ಜಾತಿ ಜನಗಣತಿಯಿಂದ ಸಮಾಜದಲ್ಲಿ ಭಿನ್ನತೆ: ಶಾಸಕ ಸುನೀಲ್ ಕುಮಾರ್ ಆರೋಪ

Published : Oct 02, 2025, 06:59 AM IST
V Sunil Kumar

ಸಾರಾಂಶ

ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಜಾತಿ ಜನಗಣತಿ ಕ್ರಮವು ಸಂಪೂರ್ಣವಾಗಿ ರಾಜಕೀಯ ಉದ್ದೇಶಗಳನ್ನು ಪೂರೈಸುವುದರಲ್ಲದೆ, ಸಮಾಜದಲ್ಲಿ ಭಿನ್ನತೆ ಉಂಟುಮಾಡಲು ಕಾರಣವಾಗಲಿದೆ ಎಂದು ಶಾಸಕ ವಿ. ಸುನೀಲ್ ಕುಮಾರ್ ಆರೋಪಿಸಿದ್ದಾರೆ.

ಕಾರ್ಕಳ (ಅ.02): ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಜಾತಿ ಜನಗಣತಿ ಕ್ರಮವು ಸಂಪೂರ್ಣವಾಗಿ ರಾಜಕೀಯ ಉದ್ದೇಶಗಳನ್ನು ಪೂರೈಸುವುದರಲ್ಲದೆ, ಸಮಾಜದಲ್ಲಿ ಭಿನ್ನತೆ ಉಂಟುಮಾಡಲು ಕಾರಣವಾಗಲಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ವಿ. ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. "ಈ ಜನಗಣತಿ ವೈಜ್ಞಾನಿಕವಾಗಿಲ್ಲ, ಪಾರದರ್ಶಕತೆಯಿಲ್ಲ. ಸರಿಯಾದ ಸಮಯದಲ್ಲಿ, ಸೂಕ್ತ ಸಿದ್ಧತೆಗಳೊಂದಿಗೆ ಗಣತಿ ನಡೆಸಬಹುದಾಗಿದ್ದರೂ, ತರಾತುರಿಯಲ್ಲಿ ಹಾಗೂ ಹಬ್ಬದ ಸಮಯದಲ್ಲಿ ಈ ನಿರ್ಧಾರ ಕೈಗೊಳ್ಳುವುದು ಕಾಂಗ್ರೆಸ್ ಸರ್ಕಾರದ ನಿಜಸ್ವಭಾವವನ್ನು ಬಹಿರಂಗಪಡಿಸುತ್ತದೆ" ಎಂದು ಅವರು ಹೇಳಿದ್ದಾರೆ.

ನವರಾತ್ರಿ ಹಬ್ಬದ ಪವಿತ್ರ ಕಾಲದಲ್ಲಿ ಶಿಕ್ಷಕರನ್ನು ಜನಗಣತಿ ಕಾರ್ಯಕ್ಕೆ ಬಲವಂತವಾಗಿ ನಿಯೋಜಿಸಿರುವುದನ್ನು ಖಂಡಿಸಿದ ಅವರು, "ಶಿಕ್ಷಕರ ಧಾರ್ಮಿಕ ಆಚರಣೆಗಳು ಮತ್ತು ಹಬ್ಬದ ಸಂಭ್ರಮವನ್ನು ಕಸಿದುಕೊಂಡು ಆಡಳಿತಾತ್ಮಕ ಒತ್ತಡಕ್ಕೆ ಒಳಪಡಿಸಿರುವುದು ಹಿಂದು ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ. ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಈ ಪವಿತ್ರ ಸಮಯವನ್ನು ಗುರಿಯಾಗಿಸಿಕೊಂಡಿದೆ" ಎಂದು ಆರೋಪಿಸಿದರು.

ಸಮೀಕ್ಷೆ ತಪ್ಪಾಗುವ ಸಾಧ್ಯತೆ ಇದೆ

ಅವರು ಮುಂದುವರಿದು – ಗಣತಿಗೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ, ಪಾರದರ್ಶಕತೆಯ ಕೊರತೆ ಇದೆ. ಶಿಕ್ಷಕರು ಅಗತ್ಯ ತರಬೇತಿಯನ್ನು ಪಡೆಯದೆ ಈ ಕೆಲಸಕ್ಕೆ ತಳ್ಳಲ್ಪಟ್ಟಿದ್ದಾರೆ. ಅಪರಿಚಿತ ಪ್ರದೇಶಗಳಲ್ಲಿ ಶಿಕ್ಷಕರನ್ನು ನಿಯೋಜಿಸಿರುವುದರಿಂದ ಸಮೀಕ್ಷೆ ತಪ್ಪಾಗುವ ಸಾಧ್ಯತೆ ಇದೆ. ನೆಟ್ವರ್ಕ್ ಸಮಸ್ಯೆಯಿಂದಾಗಿ ಮಾಹಿತಿ ಸಂಗ್ರಹದಲ್ಲಿ ತೊಂದರೆ ಉಂಟಾಗಲಿದೆ. ಹಬ್ಬದ ಒತ್ತಡದಲ್ಲಿ ಸಂಗ್ರಹವಾಗುವ ಮಾಹಿತಿಯ ನಿಖರತೆ ಅನುಮಾನಾಸ್ಪದವಾಗಿದೆ ಎಂದರು.

"ಜಾತಿ ಆಧಾರಿತ ಸಮೀಕ್ಷೆ ಜನರಲ್ಲಿ ವಿಭಜನೆ ಉಂಟುಮಾಡಿ, ಸಮಾಜದ ಸೌಹಾರ್ದತೆಗೆ ಧಕ್ಕೆಯುಂಟುಮಾಡಲಿದೆ. ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್ ರಾಜಕೀಯಕ್ಕಾಗಿ ಸಮಾಜವನ್ನು ಪ್ರಕ್ಷುಬ್ಧಗೊಳಿಸುವ ಪ್ರಯತ್ನ ಮಾಡುತ್ತಿದೆ. ಆದ್ದರಿಂದ, ಈ ಅವೈಜ್ಞಾನಿಕ ಮತ್ತು ಅಪೂರ್ಣ ಸಿದ್ಧತೆಗಳೊಂದಿಗೆ ನಡೆಯುತ್ತಿರುವ ಜಾತಿ ಜನಗಣತಿಯನ್ನು ತಕ್ಷಣವೇ ನಿಲ್ಲಿಸಬೇಕು" ಎಂದು ವಿ. ಸುನೀಲ್ ಕುಮಾರ್ ಒತ್ತಾಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ