ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ

Kannadaprabha News   | Kannada Prabha
Published : Oct 26, 2025, 05:18 AM IST
CM Siddaramaiah

ಸಾರಾಂಶ

ಸಂಪುಟ ಪುನಾರಚನೆ ಮಾಡುವಂತೆ ನಾಲ್ಕೈದು ತಿಂಗಳ ಹಿಂದೆಯೇ ಹೈಕಮಾಂಡ್‌ ಸೂಚನೆ ಕೊಟ್ಟಿತ್ತು. ಸರ್ಕಾರಕ್ಕೆ ಎರಡೂವರೆ ವರ್ಷವಾಗಲಿ ಎಂದು ಹೇಳಿದ್ದೆ. ಹೀಗಾಗಿ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್‌ ಜತೆ ಮಾತನಾಡುತ್ತೇನೆ. ಹೈಕಮಾಂಡ್‌ ಹೇಳಿದರೆ ಮಾಡುತ್ತೇನೆ

ಬೆಳಗಾವಿ : ಸಂಪುಟ ಪುನಾರಚನೆ ಮಾಡುವಂತೆ ನಾಲ್ಕೈದು ತಿಂಗಳ ಹಿಂದೆಯೇ ಹೈಕಮಾಂಡ್‌ ಸೂಚನೆ ಕೊಟ್ಟಿತ್ತು. ಸರ್ಕಾರಕ್ಕೆ ಎರಡೂವರೆ ವರ್ಷವಾಗಲಿ ಎಂದು ಹೇಳಿದ್ದೆ. ಈಗ ಸರ್ಕಾರಕ್ಕೆ ಎರಡೂವರೆ ವರ್ಷವಾಗುತ್ತಿದೆ. ಹೀಗಾಗಿ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್‌ ಜತೆ ಮಾತನಾಡುತ್ತೇನೆ. ಹೈಕಮಾಂಡ್‌ ಹೇಳಿದರೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಲ್ಲೆಯ ಚನ್ನಮ್ಮನ ಕಿತ್ತೂರಿನಲ್ಲಿ ಶನಿವಾರ ಕಿತ್ತೂರು ಉತ್ಸವದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ನಾಯಕ ಕಪಿಲ್ ಸಿಬಲ್ ಅವರ ಪುಸ್ತಕ ಬಿಡುಗಡೆಗಾಗಿ ದೆಹಲಿಗೆ ಹೋಗುತ್ತಿದ್ದೇನೆ. ಅಲ್ಲಿಗೆ ಹೋದಾಗ ಪಕ್ಷದ ನಾಯಕರನ್ನು ಭೇಟಿಯಾಗುತ್ತೇನೆ. ನಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಆಡಳಿತಾತ್ಮಕ ವಿದ್ಯಮಾನಗಳ ಬಗ್ಗೆ ತಿಳಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಸಿಎಂ ವಿಚಾರವಾಗಿ ಯತೀಂದ್ರ ಹೇಳಿಕೆಯನ್ನು ನೀವು (ಮಾಧ್ಯಮಗಳು) ತಿರುಚಿದ್ದೀರಿ

ಸಿಎಂ ವಿಚಾರವಾಗಿ ಯತೀಂದ್ರ ಹೇಳಿಕೆಯನ್ನು ನೀವು (ಮಾಧ್ಯಮಗಳು) ತಿರುಚಿದ್ದೀರಿ. ಸೈದ್ಧಾಂತಿಕವಾಗಿ ಅವರು ಹೇಳಿಕೆ ಕೊಟ್ಟಿದ್ದಾರೆ. ಈಗ ನಾನು ಅಹಿಂದ ಸಂಘಟನೆ ಮಾಡುತ್ತಿದ್ದೇನೆ. ಮುಂದೆ ಸತೀಶ ಜಾರಕಿಹೊಳಿ ಮಾಡುತ್ತಾರೆ ಎಂದಿದ್ದಾರೆ. ಅವರೇ ಲೀಡರ್ ಆಗಬೇಕು ಎಂದು ಹೇಳಿದ್ದಾರಾ? ಅದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆಯೇ ಹೊರತು ನಾವಲ್ಲ ಎಂದು ಹೇಳಿದರು.

ಎರಡನೇ ಬಾರಿ ಕಿತ್ತೂರು ಉತ್ಸವಕ್ಕೆ

ಎರಡನೇ ಬಾರಿ ಕಿತ್ತೂರು ಉತ್ಸವಕ್ಕೆ ಬಂದಿದ್ದೇನೆ. ಮೂರನೇ ಸಲವೂ ಬರಲು ಯತ್ನಿಸುತ್ತೇ‌ನೆ ಎಂದರು. ಮುಂದಿನ ವರ್ಷ ಮೈಸೂರು ಮಾದರಿಯಲ್ಲಿ ಡ್ರೋನ್ ಶೋ ಮಾಡುತ್ತೀರಾ ಎಂಬ ಪ್ರಶ್ನೆಗೆ, ಕಿತ್ತೂರು ಉತ್ಸವದಲ್ಲಿ ಯಾವ ಮಾದರಿ ಕಾರ್ಯಕ್ರಮ ಮಾಡಬೇಕು ಎಂಬುದನ್ನು ಶಾಸಕ ಬಾಬಾಸಾಹೇಬ ಪಾಟೀಲರ ವಿವೇಚನೆಗೆ ಬಿಡುವೆ ಎಂದು ಹೇಳಿದರು.

ಒಳಮೀಸಲಾತಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೆಪಿಎಸ್ಸಿಯವರಿಗೆ ಸಂದರ್ಶನ ಮಾಡಿ ಆದರೆ, ಫಲಿತಾಂಶ ಪ್ರಕಟಿಸಬೇಡಿ ಎಂದು ಕೋರ್ಟ್ ಹೇಳಿದೆ. ಫಲಿತಾಂಶ ಪ್ರಕಟಿಸುವ ಮುನ್ನ ನಮ್ಮನ್ನು ಕೇಳುವಂತೆ ಕೋರ್ಟ್ ತಿಳಿಸಿದೆ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌ನ ಲೋಕಾಯುಕ್ತರ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!