ಬಿಜೆಪಿ ಶಾಸಕನ ನೇತೃತ್ವದಲ್ಲಿ ಸಂಭ್ರಮಾಚರಣೆ, ಮತ್ತೊಂದು ಬೇಡಿಕೆ ಇಟ್ಟ ಮರಾಠಿಗರು..!

Published : Nov 16, 2020, 07:06 PM IST
ಬಿಜೆಪಿ ಶಾಸಕನ ನೇತೃತ್ವದಲ್ಲಿ ಸಂಭ್ರಮಾಚರಣೆ, ಮತ್ತೊಂದು ಬೇಡಿಕೆ ಇಟ್ಟ ಮರಾಠಿಗರು..!

ಸಾರಾಂಶ

ಬೆಳಗಾವಿಯಲ್ಲಿ ಮರಾಠ ಸಮುದಾಯದ ಮುಖಂಡರಿಂದ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ರಾಜ್ಯ ಸರ್ಕಾರದ ಮುಂದೆ ಮತ್ತೊಂದು ಡಿಮ್ಯಾಂಡ್ ಇಟ್ಟಿದ್ದಾರೆ.

ಬೆಳಗಾವಿ, (ನ.16): ಉಪ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಸಿಎಂ ಯಡಿಯೂರಪ್ಪ ಅವರಿಗೆ ಇನ್ನೆರಡು ಬೈ ಎಲೆಕ್ಷನ್ ಎದುರಾಗುತ್ತಿದ್ದ ಇದಕ್ಕೆ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಮೊದಲ ಬಾಗವಾಗಿ ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಅದಕ್ಕೆ ಇಡೀ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದೆ. ಜಾತಿ ಆಧಾರಿತ ಪ್ರಾಧಿಕಾರ ಅಥವಾ ಭಾಷಾ ಅಲ್ಪಸಂಖ್ಯಾತರಿಗೆ ಪ್ರಾಧಿಕಾರ ರಚನೆ ಮಾಡಬಾರದು ಎಂದು ತೀವ್ರ ವಿರೋಧ ವ್ಯಕ್ತವಾಗಿದೆ.

ಮತ್ತೊಂದೆಡೆ ಬಯಸದೇ ಬಂದ ಭಾಗ್ಯದಿಂದ ಬೆಳಗಾವಿಯಲ್ಲಿ ಮರಾಠ ಸಮುದಾಯದ ಮುಖಂಡರಿಂದ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ಮರಾಠ ಅಭಿವೃದ್ಧಿ ಮಂಡಳಿ ಮಾಡಿ ಸಂಕಷ್ಟಕ್ಕೆ ಸಿಲುಕಿದ ಬಿಎಸ್‌ವೈ

ಹೌದು...ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ನೇತೃತ್ವದಲ್ಲಿ  ನಗರದ ಸಂಭಾಜಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಸಂಭ್ರಮಾಚರಣೆ ಮಾಡಲಾಗಿದೆ.

ಇನ್ನು ಇದೇ ವೇಳೆ ಬೆಳಗಾವಿಯಲ್ಲೇ ಮರಾಠ ಅಭಿವೃದ್ಧಿ ಪ್ರಾಧಿಕಾರ ಕಚೇರಿ ಸ್ಥಾಪನೆಗೆ ಆಗ್ರಹಿಸಿದರು. ಬಹುದಿನಗಳ ಬೇಡಿಕೆ ಈಡೇರಿದೆ ಎಂದ ಬಿಜೆಪು ಶಾಸಕ ಅನಿಲ್ ಬೆನಕೆ, ಮರಾಠ ಸಮುದಾಯಕ್ಕೆ ಸಿಎಂ ಬಿಎಸ್‌ವೈ ದೀಪಾವಳಿ ಉಡುಗೊರೆ ನೀಡಿದ್ದಾರೆ. 
ಇದರಿಂದ ಮರಾಠ ಸಮುದಾಯಕ್ಕೆ ಹರ್ಷವಾಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್
ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ