'ಸಿಬಿಐ, ಐಟಿ, ಇಡಿಯಲ್ಲ ಅವರಪ್ಪಂದಿರೇ ಬಂದರೂ ನನ್ನನ್ನೇನೂ ಮಾಡೋಕಾಗಲ್ಲ'

Published : Oct 19, 2019, 05:05 PM ISTUpdated : Oct 19, 2019, 05:20 PM IST
'ಸಿಬಿಐ, ಐಟಿ, ಇಡಿಯಲ್ಲ ಅವರಪ್ಪಂದಿರೇ ಬಂದರೂ ನನ್ನನ್ನೇನೂ ಮಾಡೋಕಾಗಲ್ಲ'

ಸಾರಾಂಶ

 ನಾನು ದೊಡ್ಡ ದೊಡ್ಡ ಇನ್‌ಸ್ಟಿಟ್ಯೂಟ್‌ ಇಟ್ಟುಕೊಂಡಿಲ್ಲ, ಫ್ಯಾಕ್ಟರಿ ಇಟ್ಟುಕೊಂಡಿಲ್ಲ, ಮೈಸೂರಿನಲ್ಲಿ ಸಿನಿಮಾ ಹಂಚಿಕೆದಾರನಾಗಿ ಮಾಡ್ತಿದ್ದಂಥ ವ್ಯವಹಾರನೂ ನಿಂತೋಗಿದೆ| ಸಿಬಿಐ, ಐಟಿ, ಇಡಿಯಲ್ಲ ಅವರಪ್ಪಂದಿರೇ ಬಂದರೂ ನನ್ನನ್ನೇನೂ ಮಾಡೋಕಾಗಲ್ಲ| 

ಬೆಂಗಳೂರು[ಅ.19]: ‘ಸಿಬಿಐಯಲ್ಲ, ಐಟಿ, ಇಡಿಯಲ್ಲ, ಅವರ ಅಪ್ಪಂದಿರೇ ಬರಲಿ ನನ್ನನ್ನು ಯಾರೂ ಏನೂ ಮಾಡೋಕೆ ಆಗಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

"

ತಾಲೂಕಿನ ಬಸವನಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ನಾನು ದೊಡ್ಡ ದೊಡ್ಡ ಇನ್‌ಸ್ಟಿಟ್ಯೂಟ್‌ ಇಟ್ಟುಕೊಂಡಿಲ್ಲ, ಫ್ಯಾಕ್ಟರಿ ಇಟ್ಟುಕೊಂಡಿಲ್ಲ, ಮೈಸೂರಿನಲ್ಲಿ ಸಿನಿಮಾ ಹಂಚಿಕೆದಾರನಾಗಿ ಮಾಡ್ತಿದ್ದಂಥ ವ್ಯವಹಾರನೂ ನಿಂತೋಗಿದೆ. ಯಾವುದೇ ವ್ಯವಹಾರಗಳು ಇಲ್ಲದ್ದರಿಂದ ಧೈರ್ಯವಾಗಿದ್ದೇನೆ ಎಂದರು.

ದೇಶದಲ್ಲಿ ಹಸಿವಿನಿಂದ ಸಾಯುವವರ ಸಂಖ್ಯೆ ಹೆಚ್ಚಾಗಿದೆ. ದಿನಕ್ಕೆ ಎರಡು ಹೊತ್ತು ಊಟಕ್ಕಿಲ್ಲದೆ ಜನ ಸಾಯುತ್ತಿದ್ದರೆ, ಶ್ರೀಲಂಕಾ ಹಾಗೂ ಪಾಕಿಸ್ತಾನ ದೇಶಗಳು ನಮಗಿಂತಲೂ ಉತ್ತಮವಾಗಿವೆ. ಮೋದಿ ಪ್ರಧಾನಿಯಾದರೆ ದೇಶದಲ್ಲಿ ಭಾರಿ ಬದಲಾವಣೆ ಆಗುತ್ತದೆ ಎಂದು ಕೂಗು ಹಾಕುತ್ತಾರೆ. ಆದರೆ, ಈಗ ದೇಶದ ಸ್ಥಿತಿ ದಯನೀಯವಾಗಿದೆ ಎಂದು ವ್ಯಂಗ್ಯವಾಡಿದರು.

ನನ್ನಲ್ಲಿ ಬಂದು ದೂರು ನೀಡಲಿ: ಸಾಲಮನ್ನಾ ವಿಚಾರದಲ್ಲಿ ಬ್ಯಾಂಕ್‌ ಅಧಿಕಾರಿಗಳು ನಿರ್ಲಕ್ಷ್ಯ ತೋರಿದರೆ ರೈತರು ನೇರವಾಗಿ ನನ್ನ ಮನೆಗೆ ಬಂದು ದೂರು ನೀಡಿದರೆ ಅಂಥವರನ್ನು ಅಧಿಕಾರ ಇಲ್ಲದಿದ್ದರೂ ಜೈಲಿಗೆ ಕಳುಹಿಸುತ್ತೇನೆ ಎಂದು ಇದೇ ವೇಳೆ ಕುಮಾರಸ್ವಾಮಿ ಎಚ್ಚರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!