
ಬೆಂಗಳೂರು, (ನ.30): ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ಪ್ರಕಟವಾಗಿದೆ. ಡಿ.22 ಹಾಗೂ ಡಿ.27 ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.
ಇದರ ಮಧ್ಯೆಯೇ ಬಹುದಿನಗಳಿಂದ ಚಾತಕ ಪಕ್ಷಿಗಳಂತೆ ಕಾದು ಕುಳಿತಿರುವ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.
ಸಿಎಂ ಕಚೇರಿ ಕೃಷ್ಣದಲ್ಲಿ ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ. ಇನ್ನು ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗುತ್ತೇನೋ ನೋಡೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾರ್ಮಿಕವಾಗಿ ಹೇಳಿದರು.
ಕಳಂಕದ ಖೆಡ್ಡಕ್ಕೆ ಬೀಳುತ್ತಿದೆ ಕಮಲ: 2008ರ ತಪ್ಪನ್ನೇ ಪುನರಾವರ್ತಿಸ್ತಿದ್ಯಾ ರಾಜ್ಯ ಬಿಜೆಪಿ ..?
ಗ್ರಾಮ ಪಂಚಾಯ್ತಿ ಚುನಾವಣೆ ವೇಳಾಪಟ್ಟಿ ಘೋಷಣೆಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದೆ. ಅಭಿವೃದ್ಧಿ ಕೆಲಸ, ಇತರ ಚಟುವಟಿಕೆ ಮಾಡುವಂತಿಲ್ಲ ಎಂದರು.
ಪಂಚಾಯ್ತಿ ಚುನಾವಣೆ ಪಕ್ಷಾತೀತವಾಗಿ ನಡೆದರೂ ಯಾರು ಯಾವ ಪಕ್ಷದವರು ಎಂಬುದು ಗೊತ್ತಾಗುತ್ತದೆ. ಸಂಘಟನೆ ದೃಷ್ಟಿಯಿಂದ ಪಂಚಾಯ್ತಿ ಚುನಾವಣೆಯೂ ಮುಖ್ಯ. ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕಾದರೆ ಒಳ್ಳೆಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು. ಇದು ಲೋಕಸಭೆ, ವಿಧಾನಸಭೆ ಚುನಾವಣೆಯಷ್ಟೇ ಮಹತ್ವವಾದುದು ಎಂದು ಹೇಳಿದರು.
ಇದೀಗಾಗಲೇ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ತಂಡಗಳು ಪ್ರವಾಸ ಮಾಡುತ್ತಿದೆ, ಈಗಾಗಲೇ ಗ್ರಾಮ ಸ್ವಾರಾಜ್ ಸಮಾವೇಶಗಳನ್ನು ಮಾಡುತ್ತಿದ್ದೇವೆ. ಪಕ್ಷದ ಸಂಘಟನೆಯತ್ತ ಹೆಚ್ಚು ಗಮನ ಹರಿಸುತ್ತೇವೆ ಎಂದು ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.