ಜಾತಿ ಗಣತಿ ವರದಿ ತರಾತುರಿಯಲ್ಲಿ ಅಂಗೀಕರಿಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Published : Apr 18, 2025, 09:14 PM ISTUpdated : Apr 18, 2025, 09:55 PM IST
ಜಾತಿ ಗಣತಿ ವರದಿ ತರಾತುರಿಯಲ್ಲಿ ಅಂಗೀಕರಿಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಸಾರಾಂಶ

ಜಾತಿ ಗಣತಿ ವರದಿ ತರಾತುರಿಯಲ್ಲಿ ಅಂಗೀಕಾರ ಮಾಡುವುದಿಲ್ಲ. ವರದಿಯ ಸಾಧಕ- ಬಾಧಕಗಳ ಬಗ್ಗೆ ಚರ್ಚೆ ಮಾಡಿಯೇ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.   

ಹುಬ್ಬಳ್ಳಿ (ಏ.18): ಜಾತಿ ಗಣತಿ ವರದಿ ತರಾತುರಿಯಲ್ಲಿ ಅಂಗೀಕಾರ ಮಾಡುವುದಿಲ್ಲ. ವರದಿಯ ಸಾಧಕ- ಬಾಧಕಗಳ ಬಗ್ಗೆ ಚರ್ಚೆ ಮಾಡಿಯೇ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿಗೆ ಪರ-ವಿರೋಧ ಸ್ವಾಭಾವಿಕ. ಯಾವುದೇ ವರದಿ ಬಂದಾಗ ಸರ್ಕಾರ ಅದನ್ನು ನೂರಕ್ಕೆ ನೂರರಷ್ಟು ಒಪ್ಪುವುದಿಲ್ಲ. ಈ ವರದಿಯಿಂದ ರಾಜಕೀಯ ಲಾಭ ನಷ್ಟವೇನೂ ಆಗುವುದಿಲ್ಲ. 

ವರದಿ ಕುರಿತಂತೆ ಕೆಲ ಸಮುದಾಯದವರು ಆಂತರಿಕವಾಗಿ ಇನ್ನೂ ಕೆಲವರು ಬಹಿರಂಗವಾಗಿ ಸಭೆ ನಡೆಸುತ್ತಿದ್ದಾರೆ. ಹೀಗಾಗಿ, ಈ ಕುರಿತು ವಿಶೇಷ ಅಧಿವೇಶನ ಕರೆಯಬೇಕು. ಅಲ್ಲಿ ಬಹಿರಂಗವಾಗಿ ಚರ್ಚೆಯಾಗುವುದು ಒಳಿತು ಎಂದರು. ವರದಿ ಕುರಿತಂತೆ ಶಾಮನೂರ ಶಿವಶಂಕರಪ್ಪ ಮತ್ತಿತರರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಎಲ್ಲರೂ ತಮ್ಮ ಅಭಿಮತ ವ್ಯಕ್ತಪಡಿಸಲು ಸ್ವತಂತ್ರರು. ಸದನದಲ್ಲಿ ಈ ಬಗ್ಗೆ ಚರ್ಚಿಸಿದರೆ ಎಲ್ಲ ವಿಷಯಗಳು ಹೊರಬರುತ್ತವೆ. ಹೀಗಾಗಿ, ವಿಶೇಷ ಅಧಿವೇಶನ ಕರೆಯುವಂತೆ ಅವರು ಆಗ್ರಹಿಸಿದರು.

ರೈತರ ಬಹುದಿನಗಳ ಕನಸು ನನಸು: ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಪ್ರತ್ಯೇಕ ಸಭೆ: ಇನ್ನು ವರದಿ ಕುರಿತಂತೆ ನಮ್ಮ ಪಕ್ಷದಲ್ಲೇ ಪರ ವಿರುದ್ಧದ ಅಭಿಪ್ರಾಯಗಳು ವ್ಯಕ್ತವಾಗಿವೆ. ಪಕ್ಷದ ಜತೆಗೆ ಸಮಾಜದ ಬಗ್ಗೆಯೂ ವಿಚಾರ ಮಾಡಬೇಕಾಗುತ್ತದೆ. ನಮ್ಮಲ್ಲಿ ಚರ್ಚಿಸಿದ ಬಳಿಕ ಹೈಕಮಾಂಡ್‌ಗೆ ಕಳುಹಿಸಿಕೊಡಲಾಗುವುದು ಎಂದು ಸಚಿವರು ಹೇಳಿದರು.

ರಾಜ್ಯಾದ್ಯಂತ ಜನಾಕ್ರೋಶ: ಕೇಂದ್ರ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಕಾಂಗ್ರೆಸ್ ಜನಾಕ್ರೋಶ ಸಮಾವೇಶ ವಿಚಾರ ಕುರಿತಾಗಿ ಮಾತನಾಡಿದ ಅವರು, ಬೆಲೆ ಏರಿಕೆ‌ ಖಂಡಿಸಿ ರಾಜ್ಯಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ವಕ್ಫ್ ಮಸೂದೆಯನ್ನು ರಾಜ್ಯದಲ್ಲಿ ಜಾರಿ ಮಾಡಬೇಕೋ ಬೇಡವೋ ಎನ್ನುವ ಕುರಿತು ಸರ್ಕಾರ ಅಂತಿಮ‌ ನಿರ್ಧಾರ ತೆಗೆದುಕೊಳ್ಳಬೇಕು ಎಂದ ಅವರು, ಸಂಪುಟ ಪುನರ್ ರಚನೆ ವಿಚಾರ ತಮಗೆ ತಿಳಿದಿಲ್ಲ. ಅದು ಸಿಎಂ, ಡಿಸಿಎಂ ವಿವೇಚನೆಗೆ ಬಿಟ್ಟದ್ದು. ಅಲ್ಲದೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ನಮ್ಮ‌ ವ್ಯಾಪ್ತಿಗೆ ಮೀರಿದ್ದು, ಅದನ್ನು ಪಕ್ಷದ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದರು.

ಶಾಸಕ ಯತ್ನಾಳ್‌ ಕಾಂಗ್ರೆಸ್‌ಗೆ ಸೂಟ್ ಆಗಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಸರ್ಕಾರ ಉರುಳಿಸಲು ಸತತ ಪ್ರಯತ್ನ: ರಾಜ್ಯ ಸರ್ಕಾರ ಕೆಡವಲು ಪ್ರಧಾನಿ ಮೋದಿ ಯತ್ನಿಸುತ್ತಾರೆ ಎಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮ ಸರ್ಕಾರದ ಕೊನೆ ದಿನವಿದ್ದರೂ ಅವರು ಕೆಡವಲು ಪ್ರಯತ್ನ ಮಾಡುತ್ತಾರೆ. ಸರ್ಕಾರ ರಚನೆ ಮಾಡಿದ ದಿನದಿಂದಲೂ ಇದನ್ನೇ ಹೇಳುತ್ತಿದ್ದೇನೆ. ನಾವು 140 ಶಾಸಕರಿದ್ದೇವೆ. ಹೀಗಾಗಿ, ನಮಗೆ ಸರ್ಕಾರ ಪತನದ ಭೀತಿ ಇಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ