಯಾರಿಸ್‌,ನಲಪಾಡ್‌ಗೆ ಇ.ಡಿ. ದಾಳಿ ಶಾಕ್‌