'ನಾನೇಕೆ ಕೇಂದ್ರದ ವಿರುದ್ಧ ಮಾತಾಡಲಿ, ನಾನು ಹೇಳಿದ್ದು ಹಳೆ ಕತೆ'

Published : Mar 29, 2021, 06:07 PM ISTUpdated : Mar 29, 2021, 06:12 PM IST
'ನಾನೇಕೆ ಕೇಂದ್ರದ ವಿರುದ್ಧ ಮಾತಾಡಲಿ, ನಾನು ಹೇಳಿದ್ದು ಹಳೆ ಕತೆ'

ಸಾರಾಂಶ

ಸಚಿವ ಮಾಧುಸ್ವಾಮಿ ಕೇಂದ್ರದ ವಿರುದ್ದ ಹೇಳಿಕೆ ವಿಚಾರ/ ತುಮಕೂರಿನಲ್ಲಿ ಸ್ಪಷ್ಟನೆ ನೀಡಿದ ಮಾಧುಸ್ವಾಮಿನಾನು ಈ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿಲ್ಲ./ ಹಿಂದಿನ ಕೇಂದ್ರ ಸರ್ಕಾರದ ವಿರುದ್ದ ಮಾತನಾಡಿದ್ದೆ/ ಸೆಮಿನಾರ್ ನಲ್ಲಿ ನನ್ನ ಅಭಿಪ್ರಾಯ ಹೇಳಿದ್ದೆ, ಅದು ಸೆಮಿನಾರ್ ಗೆ ಮಾತ್ರ ಸೀಮಿತ/ ಹಿಂದಿನಿಂದ ಇಂದಿನ ವರೆಗಿನ ಕೇಂದ್ರ ಸರಕಾರ ಒಕ್ಕೂಟ ವ್ಯವಸ್ಥೆ ಕುರಿತು ತೆಗೆದುಕೊಳ್ಳುವ ನಿರ್ಧಾರ ಬಗ್ಗೆ ಮಾತನಾಡಿದೆ.

ತುಮಕೂರು(ಮಾ.  29)  ಸಚಿವ ಮಾಧುಸ್ವಾಮಿ ಕೇಂದ್ರದ ವಿರುದ್ದ ಹೇಳಿಕೆ ನೀಡಿದ್ದಾರೆ ಎಂಬುದು ದೊಡ್ಡ ಚರ್ಚೆಯಾಗಿತ್ತು. ತುಮಕೂರಿನಲ್ಲಿ ಇದಕ್ಕೆ ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ನಾನು ಈ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿಲ್ಲ. ಹಿಂದಿನ ಕೇಂದ್ರ ಸರ್ಕಾರದ ವಿರುದ್ದ ಮಾತನಾಡಿದ್ದೆ. ಸೆಮಿನಾರ್ ನಲ್ಲಿ ನನ್ನ ಅಭಿಪ್ರಾಯ ಹೇಳಿದ್ದೆ, ಅದು ಸೆಮಿನಾರ್ ಗೆ ಮಾತ್ರ ಸೀಮಿತ. ಹಿಂದಿನಿಂದ ಇಂದಿನ ವರೆಗಿನ ಕೇಂದ್ರ ಸರಕಾರ ಒಕ್ಕೂಟ ವ್ಯವಸ್ಥೆ ಕುರಿತು ತೆಗೆದುಕೊಳ್ಳುವ ನಿರ್ಧಾರ ಬಗ್ಗೆ ಮಾತನಾಡಿದ್ದೆ ಎಂದು ಹೇಳಿದ್ದಾರೆ.

'ಅಷ್ಟಕ್ಕೂ ಮಾಧುಸ್ವಾಮಿ ಹೇಳಿದ್ದು ಏನು?'

ಹಾಗಂತ ಮೋದಿ ಸರ್ಕಾರದ ವಿರುದ್ದ ಮಾತನಾಡಿಲ್ಲ. ಪೂರ್ತಿ ಭಾಷಣ ಕೇಳಿ ನೋಡಿ. ಕಳೆದ 70 ವರ್ಷದ ಆಡಳಿತ ವ್ಯವಸ್ಥೆ ಬಗ್ಗೆ ಮಾತನಾಡಿದ್ದೆ. ನಾನು‌ಬಿಜೆಪಿ ಸಚಿವನಾಗಿ ಸರ್ಕಾರದ ವಿರುದ್ಧ ಮಾತನಾಡುತ್ತೇನಾ?  ಸಿದ್ದರಾಮಯ್ಯರು ಅದನ್ನ ತಪ್ಪಾಗಿ ತಿಳಿದು ಕೊಂಡಿದ್ದಾರೆ ಎಂದು ಮಾಧುಸ್ವಾಮಿ  ಹೇಳಿದ್ದಾರೆ.

ಕೇಂದ್ರ ಸರ್ಕಾರಗಳು ರಾಜ್ಯಗಳ ಅಧಿಕಾರವನ್ನು ಕಸಿದುಕೊಳ್ಳುತ್ತಿವೆ ಎಂದು ಮಾಧುಸ್ವಾಮಿ ಹೇಳಿದ್ದಾರೆ ಎಂಬುದು ವರದಿಯಾಗಿತ್ತು. ಈ ಬಗ್ಗೆ ಸಚಿವರು ನೀಡಿದ ಸ್ಪಷ್ಟನೆಯನ್ನು ನಿಮ್ಮ  ಮುಂದೆ ಇಟ್ಟಿದ್ದೆವೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ