ಸದ್ಯದ ಪರಿಸ್ಥಿತಿಯಲ್ಲಿ ಸಂಪುಟ ಪುನಾರಚನೆ ಚರ್ಚೆಯಲ್ಲಿಲ್ಲ: ಸಚಿವ ಚಲುವರಾಯಸ್ವಾಮಿ

Published : Aug 14, 2024, 08:16 PM IST
ಸದ್ಯದ ಪರಿಸ್ಥಿತಿಯಲ್ಲಿ ಸಂಪುಟ ಪುನಾರಚನೆ ಚರ್ಚೆಯಲ್ಲಿಲ್ಲ: ಸಚಿವ ಚಲುವರಾಯಸ್ವಾಮಿ

ಸಾರಾಂಶ

ಸದ್ಯದ ಪರಿಸ್ಥಿತಿಯಲ್ಲಿ ಸಂಪುಟ ಪುನಾರಚನೆ ವಿಷಯ ಚರ್ಚೆಯಲ್ಲೇ ಇಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.

ಮಂಡ್ಯ (ಆ.14): ಸದ್ಯದ ಪರಿಸ್ಥಿತಿಯಲ್ಲಿ ಸಂಪುಟ ಪುನಾರಚನೆ ವಿಷಯ ಚರ್ಚೆಯಲ್ಲೇ ಇಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು. ಪಕ್ಷದಲ್ಲಿ ಎಲ್ಲರೂ ಅಧಿಕಾರ ಕೊಡಬೇಕು. ಹೀಗಾಗಿ ಸಂಪುಟ ಪುನಾರಚನೆ ಅಥವಾ ಖಾತೆ ಬದಲಾವಣೆ ಮಾಡೋದು ಸಹಜ. ಆದರೆ, ಈಗ ಆ ವಿಚಾರ ಚರ್ಚೆಯಲ್ಲಿ ಇಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.

ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, ನಮ್ಮ ಸ್ನೇಹಿತರು ಹುಟ್ಟು ಸುಳ್ಳುಗಾರರು. ನಾನು ಅವರೊಂದಿಗೇನು ಜಗಳವಾಡಿಲ್ಲ, ಕುಸ್ತಿಯಾಡಿಲ್ಲ. ಇಂಥಾ ಅಭಿವೃದ್ಧಿಯಾಗಬೇಕೆಂದು ನನಗೆ ಹೇಳಲಿ. ನಾನು ಮುಖ್ಯಮಂತ್ರಿ ಅವರ ಬಳಿ ಕುಳಿತು ಮಾತಾಡುತ್ತೇನೆ. ಸರ್ಕಾರದಿಂದ ಎಲ್ಲಾ‌ ರೀತಿಯ ಸಹಕಾರ ಕೊಡಿಸುತ್ತೇನೆ ಎಂದು ಭರವಸೆ ನೀಡಿದರು. ನಾವು ಮಾತನಾಡಿದರೆ ಕುಮಾರಸ್ವಾಮಿ ಅವರ ಹಿಂಬಾಲಕರಿಗೆ ಮೆಣಸಿನಕಾಯಿ ಹಾಕಿದ ಹಾಗೆ ಆಗುತ್ತೆ. ರಾಮನಗರದಲ್ಲಿ ಎಷ್ಟು ಕೆಡಿಪಿ ಸಭೆ ಮಾಡಿದ್ದಾರೆ. 

ಎಷ್ಟು ಜನರ ಸಮಸ್ಯೆಗೆ ಸ್ಪಂದಿಸಿದ್ದಾರೆ. ರಾಜಕೀಯ ಸಭೆ ಮಾಡಿದರೆ ರಾತ್ರಿ‌ 12 ಗಂಟೆಗೆ ಎದ್ದು ಬರುತ್ತಾರೆ ಎಂದು ಟೀಕಿಸಿದರು. ನಿನ್ನೆ ಭತ್ತದ ನಾಟಿ ಮಾಡಿದ್ದಾರೆ. ನಾನು ಬೇರೆ ಕಡೆಗೆ ಹೋದಾಗ ಟ್ರ್ಯಾಕ್ಟರ್ ಎಲ್ಲಾ ಓಡಿಸುತ್ತೇನೆ. ಅದನ್ನು ರಾಜಕೀಯ ವಿಚಾರ ಮಾಡುವುದಿಲ್ಲ. ನಾನು ನಾಟಿ ಮಾತ್ರ ಮಾಡುವುದಿಲ್ಲ. ನೇಗಿಲು ಹಿಡಿದು ಉಳುಮೆನೂ ಮಾಡುತ್ತೇನೆ. ಜಿಲ್ಲೆಯ ರೈತರಿಗೆ ಹೊಸ ಮಾದರಿಯಲ್ಲಿ ನಾಟಿ‌ ಮಾಡೋದನ್ನ ಕಲಿಸೋಕೆ ಬಂದಿದ್ದರೇನೋ ಪಾಪ.. ಮಂಡ್ಯ ಜನರಿಗೆ ಹುಟ್ಟುತ್ತಲೇ ಭತ್ತ, ಕಬ್ಬು ನಾಟಿ ಮಾಡೋದು ಗೊತ್ತಿದೆ. ಅವರು ಯುವಕರಿಗೆ ಕೆಲಸ ಕೊಡಿಸುತ್ತೇನೆ ಎಂದಿದ್ದಾರೆ. 

ತುಂಗಭದ್ರಾ ಅಣೆಕಟ್ಟು ವಿಚಾರದಲ್ಲಿ ರಾಜಕೀಯ ಬೆರೆಸಬೇಡಿ: ಸಚಿವ ಚಲುವರಾಯಸ್ವಾಮಿ

ಕೆಡಿಪಿ ಸಭೆಗೆ ಬರದೇ ಇದ್ದರೂ ಪರವಾಗಿಲ್ಲ. ಯುವಕರಿಗೆ ಉದ್ಯೋಗ ಕೊಡಿಸುವ ಕೆಲಸವನ್ನಾದರೂ ಮಾಡಲಿ ಎಂದು ವ್ಯಂಗ್ಯವಾಡಿದರು. ಕುಮಾರಸ್ವಾಮಿ ಬೆಳಗ್ಗೆ ಎದ್ದರೆ ಸಾಕು ಸರ್ಕಾರ ತೆಗೀತೀವಿ ಅಂತಾರೆ. ಅದೇನು ಮಕ್ಕಳ ಆಟನಾ?. ಡಿ.ಕೆ.ಶಿವಕುಮಾರ್ ನಿಂದಿಸುವುದೇ ಕೆಲಸ ಅಂದುಕೊಂಡಿದ್ದಾರಾ. ಕುಮಾರಸ್ವಾಮಿ ಎರಡು ಬಾರಿ ಸಿಎಂ ಆದಾಗ ಅವರ ಜೊತೆ ನಿಂತಿದ್ದು ಒಕ್ಕಲಿಗರೇ. ಮೊದಲ ಬಾರಿಗೆ ಸಿಎಂ ಆದಾಗ ಒಕ್ಕಲಿಗ ಚಲುವರಾಯಸ್ವಾಮಿ ಅವರ ಜೊತೆ ನಿಂತಿದ್ದರು. ಎರಡನೇ ಬಾರಿಗೆ ಸಿಎಂ ಮಾಡಿದ್ದು ಡಿ.ಕೆ.ಶಿವಕುಮಾರ್. ಇದನ್ನು ಅವರು ಮರೆಯಬಾರದು ಎಂದು ತಿರುಗೇಟು ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ