
ಲಖನೌ(ಮೇ.24): ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಬಹುಜನ ಸಮಾಜ ಪಕ್ಷ ಸೋತಿರುವುದರ ಕುರಿತಾಗಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಮಂಗಳವಾರ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಪಕ್ಷದ ಅಡಿಪಾಯವನ್ನು ಗಟ್ಟಿ ಮಾಡುವಂತೆ ಕರೆ ನೀಡಿದ್ದಾರೆ.
ಚುನಾವಣೆಯಲ್ಲಿ ಪಕ್ಷ ಸೋತ ಕಾರಣ ಮಂಗಳವಾರ ಮಾಯಾವತಿ ಅವರು ಆತ್ಮಾವಲೋಕನ ಸಭೆ ನಡೆಸಿದರು. 224 ಕ್ಷೇತ್ರಗಳ ವಿಧಾನಸಭೆಯಲ್ಲಿ 113 ಸ್ಪರ್ಧಿಗಳನ್ನು ಕಣಕ್ಕಿಳಿಸಿದ್ದ ಬಿಎಸ್ಪಿ ಕೇವಲ ಶೇ.0.31ರಷ್ಟು ಮತ ಪಡೆದುಕೊಳ್ಳುವ ಮೂಲಕ ಎಲ್ಲಾ ಕ್ಷೇತ್ರಗಳಲ್ಲೂ ಸೋಲು ಅನುಭವಿಸಿತ್ತು. ಕಳೆದ ಸಲ ಪಕ್ಷ ಒಬ್ಬ ಶಾಸಕನನ್ನು ಹೊಂದಿತ್ತು.
ಕರ್ನಾಟಕ ಕಾಂಗ್ರೆಸ್ನದ್ದು ಜಾತಿವಾದಿ ಸರ್ಕಾರ: ಮಾಯಾವತಿ
‘ಪ್ರತಿ ರಾಜ್ಯದಲ್ಲೂ ಬಿಎಸ್ಪಿಯ ಸಿದ್ಧತೆ ಉತ್ತಮವಾಗಿರಬೇಕು. ಚುನಾವಣೆಯ ಸಮಯದಲ್ಲಿ ರಾಜ್ಯದ ಜನರ ಮನಸ್ಥಿತಿ ಏನೇ ಇರಲಿ ಪಕ್ಷ ಸಿದ್ಧವಾಗಿರಬೇಕು. ಬಿಎಸ್ಪಿಯ ಸರ್ಕಾರ ರಚನೆಯಾದಾಗ ಮಾತ್ರ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಾನವೀಯ, ಸಾಮಾಜಿಕ ಹಾಗೂ ಆರ್ಥಿಕ ಚಿತ್ರಣಗಳನ್ನು ಮುನ್ನೆಲೆಗೆ ತರಲು ಸಾಧ್ಯ ಎಂದು ಮಾಯಾವತಿ ಹೇಳಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.