ಎಚ್.ಕೆ.ಪಾಟೀಲ್‌ ಕೊಟ್ಟ ದೂರು ಮಾನ್ಯ: ರಾಜ್ಯ ಸರ್ಕಾರದ ವಿರುದ್ಧ ಪ್ರಕರಣ ದಾಖಲು

Published : Aug 01, 2020, 02:44 PM IST
ಎಚ್.ಕೆ.ಪಾಟೀಲ್‌ ಕೊಟ್ಟ ದೂರು ಮಾನ್ಯ: ರಾಜ್ಯ ಸರ್ಕಾರದ ವಿರುದ್ಧ ಪ್ರಕರಣ ದಾಖಲು

ಸಾರಾಂಶ

ಕಾಂಗ್ರೆಸ್ ನಾಯಕ ಎಚ್‌ಕೆ ಪಾಟೀಲ್ ಕೊಟ್ಟ ದೂರುನ್ನು ಮಾನವ ಹಕ್ಕುಗಳ ಆಯೋಗ ಮಾನ್ಯ ಮಾಡಿದ್ದು, ರಾಜ್ಯ ಸರ್ಕಾರದ ವಿರುದ್ಧ ವಿಚಾರಣೆ ಮುಂದಾಗಿದೆ.

ಬೆಂಗಳೂರು, (ಆ.01): ಕೊರೋನಾ ಸೋಂಕಿನಿಂದ ಮೃತಪಪಟ್ಟವರ ಅಂತ್ಯ ಸಂಸ್ಕಾರವನ್ನು ಗೌರವಯುತವಾಗಿ ನಡೆಸುತ್ತಿಲ್ಲ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಲಿದೆ ಎಂದು ಆರೋಪಿಸಿ ಮಾಜಿ ಸಚಿವ ಎಚ್.ಕೆ.ಪಾಟೀಲ್ ನೀಡಿದ ದೂರನ್ನು ಮಾನವ ಹಕ್ಕುಗಳ ಆಯೋಗ ವಿಚಾರಣೆ ಕೈಗೆತ್ತಿಕೊಂಡಿದೆ.

ಈ ಸಂಬಂದ ರಾಜ್ಯ ಸರ್ಕಾರದ ವಿರುದ್ಧ ಪ್ರಕರಣ ದಾಖಲಿಸಿರುವ ಮಾನವ ಹಕ್ಕುಗಳ ಆಯೋಗ ಅಧ್ಯಕ್ಷ ಡಿ.ಎಚ್.ವಘೇಲಾ ವಿಚಾರಣೆಗೆ ಹಾಜರಾಗಿ ಇನ್ನಷ್ಟು ಮಾಹಿತ ಹಾಗೂ ದಾಖಲೆಗಳನ್ನುಸಲ್ಲಿಸುವಂತೆ ಎಚ್.ಕೆ.ಪಾಟೀಲರಿಗೆ ಸೂಚಿಸಿದ್ದಾರೆ. 

ಬೆಂಗಳೂರಿನಲ್ಲಿ 10 ಸಾವಿರ ಕೊರೋನಾ ಸೋಂಕಿತರು ನಾಪತ್ತೆ: ಹೆಚ್.ಕೆ. ಪಾಟೀಲ

ಎಚ್.ಕೆ.ಪಾಟೀಲ ದೂರಿನನ್ವಯ  ಮಾನವಹಕ್ಕುಗಳ ಆಯೋಗ ಜುಲೈ 28 ರಂದು ಸಭೆ ಮಾಡಿದ್ದು, ಸಭೆಯಲ್ಲಿ ವಿಚಾರಣೆಗೆ ತಿರ್ಮಾನ ಕೈಗೊಂಡಿತ್ತು.

ಕರ್ನಾಟಕದಲ್ಲಿ ಕೋವಿಡ್ ರೋಗಿಗಳಿಗೆ ಸೂಕ್ತವಾದ ಅಂಬ್ಯುಲೆನ್ಸ್ ವ್ಯವಸ್ಥೆ ಸಿಗುತ್ತಿಲ್ಲ. ಸಕಾಲಕ್ಕೆ ರೋಗಿಗಳನ್ನು ಆಸ್ಪತ್ರೆಗೆ ಸೇರಿಸಲಾಗ್ತಿಲ್ಲ .ಅಂತ ಆಯೋಗಕ್ಕೆ ಮಾಹಿತಿ ಒದಗಿಸಲಾಗಿತ್ತು. ಜೊತೆಗೆ ಮೃತ ರೋಗಿಗಳನ್ನು ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡ್ತಿಲ್ಲ ಅಂತ ಪ್ರಸ್ತಾಪಿಸಲಾಗಿತ್ತು. ದೂರಿನಲ್ಲಿ ಇರುವ ಎಲ್ಲಾ ವಿವರಗಳನ್ನು ಮಾನ್ಯ ಮಾಡಿರುವ ರಾಜ್ಯ ಮಾನವಹಕ್ಕುಗಳ ಆಯೋಗ, ಸರ್ಕಾರದ ವಿರುದ್ಧ ವಿಚಾರಣೆ ನಡೆಸುವುದಾಗಿ ತಿಳಿಸಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ