ಬೈ ಎಲೆಕ್ಷನ್: ಮಸ್ಕಿ, ಬಸವಕಲ್ಯಾಣ ಕ್ಷೇತ್ರಕ್ಕೆ ಬಿಗ್ ಗಿಫ್ಟ್ ಕೊಟ್ಟ ಸಿಎಂ

Published : Nov 24, 2020, 07:49 PM IST
ಬೈ ಎಲೆಕ್ಷನ್: ಮಸ್ಕಿ, ಬಸವಕಲ್ಯಾಣ ಕ್ಷೇತ್ರಕ್ಕೆ ಬಿಗ್ ಗಿಫ್ಟ್ ಕೊಟ್ಟ ಸಿಎಂ

ಸಾರಾಂಶ

ಇನ್ನೇನು ಶೀಘ್ರದಲ್ಲಿಯೇ ಮಸ್ಕಿ, ಬಸವಕಲ್ಯಾಣ ಉಪಚುನಾವಣೆ ಘೋಷಣೆಯಾಗಲಿದ್ದು, ಕ್ಷೇತ್ರದ ಮತದಾರರ ಓಲೈಕೆಗೆ ಈಗಾಗಲೇ ಬಿಜೆಪಿ ಮುಂದಾಗಿದೆ. 

ಬೆಂಗಳೂರು (ನ.24):  ಬೀದರ್ ಜಿಲ್ಲೆಯ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಿದೆ. ಇನ್ನೂ ಚುನಾವಣೆ ದಿನಾಂಕ ಘೋಷಣೆಯಾಗಿಲ್ಲ. ಅದಕ್ಕೂ ಮೊದಲೇ ಈ ಎರಡು ಕ್ಷೇತ್ರಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಂಪರ್ ಗಿಫ್ಟ್ ಕೊಟ್ಟಿದ್ದಾರೆ.  

ಪ್ರತಿ ಕ್ಷೇತ್ರಕ್ಕೆ 7500 ಮನೆಗಳ ನಿರ್ಮಾಣಕ್ಕೆ ಸಿಎಂ ಯಡಿಯೂರಪ್ಪ ಆದೇಶ ನೀಡಿದ್ದಾರೆ. ದೇವರಾಜು ಅರಸು ವಸತಿ ಯೋಜನೆಯಡಿ 2500 ಮನೆ ಹಾಗೂ ಪಿಎಂ ಆವಾಜ್​ ಯೋಜನೆಯಡಿ 5000 ಮನೆ ನಿರ್ಮಾಣ ಮಾಡಲು ಸರ್ಕಾರ ಅನುಮೋದನೆ ನೀಡಿದೆ. ಈ ಮೂಲಕ ಮತದಾರರ ಓಲೈಕೆಗೆ ಸರ್ಕಾರ ಮುಂದಾಗಿದೆ.

ಉಪಚುನಾವಣೆ ದಿನಾಂಕ ಪ್ರಕಟವಾಗುವ ಮುನ್ನ ಮಸ್ಕಿಗೆ ದೀಪಾವಳಿ ಗಿಫ್ಟ್

ಈಗಾಗಲೇ ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣಾ ಗೆಲುವಿನಲ್ಲಿರುವ ಬಿಜೆಪಿಗೆ ಈ ಚುನಾವಣೆ ಕೂಡ ಪ್ರತಿಷ್ಠೆಯಾಗಿದೆ. ಈ ಹಿನ್ನಲೆಯಲ್ಲಿ ಮನೆ ಆಫರ್ ನೀಡಿದೆ. ಇತ್ತೀಚೆಗೆಷ್ಟೇ ಮಸ್ಕಿಗೆ ಆಗಮಿಸಿದ್ದ ವಸತಿ ಸಚಿವ ವಿ.ಸೋಮಣ್ಣ ಅವರು ಕ್ಷೇತ್ರಕ್ಕೆ 6000 ಮನೆ ನೀಡುವುದಾಗಿ ಘೋಷಣೆ ಮಾಡಿ ಹೋಗಿದ್ದರು. ಅದರಂತೆ ಇದೀಗ ಸಿಎಂ ಬಿಎಸ್‌ವೈ ಆದೇಶ ಹೊರಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!