ಮತ್ತೆ ಕಿಂಗ್‌ ಮೇಕರ್ ಆದ ಬಿಎಸ್‌ವೈ: ವಿರೋಧಿಗಳಿಗೆ ಪಾಠ ಕಲಿಸಿದ ರಾಜಾಹುಲಿ!

Published : Aug 04, 2021, 11:57 AM ISTUpdated : Aug 04, 2021, 12:02 PM IST
ಮತ್ತೆ ಕಿಂಗ್‌ ಮೇಕರ್ ಆದ ಬಿಎಸ್‌ವೈ: ವಿರೋಧಿಗಳಿಗೆ ಪಾಠ ಕಲಿಸಿದ ರಾಜಾಹುಲಿ!

ಸಾರಾಂಶ

* ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ ಯಡಿಯೂರಪ್ಪ. * ತನ್ನ ವಿರೋಧಿಗಳಿಗೆ ಪಾಠ ಕಲಿಸಿದ ರಾಜಹುಲಿ. * ಒಂದು ಕಡೆ ಬಸವರಾಜ್ ಬೊಮ್ಮಾಯಿಯನ್ನ ಸಿಎಂ ಮಾಡಿ ಗೆದ್ದಿದ್ದ ಬಿಎಸ್‌ವೈ. * ಇದೀಗ ವಿರೋಧಿ ಪಾಳಯಕ್ಕೆ ಶಾಕ್ ನೀಡಿದ ಯಡಿಯೂರಪ್ಪ.

ಬೆಂಗಳೂರು(ಆ. 04): ಬಿಎಸ್‌ವೈ ರಾಜೀನಾಮೆ ಬಳಿಕ ಬಸವರಾಜ ಬೊಮ್ಮಾಯಿ ಕರ್ನಾಟಕದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸಿಎಂ ಆದ ಬೆನ್ನಲ್ಲೇ ಸಂಪುಟ ರಚನೆ ಕಸರತ್ತು ಆರಂಭವಾಗಿದ್ದು, ಇಂದು ಮಧ್ಯಾಹ್ನ 2.15ಕ್ಕೆ ರಾಜಭವನದಲ್ಲಿ ಸಚಿವರ ಪ್ರಮಾಣವಚನ ಸಮಾರಮಭ ನಡೆಯಲಿದೆ. ಹೀಗಿದ್ದರೂ ಯಾರೆಲ್ಲಾ ಸಸಚಿವರಾಗುತ್ತಾರೆ ಎಂಬ ಕುತೂಹಲ ಇನ್ನೂ ಮುಂದುವರೆದಿದೆ. ಆದರೀಗ ಈ ಸಂಪುಟ ಕಸರತ್ತಿನ ಮಧ್ಯೆ ಬಿಎಸ್‌ವೈ ಮತ್ತೆ ಕಿಂಗ್ ಮೇಕರ್ ಆಗಿ ಹೊರಹೊಮ್ಮಿದ್ದಾರೆ.

ಹೌದು ರಾಜೀನಾಮೆ ನೀಡಿದ್ದ ಬಿಎಸ್‌ವೈ, ಈ ಸ್ಥಾನಕ್ಕೆ ತಮ್ಮ ಆಪ್ತ ಬಸವರಾಜ ಬೊಮ್ಮಾಯಿ ಅವರ ಶಿಫಾರಸ್ಸು ಮಾಡಿ, ಅವರನ್ನೇ ಮುಖ್ಯಮಂತ್ರಿಯಾಗಿಸುವಲ್ಲಿ ಯಶಸ್ವಿಯಾಗಿದ್ದರು. ಈ ಮೂಲಕ ಮೊದಲ ಜಯ ಗಳಿಸಿದ್ದರು. ಇದರ ಬೆನ್ನಲ್ಲೇ ರಾಜಾಹುಲಿ ತಮ್ಮ ವಿರೋಧಿಗಳಿಗೂ ತಕ್ಕ ಪಾಠ ಕಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಬಿಎಸ್‌ವೈ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿದ್ದಾರೆ.

ಬೊಮ್ಮೈಆಇ ಸಂಪುಟದಲ್ಲಿ ಸ್ಥಾನ ಪಡೆಯುವ ಸಂಭಾವ್ಯ ಸಚಿವರ ಹೆಸರುಗಳು ಭಾರೀ ಸದ್ದು ಮಾಡುತ್ತಿವೆ. ಆದರೆ ಈ ಪಟ್ಟಿಯಲ್ಲಿ ಬಿಎಸ್‌ವೈ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದ ಸಿ. ಪಿ. ಯೋಗೇಶ್ವರ್, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಎಂ ಆಕಾಂಕ್ಷಿಯಾಗಿದ್ದ ಅರವಿಂದ್ ಬೆಲ್ಲದ್ ಹೆಸರುಗಳು ಮಾತ್ರ ಕಣ್ಮರೆಯಾಗಿವೆ. ಇದು ಬಿಎಸ್‌ವೈ ವಿರೋಧಿ ಪಾಳಯಕ್ಕೆ ಬಹುದೊಡ್ಡ ಶಾಕ್ ಕೊಟ್ಟಿದೆ.

ಸದ್ಯ ಸಂಭಾವ್ಯ ಸಚಿವರ ಪಟ್ಟಿಯನ್ವಯ ಬಿಎಸ್‌ವೈ ಸಿಎಂ ಸ್ಥಾನಕ್ಕೆ ಕುತ್ತು ತಂದವರಿಗೆ ಯಾವುದೇ ಮನ್ನಣೆ ಸಿಗದಿರುವುದು ಸ್ಪಷ್ಟವಾಗಿದೆ. ಮತ್ತೊಂದೆಡೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಬಿಎಸ್‌ವೈ ಮತ್ತೆ ರಾಜ್ಯದಲ್ಲಿ ಕಿಂಗ್ ಮೇಕರ್ ಆಗಿರುವುದು ಸ್ಪಷ್ಟ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!