ಐಟಿ ದಾಳಿ: ಡಿಕೆಶಿ, ಸಿದ್ದರಾಮಯ್ಯ, HDK ಸೇರಿದಂತೆ ಹಲವರ ವಿರುದ್ಧ FIR

Published : Nov 29, 2019, 02:04 PM IST
ಐಟಿ ದಾಳಿ: ಡಿಕೆಶಿ, ಸಿದ್ದರಾಮಯ್ಯ, HDK ಸೇರಿದಂತೆ ಹಲವರ ವಿರುದ್ಧ FIR

ಸಾರಾಂಶ

ಉಪಚುನಾವಣೆಯ ಬಿರುಸಿನ ಪ್ರಚಾರದಲ್ಲಿ ತೊಡಗಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ಮಾಜಿ ಸಿಎಂ ಎಚ್,ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್​ ಹಾಗೂ ಜೆಡಿಎಸ್​ ಪ್ರಮುಖ ನಾಯಕರ ಮೇಲೆ ಎಫ್​ಐಆರ್ ದಾಖಲಾಗಿದೆ. ಇದರ ಸಂಪೂರ್ಣ ವಿವರ ಈ ಕೆಳಗಿನಂತಿದೆ. 

ಬೆಂಗಳೂರು, (ನ.29): ಸಾಮಾಜಿಕ ಕಾರ್ಯಕರ್ತ ಮಲ್ಲಿಕಾರ್ಜುನ ಅವರು ನೀಡಿದ್ದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಪ್ರಮುಖ ನಾಯಕರ ಮೇಲೆ ಎಫ್‌ಐಆರ್ ದಾಖಲಾಗಿದೆ.

ಮಾಜಿ ಮುಖ್ಯಮಂತ್ರಿ ಎಚ್. ಡಿ. ಸಿದ್ದರಾಮಯ್ಯ, ಡಿ.ಸಿ.ತಮ್ಮಣ್ಣ, ಡಾ.ಜಿ.ಪರಮೇಶ್ವರ್, ಡಿಕೆ ಶಿವಕುಮಾರ್, LR ಶಿವಲಿಂಗೇಗೌಡ ಹಾಗೂ ಸಾರಾ ಮಹೇಶ್ ವಿರುದ್ಧ ಬೆಂಗಳೂರಿನ ಕಮರ್ಸಿಯಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಐಟಿ ದಾಳಿ: ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾದಿಯಲ್ಲಿ ಕುಮಾರಸ್ವಾಮಿ ನಡೆ

ಕೇವಲ ರಾಜಕೀಯ  ನಾಯಕ ಮೇಲೆ ಮಾತ್ರವಲ್ಲದೇ ಪೊಲೀಸ್ ಅಧಿಕಾರಿಗಳು ಮತ್ತು ಚುನಾವಣಾಧಿಕಾರಿಗಳ ಮೇಲೂ FIR ಹಾಕಲಾಗಿದೆ.

2019 ಲೋಕಸಭಾ ಚುನಾವಣೆ ವೇಳೆ ಕೆಲವು ನಾಯಕರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಐಟಿ ದಾಳಿ ಖಂಡಿಸಿ ಕ್ವೀನ್ಸ್ ರಸ್ತೆಯಲ್ಲಿರುವ ಆದಾಯ ತೆರಿಗೆ ಕಚೇರಿ ಮುಂದೆ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿದ್ದರು.

ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.ಅಲ್ಲದೇ ಪೊಲೀಸರು ಕರ್ತವ್ಯ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆಂದು ಆರೋಪಿಸಿ ಮಲ್ಲಿಕಾರ್ಜುನ ದೂರು ದಾಖಲಿಸಿದ್ದರು. 

ದಳಪತಿ ಆಪ್ತರ ಮೇಲೆ ಮುಂದುವರಿದ ಐಟಿ ದಾಳಿ!

 ಈ ಹಿನ್ನೆಲೆಯಲ್ಲಿ  ಕಾಂಗ್ರೆಸ್, ಜೆಡಿಎಸ್ ನಾಯಕರು ಸೇರಿದಂತೆ ಪೊಲೀಸ್ ಅಧಿಕಾರಿಗಳ ಮೇಲೆ  ಸೆಕ್ಷನ್ 217, 176, 121, 177, 506, 153A, 503, 414, 149, 143, 505(2), 124A, 353, 409, 350, 405, 417, 120(A), 416, 171C, 119, 141,142 ಮತ್ತು 499ರ ಅನ್ವಯ ಕಂಪ್ಲೆಂಟ್ ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ