
ಕಲಬುರಗಿ(ಮಾ.17): ಕಲಬುರಗಿ ಬಹಿರಂಗ ಸಭೆ ಮೂಲಕ ಚುನಾವಣೆ ರಣಕಹಳೆ ಮೊಳಗಿಸಿದ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರಲ್ಲಿ ವಿಶ್ವಾಸ ತುಂಬಿ ಹೋಗಿದ್ದಾರೆ ಎಂದು ಲೋಕಸಭಾ ಚುನಾವಣಾ ದಿನಾಂಕ ಘೋಷಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬಹಳ ದಿನಗಳಿಂದ ಲೋಕಸಭೆ ಚುನಾವಣೆ ದಿನಾಂಕದ ಘೋಷಣೆ ನಿರೀಕ್ಷೆಯಲ್ಲಿದ್ದೆವು. ಆಯೋಗ ಶನಿವಾರ ದಿನಾಂಕ ಘೋಷಣೆ ಮಾಡಿದೆ. ಮೋದಿ ಕೊಡುಗೆಗಳು, ರಾಜ್ಯ ಸರಕಾರದ ವೈಫಲ್ಯ ಎರಡೂ ನಮಗೆ ಅನುಕೂಲಕರವಾಗಿದೆ. ನಮ್ಮ ಪ್ರಜ್ಞಾವಂತ ಮತದಾರರು ದೇಶದ ಹಿತದೃಷ್ಟಿಯಿಂದ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿಸುತ್ತಾರೆ. ರಾಜ್ಯದ ಎಲ್ಲಾ 28 ಕ್ಷೇತ್ರಗಳು ನಮ್ಮ ಪರವಾಗಿವೆ ಎಂದು ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ವಿಜಯೇಂದ್ರ ಪ್ರತಿಕ್ರಿಯಿಸಿದರು.
ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಿರೋದು ಅನ್ನ ಹಾಕೋಕೆ ಅಲ್ಲ, ಕನ್ನ ಹಾಕೋಕೆ: ಆರ್ ಅಶೋಕ್ ವಾಗ್ದಾಳಿ
ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಹುಡುಕುವುದರಲ್ಲಿ ತಲ್ಲೀನವಾಗಿದೆ. ಸಚಿವರನ್ನು ಚುನಾವಣಾ ಕಣಕ್ಕಿಳಿಸಲು ಒತ್ತಡ ಹಾಕುತ್ತಿದ್ದಾರೆ. ಆದರೆ ಅಭ್ಯರ್ಥಿಯಾಗಲು ಸಚಿವರು ಧೈರ್ಯ ಮಾಡುತ್ತಿಲ್ಲ. ಮೋದಿ ಜನಪ್ರಿಯತೆ, ಜನರ ಒಲವು ನಮಗೆ ಕಾಂಗ್ರೆಸ್ ಸೋಲಿಸಲು ಬ್ರಹ್ಮಾಸ್ತ್ರಗಳಾಗಿವೆ. ನಮ್ಮ ಪಕ್ಷದಲ್ಲಿನ ಗೊಂದಲಗಳೆಲ್ಲವೂ ಸದ್ಯದಲ್ಲೇ ಬಗೆಹರಿಯಲಿವೆ ಎಂದು ವಿಜಯೇಂದ್ರ ಹೇಳಿದರು.
ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವುದು ದೇಶದ ಜನರ ಬಯಕೆ. ರಾಜ್ಯ ದಲ್ಲೂ ಇದೇ ವಾತಾವರಣ ಇದೆ. ಮೋದಿ ಅವರ ಜನಪ್ರೀಯತೆ ಮತವಾಗಿ ಪರಿವರ್ತನೆ ಮಾಡಬೇಕು. ಜೆಡಿಎಸ್ ಜೊತೆ ಒಂದಾಗಿ ರಾಜ್ಯದಲ್ಲಿ ಮತ್ತೊಂದು ಐತಿಹಾಸಿಕ ಗೆಲುವು ಬಿಜೆಪಿಗೆ ಸಿಗಲಿದೆ ಎಂದರು. ಕಲಬುರಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಬಿಜೆಪಿ ಕಾರ್ಯಕರ್ತರು ಮತ್ತು ಬೇರೆ ಸಮಾಜದವರ ಕೊಲೆ ದಬ್ಬಾಳಿಕೆ ಗುಂ ಡಾಗಿರಿ ಕಲಬುರಗಿಯಲ್ಲಿ ಹೆಚ್ಚಾಗಿದೆ. ಈ ಜಿಲ್ಲೆಯ ಮಂತ್ರಿಗಳು ಬರೀ ಉಪದೇಶ ಕೊಡ್ತಾ ರೆ. ಮತದಾರರು ಈ ಬಾರಿ ಇಂಥವರಿಗೆ ತಕ್ಕ ಉತ್ತರ ನೀಡುತ್ತಾರೆಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.