ಬಿ.ವೈ.ರಾಘವೇಂದ್ರ ಜನರ ಭಾವನೆಗೆ ಸ್ಪಂದಿಸುವ ಸಂಸದ: ಸಚಿವ ವಿ.ಸೋಮಣ್ಣ ಶ್ಲಾಘನೆ

Published : Sep 26, 2024, 10:09 PM IST
ಬಿ.ವೈ.ರಾಘವೇಂದ್ರ ಜನರ ಭಾವನೆಗೆ ಸ್ಪಂದಿಸುವ ಸಂಸದ: ಸಚಿವ ವಿ.ಸೋಮಣ್ಣ ಶ್ಲಾಘನೆ

ಸಾರಾಂಶ

ಶಿವಮೊಗ್ಗ ಜಿಲ್ಲೆಯ ಸಂಸದ ಬಿ.ವೈ.ರಾಘವೇಂದ್ರ ನಾಲ್ಕನೇ ಬಾರಿ ಸಂಸದರಾಗಿದ್ದರೂ ಜನರನ್ನು ಮರೆತಿಲ್ಲ. ಹಾಗೆಯೇ ಜನರ ಭಾವನೆಗಳಿಗೆ ಸ್ಪಂದಿಸುವ ಸಂಸದರಾಗಿದ್ದಾರೆ ಎಂಬ ಸಂಗತಿ ತಿಳಿದು ಸಂತಸವಾಗಿದೆ ಎಂದು ಜನಶಕ್ತಿ ಹಾಗೂ ಕೇಂದ್ರ ರೇಲ್ವೆ ಸಹಾಯಕ ಸಚಿವ ಸೋಮಣ್ಣ ಶ್ಲಾಘನೆ ವ್ಯಕ್ತಪಡಿಸಿದರು.

ಶಿರಾಳಕೊಪ್ಪ (ಸೆ.26): ಶಿವಮೊಗ್ಗ ಜಿಲ್ಲೆಯ ಸಂಸದ ಬಿ.ವೈ.ರಾಘವೇಂದ್ರ ನಾಲ್ಕನೇ ಬಾರಿ ಸಂಸದರಾಗಿದ್ದರೂ ಜನರನ್ನು ಮರೆತಿಲ್ಲ. ಹಾಗೆಯೇ ಜನರ ಭಾವನೆಗಳಿಗೆ ಸ್ಪಂದಿಸುವ ಸಂಸದರಾಗಿದ್ದಾರೆ ಎಂಬ ಸಂಗತಿ ತಿಳಿದು ಸಂತಸವಾಗಿದೆ ಎಂದು ಜನಶಕ್ತಿ ಹಾಗೂ ಕೇಂದ್ರ ರೇಲ್ವೆ ಸಹಾಯಕ ಸಚಿವ ಸೋಮಣ್ಣ ಶ್ಲಾಘನೆ ವ್ಯಕ್ತಪಡಿಸಿದರು. ಬೆಳಗ್ಗೆ ಶಿವಮೊಗ್ಗಕ್ಕೆ ಹೋಗುವ ಮಾರ್ಗಮಧ್ಯೆ ಶಿರಾಳಕೊಪ್ಪ ಬಸವೇಶ್ವರ ಪಟ್ಟಣ ಸಹಕಾರ ಬ್ಯಾಂಕಿಗೆ ಇಲ್ಲಿಯ ಆಡಳಿತ ಮಂಡಳಿ ಆಹ್ವಾನ ಮೇರೆಗೆ ಆಗಮಿಸಿ ಸನ್ಮಾನ ಸ್ವೀಕರಿಸಿದ ಅವರು ನಂತರ ಪತ್ರಿಕಾ ವರದಿಗಾರರನ್ನು ಉದ್ದೇಶಿಸಿ ಮಾತನಾಡಿದರು.

ನಾನು ಜನಶಕ್ತಿ ಮತ್ತು ರೇಲ್ವೆ ಮಂತ್ರಿ ಆದ ಮೇಲೆ ನಮ್ಮ ಜಿಲ್ಲೆಗೆ ಬರಲೇ ಬೇಕು ಎಂಬ ಒತ್ತಾಯ ಮಾಡಿದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ಜಿಲ್ಲೆಗೆ ಬರುತ್ತಿದ್ದೇನೆ. ನಮ್ಮ ನಾಯಕ ಬಿ.ಎಸ್ ಯಡಿಯೂರಪ್ಪನವರ ಪುತ್ರ ಸಂಸದ ರಾಘವೇಂದ್ರ ಅವರ ವಿನಂತಿ ಮೇರೆಗೆ ದಿನಪೂರ್ತಿ ಅವರೊಂದಿಗೆ ಇದ್ದು, ನಮ್ಮ ಇಲಾಖೆಯಿಂದ ಏನೆಲ್ಲ ಕೆಲಸಗಳು ಆಗಬೇಕು ಎಂಬ ಬಗ್ಗೆ ಕೇಂದ್ರದ ರಾಜ್ಯದ ಅಧಿಕಾರಿಗಳು ಬರಲಿದ್ದು, ಅವರೊಂದಿಗೆ ಚರ್ಚೆ ಮಾಡಿ ಮುಂದುವರೆಯುತ್ತೇವೆ ಎಂದರು.  ಶಿವಮೊಗ್ಗದಿಂದ ಶಿಕಾರಿಪುರ-ಶಿರಾಳಕೊಪ್ಪ ಮಾಗರ್ವಾಗಿ ಉತ್ತರ ಕರ್ನಾಟಕಕ್ಕೆ ರೇಲ್ವೆ ಯೋಜನೆ ರೂಪಿಸುವಂತೆ ವರದಿಗಾರರು ಕೇಳಿದ ಪ್ರಶ್ನೆಗೆ, ಇಂದು ಶಿವಮೊಗ್ಗದಲ್ಲಿ ರೇಲ್ವೆ ಜನರಲ್ ಮ್ಯಾನೇಜರ್ ಸೇರಿದಂತೆ ರಾಜ್ಯದ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡುತ್ತೇವೆ.

ಕೊಡಗು ಜಿಲ್ಲೆಯಲ್ಲಿ 28 ಸಾವಿರಕ್ಕೂ ಹೆಚ್ಚು ಫಲಾನುವಿಗಳಿಗಿಲ್ಲ ಕಾಂಗ್ರೆಸ್ ಗ್ಯಾರಂಟಿ ಯೋಜನೆ: ಪುಷ್ಪಾ ಅಮರನಾಥ್

ತಾಳಗುಪ್ಪದಿಂದ ಸಿರಾ ಹಾಗೆಯೇ, ಸಿರ್ಸಿಗೆ ರೇಲ್ವೆ ಮಾರ್ಗ ರಚಿಸುವ ಕುರಿತು ಚರ್ಚೆ ಮಾಡುತ್ತೇವೆ. ಈಗಾಗಲೇ ಟೆಂಡರ್ ಕರೆಯಲಾಗಿದೆ. ಇನ್ನು ೩-೪ ತಿಂಗಳಲ್ಲಿ ಈ ತರಹದ ಎಲ್ಲಾ ಬೆಳವಣಿಗೆಗೆ ಕಾಯಕಲ್ಪ ದೊರಕಲಿದೆ ಎಂದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಹೆಚ್.ಎಂ.ಗಂಗಮ್ಮ, ನಟರಾಜ್‌ ಸೂರಣಗಿ , ನಗರ ಅಧ್ಯಕ್ಷ ಚೆನ್ನವೀರಶೆಟ್ಟಿ, ಶಿವಾನಂದ ಸ್ವಾಮಿ, ಹೆಚ್.ಎಂ.ಚಂದ್ರಶೇಖರ, ರವಿ ಶಾನಭೋಗ, ಲೋಕೇಶ್, ಶಿಕಾರಿಪುರದ ಹುಲ್ಮಾರ್‌ ಮಹೇಶ್, ಚಂದ್ರಶೇಖರ್ ಮಂಚಾಲಿ ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್