ಸಿಡಿ ಲೇಡಿಯ ಮತ್ತೊಂದು ವಿಡಿಯೋ ರಿಲೀಸ್​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಯುವತಿ!

Published : Mar 27, 2021, 10:17 PM ISTUpdated : Mar 27, 2021, 10:23 PM IST
ಸಿಡಿ ಲೇಡಿಯ ಮತ್ತೊಂದು ವಿಡಿಯೋ ರಿಲೀಸ್​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಯುವತಿ!

ಸಾರಾಂಶ

ಅಶ್ಲೀಲ ಸಿಡಿಯಲ್ಲಿ ಕಾಣಿಸಿಕೊಂಡಿರುವ ಯುವತಿ ಸಾಲು ಸಾಲು ವಿಡಿಯೋಗಳನ್ನು ಹರಿಬಿಡಲಾರಂಭಿಸಿದ್ದು, ಇದೀಗ ಡಿಕೆಶಿ ಮೇಲೆ ಆರೋಪ ಕೇಳಿಬರುತ್ತಿದ್ದಂತೆಯೇ ಸ್ಪಷ್ಟೀಕರಣ ಕೊಟ್ಟಿದ್ದಾಳೆ.

ಬೆಂಗಳೂರು, (ಮಾ.27): ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಕುಟುಂಬಸ್ಥರು ಮಾಧ್ಯಮದ ಎದುರು ಡಿಕೆ ಶಿವಕುಮಾರ್​ ಅವರೇ ನಮ್ಮ ಮಗಳನ್ನು ಒತ್ತೆಯಾಳು ಮಾಡಿಕೊಂಡಿದ್ದಾರೆ ಗಂಭೀರ ಆರೋಪ ಮಾಡಿದ್ದಾರೆ.

ಇದರ ಬೆನ್ನಲ್ಲೇ ಸ್ವತಃ ಯುವತಿ ಮತ್ತೊಂದು ವಿಡಿಯೋ ಹರಿಬಿಟ್ಟಿದ್ದು, ನನ್ನ ಕುಟುಂಬಸ್ಥರ ಮೇಲೆ ಅವರ ಪ್ರಭಾವ ಬೀರಿ ಅವರ ಬಾಯಲ್ಲಿ ಸುಳ್ಳು ಹೇಳಿಸಲಾಗುತ್ತಿದೆ ಎಂದು ದೂರಿದ್ದಾಳೆ.

 ಸಿ.ಡಿ ಲೇಡಿ ಪೋಷಕರ ಸುದ್ದಿಗೋಷ್ಠಿ: ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ

ನಿಜವಾಗಿಯೂ ಅನ್ಯಾಯವಾಗಿರುವುದು ನನಗೆ. ಮೋಸ ಮಾಡಿರುವವರು ಅವರು. ಅವರ ಮನೆಯವರನ್ನ ಯಾರೂ ಕರೆದುಕೊಂಡು ಹೋಗಿ ವಿಚಾರಣೆ ಮಾಡುತ್ತಿಲ್ಲ. ಅದರ ಬದಲು ನಮ್ಮ ಮನೆಯವರನ್ನು ಕರೆದುಕೊಂಡು ಹೋಗಿ ಏನೇನೋ ಹೇಳಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾಳೆ.
 
ಈ ಪ್ರಕರಣನ ಬೇರೆಯದ್ದೇ ರೀತಿಯಲ್ಲಿ ಟರ್ನ್​ ಮಾಡಲಾಗುತ್ತಿದೆ. ನ್ಯಾಯ ಸಿಗಬೇಕಾಗಿರುವುದು ನನಗೆ, ಮೊದಲು ನನ್ನ ಬಗ್ಗೆ ಮಾತನಾಡಲಿ. ಅದನ್ನು ಬಿಟ್ಟು ಅವರಿವರ ಬಗ್ಗೆ ಮಾತನಾಡುವುದು ಬೇಡ. ನನಗೆ ಅಲ್ಲಿ ಬಂದು ಹೇಳಿಕೆ ಕೊಡಲು ಹೆದರಿಕೆಯಾಗುತ್ತಿದೆ ಎಂದಿದ್ದಾಳೆ.

'11 ಸಾಕ್ಷಿಗಳಿವೆ..ಮಹಾನ್ ನಾಯಕನ ಹೆಸರು ಬಹಿರಂಗ.. 'ನಾನು ಗಂಡು..ಡಿಕೆಶಿ..!'

ಇಷ್ಟೊಂದು ಪ್ರಭಾವ ಬೀರಿ ನನ್ನ ಅಪ್ಪ ಅಮ್ಮನ ಬಾಯಿಯಲ್ಲೇ ಏನೇನೋ ಹೇಳಿಸಿದ್ದಾರೆ. ನಾನು ಬಂದರೆ ಇನ್ನು ಏನೇನು ಆಗುತ್ತದೆಯೋ? ಆದ್ದರಿಂದ ನಾನು ಸಿಎಂ ಯಡಿಯೂರಪ್ಪನವರಿಗೆ, ಗೃಹ ಸಚಿವ ಬೊಮ್ಮಾಯಿ ಅವರಿಗೆ, ಸಿದ್ದರಾಮಯ್ಯ ಅವರಿಗೆ, ಡಿಕೆ ಶಿವಕುಮಾರ್ ಅವರಿಗೆ ರಮೇಶ್​ ಕುಮಾರ್​ ಅವರಿಗೆ ಮನವಿ ಮಾಡ್ತೀನಿ. ನಾನು ನೇರವಾಗಿ ಬಂದು ನ್ಯಾಯಾಧೀಶರ ಎದುರಿಗೇ ಹೇಳಿಕೆ ಕೊಡ್ತೀನಿ. ಇದಕ್ಕೆ ನನಗೆ ಸಹಾಯ ಮಾಡಿ ಎಂದು ಯುವತಿ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾಳೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!