
ಮಂಡ್ಯ, (ಸೆ.16): ಕರ್ನಾಟಕದ ದುಡ್ಡೆಲ್ಲ ಶ್ರೀಲಂಕಾ ಕ್ಯಾಸಿನೋಗೆ ಹೋಗುತ್ತಿದೆ. ಕ್ಯಾಸಿನೋವನ್ನು ಕರ್ನಾಟಕದಲ್ಲೇ ಓಪನ್ ಮಾಡಿ ನಮ್ಮ ದುಡ್ಡು ನಮ್ಮಲ್ಲೆ ಉಳಿಸಿ ಎಂದು ಜೆಡಿಎಸ್ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.
ಇಂದು (ಬುಧವಾರ) ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ಯಾರ್ಯಾರು ಹೆಚ್ಚಿಗೆ ದುಡ್ಡು ಮಾಡಿದ್ದರೋ ಅವರೆಲ್ಲ ಅಲ್ಲಿ ದುಡ್ಡು ಕಳೆಯುತ್ತಿದ್ದಾರೆ. ಕರ್ನಾಟಕದ ದುಡ್ಡೆಲ್ಲ ಶ್ರೀಲಂಕಾ ಕ್ಯಾಸಿನೋಗೆ ಹೋಗುತ್ತಿದೆ. ಕ್ಯಾಸಿನೋವನ್ನು ಕರ್ನಾಟಕದಲ್ಲೇ ಓಪನ್ ಮಾಡಿ ನಮ್ಮ ದುಡ್ಡು ನಮ್ಮಲ್ಲೆ ಉಳಿಸಿ ಎಂದು ಸರ್ಕಾರ ಸಲಹೆ ಕೊಡಬೇಕೆಂದಿದ್ದೇನೆ ಎಂದರು.
ಡ್ರಗ್ಸ್ ಮಾಫಿಯಾದ ಸಂಪೂರ್ಣ ಚಿತ್ರಣ
ರಾಜಕಾರಣಿಗಳು ಡ್ರಗ್ಸ್ ತೆಗೆದುಕೊಳ್ಳುವ ಬಗ್ಗೆ ನನಗೆ ಗೊತ್ತಿಲ್ಲ. ನಾವು ಜಮೀರ್ ಅವರನ್ನು ಟಾರ್ಗೆಟ್ ಮಾಡುತ್ತಿಲ್ಲ. ನಾವು ಕಾಂಗ್ರೆಸ್ ಪರ ಇದ್ದು ಸರ್ಕಾರ ಮಾಡಿದ್ದವರು. ನಾವು ಯಾಕೆ ಅವರನ್ನು ಟಾರ್ಗೆಟ್ ಮಾಡ್ತೀವಿ ಎಂದು ಇದೆಲ್ಲವೂ ಊಹಾಪೋಹಗಳು ಎಂದು ಸ್ಪಷ್ಟಪಡಿಸಿದರು.
ಇನ್ನು ರಾಜ್ಯ ಬಿಜೆಪಿ ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಕೆಜಿ ಹಳ್ಳಿ, ಡಿಜೆ ಹಳ್ಳಿ ಅಂತ ಶುರು ಮಾಡಿತ್ತು. ಈಗ ಅದು ಮುಗಿದ ಬಳಿಕ ಡ್ರಗ್ಸ್ ವಿಚಾರ ಶುರು ಮಾಡಿದೆ. ರಾಜ್ಯದಲ್ಲಿ ಕಷ್ಟಕರ ಸಮಸ್ಯೆಗಳಿವೆ. ಆದರೆ ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಮಾಡಲಾಗುತ್ತಿದೆ ಎಂದು ಹೇಳಿದರು.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.