ಅರಾಜಕತೆ ಸೃಷ್ಟಿಸಿದ್ರೆ ಕಾಂಗ್ರೆಸ್ ವಿರುದ್ಧ ಕೇಂದ್ರ ಕ್ರಮ: ಸದಾನಂದಗೌ

Published : Aug 23, 2024, 04:25 AM IST
ಅರಾಜಕತೆ ಸೃಷ್ಟಿಸಿದ್ರೆ ಕಾಂಗ್ರೆಸ್ ವಿರುದ್ಧ ಕೇಂದ್ರ ಕ್ರಮ: ಸದಾನಂದಗೌ

ಸಾರಾಂಶ

ಸಿಎಂ ಸಿದ್ದರಾಮಯ್ಯಗೆ ನೈತಿಕತೆಯಿದ್ದರೆ ರಾಜೀನಾಮೆ ನೀಡಿ ಮುಡಾ ಪ್ರಕರಣದ ತನಿಖೆ ಎದುರಿಸಲಿ. ರಾಜ್ಯಪಾಲರು ಬೆದರುಗೊಂಬೆ ಅಲ್ಲ ಸಾಂವಿಧಾನಿಕ ಹುದ್ದೆಯಲ್ಲಿದ್ದಾರೆ ಎಂದ ಮಾಜಿ ಸಿಎಂ ಸದಾನಂದಗೌಡ

ತುಮಕೂರು(ಆ.23): ರಾಜ್ಯಪಾಲರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡುವುದನ್ನು ಕಾಂಗ್ರೆಸ್ ನಾಯಕರು ನಿಲ್ಲಿಸಬೇಕು. ರಾಜ್ಯದಲ್ಲಿ ಹೀಗೆ ಅರಾಜಕತೆ ಸೃಷ್ಟಿಸಿದರೆ ಕೇಂದ್ರ ಸರ್ಕಾರ ಖಂಡಿತವಾಗಿಯೂ ಕ್ರಮ ಕೈಗೊಳ್ಳಲು ಆಲೋಚನೆ ಮಾಡುತ್ತದೆ ಎಂದು ಮಾಜಿ ಸಿಎಂ ಸದಾನಂದಗೌಡ ಎಚ್ಚರಿಕೆ ನೀಡಿದರು. 

ನಗರದಲ್ಲಿ ಗುರುವಾರ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿ, ಸಿಎಂ ಸಿದ್ದರಾಮಯ್ಯಗೆ ನೈತಿಕತೆಯಿದ್ದರೆ ರಾಜೀನಾಮೆ ನೀಡಿ ಮುಡಾ ಪ್ರಕರಣದ ತನಿಖೆ ಎದುರಿಸಲಿ. ರಾಜ್ಯಪಾಲರು ಬೆದರುಗೊಂಬೆ ಅಲ್ಲ ಸಾಂವಿಧಾನಿಕ ಹುದ್ದೆಯಲ್ಲಿದ್ದಾರೆ ಎಂದರು.

ಸಿದ್ದರಾಮಯ್ಯನವರೇ 40 ವರ್ಷದ ನಿಮ್ಮ ರಾಜಕೀಯ ಜೀವನದ ಕಪ್ಪುಚುಕ್ಕೆಯನ್ನು ವೈಟ್ನರ್ ಅಳಿಸೀತಾ?: ಕೇಂದ್ರ ಸಚಿವ ಎಚ್‌ಡಿಕೆ

ರಾಜ್ಯದ ಆಡಳಿತ ಯಂತ್ರ ದುರುಪಯೋಗವಾದಾಗ, ಸರ್ಕಾರದ ಖಜಾನೆ ಲೂಟಿಯಾದಾಗ ರಾಜ್ಯಪಾಲರು ಕಾನೂನಾತ್ಮಕ ಕಾರ್ಯಾಚರಣೆ ಮಾಡುತ್ತಾರೆ. ನಿಮ್ಮ ಕರ್ಮಕಾಂಡವನ್ನು ಮುಚ್ಚಿಕೊಳ್ಳಲು ರಾಜ್ಯಪಾಲರ ವಿರುದ್ಧ ಹೀನಾಯವಾಗಿ ನಡೆದುಕೊಳ್ಳುತ್ತಿರುವುದು ಖಂಡನೀಯ. ಸಂವಿಧಾನ ಮತ್ತು ದೇಶ ವಿರೋಧಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ವಾಗ್ದಾಳಿ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಧ್ಯೆ ಖುರ್ಚಿ ಕಾದಾಟ ಇಲ್ಲ: ಬಸವರಾಜ ರಾಯರೆಡ್ಡಿ
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್